ಬೆಂಗಳೂರು | ಪತ್ನಿಯ ನಂಬರ್ ಕೇಳಿದ ಸ್ನೇಹಿತನಿಗೆ ಥಳಿಸಿದ ರೌಡಿಶೀಟರ್‌; 10 ಮಂದಿಯಿಂದ ಮನೆಗೆ ದಾಳಿ

Date:

Advertisements

ಪತ್ನಿಯ ನಂಬರ್ ಕೇಳಿದ ಸ್ನೇಹಿತನಿಗೆ ರೌಡಿಶೀಟರ್‌ನೊಬ್ಬ ಧಳಿಸಿದ್ದು, ಬಳಿಕ ಹಲ್ಲೆಗೊಳಗಾದ ವ್ಯಕ್ತಿ 10 ಮಂದಿ ಗುಂಪಿನೊಂದಿಗೆ ರೌಡಿಶೀಟರ್ ಮನೆಗೆ ತೆರಳಿ ದಾಳಿ ನಡೆಸಿದ ಘಟನೆ ಬೆಂಗಳೂರಿನ ಹೊಯ್ಸಳ ನಗರದಲ್ಲಿ ನಡೆದಿದೆ.

ಬೆಂಗಳೂರಿನ ಚಂದ್ರಾಲೇಔಟ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಮೇಶ್ ಮತ್ತು ರೌಡಿಶೀಟರ್ ಕೆಂಪೇಗೌಡ ಅಲಿಯಾಸ್ ಕೆಂಪ ಇಬ್ಬರು ಸ್ನೇಹಿತರು.

ರಮೇಶ್ ಮತ್ತು ರೌಡಿಶೀಟರ್ ಕೆಂಪ ಇಬ್ಬರು ಬಾರ್‌ಗೆ ತೆರಳಿ ಮಧ್ಯ ಸೇವನೆ ಮಾಡಿದ್ದರು. ಕುಡಿದ ಮತ್ತಿನಲ್ಲಿದ್ದ ರಮೇಶ್, ರೌಡಿಶೀಟರ್ ಕೆಂಪನಿಗೆ ಆತನ ಹೆಂಡತಿಯ ನಂಬರ್ ಕೊಡುವಂತೆ ಕೇಳಿದ್ದಾನೆ. ರೌಡಿಶೀಟರ್ ಕೆಂಪ ಇದಕ್ಕೆ ಕೋಪಗೊಂಡು ರಮೇಶ್‌ಗೆ ಥಳಿಸಿದ್ದಾನೆ.

Advertisements

ಈ ಘಟನೆ ಬಳಿಕ ರೌಡಿಶೀಟರ್ ಕೆಂಪ ಮನೆಗೆ ಬಂದಿದ್ದಾನೆ. ಕೆಂಪನ ಮೇಲೆ ದ್ವೇ‍ಷಕ್ಕೆ ಬಿದ್ದ ರಮೇಶ್ ತನ್ನ ಸಹಚರರಾದ ಮಂಜುನಾಥ್, ಜವರೇಗೌಡ, ಕೃಷ್ಣಮೂರ್ತಿ ಸೇರಿದಂತೆ 10ಕ್ಕೂ ಹೆಚ್ಚು ಮಂದಿಯೊಂದಿಗೆ ಹೊಯ್ಸಳ ನಗರದಲ್ಲಿರುವ ಕೆಂಪನ ಮನೆಗೆ ತೆರಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ | ಟಿಕೆಟ್‌ ಪಡೆಯದೆ ಪ್ರಯಾಣ ಬೆಳೆಸಿದ್ದ 3208 ಪ್ರಯಾಣಿಕರಿಗೆ ದಂಡ

ರಮೇಶ್ ನನ್ನನ್ನು ಯಾಕೆ ಹೊಡೆದೆ ಎಂದು ಕೆಂಪನನ್ನು ಪ್ರಶ್ನಿಸಿದ್ದಾನೆ. ಈ ವೇಳೆ, ಕೆಂಪನ ಮನೆಯ ಮುಂದೆ ಗಲಾಟೆ ಆರಂಭವಾಗಿದೆ. ಗಲಾಟೆ ಸಮಯದಲ್ಲಿ ರಮೇಶ್ ಮತ್ತಿತರ ಮೇಲೆ ಕೆಂಪ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ.

ರಮೇಶ್ ಮತ್ತು ಆತನ ಸಹಚರರು ಕೆಂಪನ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರ ಪರಿಣಾಮ ಮನೆಯ ಕಿಟಕಿ ಗಾಜುಗಳು ಪುಡಿ‌ಪುಡಿಯಾಗಿವೆ. ಮನೆಯ ಬಾಗಿಲು ಮುರಿದಿದೆ.

ಘಟನೆ ಸಂಬಂಧ ಚಂದ್ರಾಲೇಔಟ್ ಠಾಣಾ ಪೊಲೀಸರು ರೌಡಿಶೀಟರ್ ಕೆಂಪನನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X