ಬೆಂಗಳೂರು | ಪರೀಕ್ಷೆ ಬರೆಯುವಾಗ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿ ಆತ್ಮಹತ್ಯೆ

Date:

Advertisements

ಪರೀಕ್ಷೆ ಬರೆಯುವಾಗ ನಕಲು ಮಾಡಿ, ಸಿಕ್ಕಿಬಿದ್ದ ವಿದ್ಯಾರ್ಥಿಯೊಬ್ಬ ಮನನೊಂದು ಕಾಲೇಜಿನ 8ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಿಇಎಸ್‌ ಕಾಲೇಜಿನಲ್ಲಿ ನಡೆದಿದೆ.

ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಇವರು ಮೂಲತಃ ಮಂಗಳೂರಿನವರು. ಬೆಂಗಳೂರಿನ ಪಿಇಎಸ್ ಕಾಲೇಜಿನಲ್ಲಿ ಬಿ.ಟೆಕ್​ ಸೆಕೆಂಡ್ ಸೆಮಿಸ್ಟರ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

ಏನಿದು ಘಟನೆ?

Advertisements

ಬೆಂಗಳೂರಿನ ಪಿಇಎಸ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಆದಿತ್ಯ ಪ್ರಭು ಬಿ.ಟೆಕ್‌ ವಿದ್ಯಾಭ್ಯಾಸ ಮಾಡುತ್ತಿದ್ದರು. ಪರೀಕ್ಷೆಯ ಸಮಯದಲ್ಲಿ ಮೊಬೈಲ್‌ ನೋಡಿಕೊಂಡು ಕಾಪಿ ಮಾಡುತ್ತಿದ್ದನು. ಇದನ್ನು ಗಮನಿಸಿದ ಉಪನ್ಯಾಸಕರು ವಿದ್ಯಾರ್ಥಿಯ ಮೊಬೈಲ್ ಕಿತ್ತುಕೊಂಡು ಪರೀಕ್ಷಾ ಕೊಠಡಿಯಿಂದ ಹೊರಗೆ ಕಳುಹಿಸಿದ್ದಾರೆ.

ಬಳಿಕ ಆದಿತ್ಯ ಅವರ ತಾಯಿಗೆ ಕರೆ ಮಾಡಿ ಮಗ ಪರೀಕ್ಷೆ ವೇಳೆ ನಕಲು ಮಾಡುತ್ತಿದ್ದ ಬಗ್ಗೆ ದೂರು ನೀಡಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ ಕಾಲೇಜಿನ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜುಲೈ 17, 18ರಂದು ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ನಡೆದ ಘಟನೆಯನ್ನು ಪೊಲೀಸರು ಮೃತ ವಿದ್ಯಾರ್ಥಿಯ ಪೋಷಕರಿಗೆ ತಿಳಿಸಿದ್ದಾರೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯನ್ನು ನಡೆಸಿದ ನಂತರ ಪೋಷಕರಿಗೆ ಹಸ್ತಾಂತರ ಮಾಡಲಾಗುವುದು ಎಂದು ದಕ್ಷಿಣ ವಲಯದ ಡಿಸಿಪಿ ಕೃಷ್ಣಕಾಂತ್ ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X