- ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿ ಸರಣಿ ಟ್ವೀಟ್
- ಮಹಿಳೆಯ ಟ್ವೀಟ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್
ಪ್ರಕರಣವೊಂದರಲ್ಲಿ ಹೇಳಿಕೆ ನೀಡಲು ತೆರಳಿದ್ದ ಮಹಿಳೆಯ ಮೇಲೆ ಬೆಂಗಳೂರಿನ ಸುದ್ದನಗುಂಟೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕಿರುಕುಳ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಪೊಲೀಸರು ಮಹಿಳೆಯನ್ನು ಕೇಳಿದ್ದಾರೆ.
ಸಂತ್ರಸ್ತ ಮಹಿಳೆ ಟ್ವಿಟರ್ನಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ. ತನ್ನ ಮೇಲಾದ ದೌರ್ಜನದ ಬಗ್ಗೆ ಹೇಳಿಕೊಂಡಿದ್ದಾರೆ.
ಶೀತಲ್ ಸುಹಾನ ಅಬ್ರಹಾಂ ಎಂಬ ಮಹಿಳೆ ಟ್ವೀಟ್ ಮಾಡಿದ್ದು, “ಏ.8ರಂದು ಸ್ನೇಹಿತನ ಸಹೋದರನ ಪರವಾಗಿ ವರದಕ್ಷಿಣೆ ಪ್ರಕರಣದಲ್ಲಿ ಸಾಕ್ಷಿ ಹೇಳಲು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಗೆ ತೆರಳಿದ್ದೆ. ಈ ವೇಳೆ, ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ ಸ್ವಾಮಿ ಅವರು ನನ್ನ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ. ಜತೆಗೆ ವಾಟ್ಸಾಪ್ ಮೆಸೇಜ್ ಮೂಲಕ ಕಿರುಕುಳ ನೀಡುತ್ತಿದ್ದಾರೆ” ಎಂದು ಆಋಓಪಿಸಿದ್ದಾರೆ.
ಮಹಿಳೆಯ ಟ್ವೀಟ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ, ಈ ಬಗ್ಗೆ ಸಂಪೂರ್ಣ ಮಾಹಿತಿ ಕೇಳಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೊರೊನಾ ನಂತರ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ
ಮಹಿಳೆ ಹೇಳಿರುವುದೇನು?
ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಿತನ ಸಹೋದರನ ಪರವಾಗಿ ಹೇಳಿಕೆ ನೀಡಲು ಠಾಣೆಗೆ ತೆರಳಿದ್ದೆ. ಆದರೆ, ಪೊಲೀಸ್ ಸ್ಟೇಷನ್ ಸಬ್ಇನ್ಸ್ಪೆಕ್ಟರ್ ಮಂಜುನಾಥ್ ಬಿ.ಸಿ ನನ್ನೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಾರೆ.
ಪೋಲೀಸರು ನಾನು ಹೇಳಿಕೆ ನೀಡುವ ವೇಳೆ ಹೇಳಿಕೆಯನ್ನು ತೆಗೆದುಕೊಳ್ಳಲಿಲ್ಲ. ಆದರೆ, ಅವರು ಕರೆ ಮಾಡಿದಾಗ ಬರಲು ತಿಳಿಸಿದರು. ನಾನು ಮನೆಗೆ ಬಂದ ನಂತರ ನನ್ನ ಚಿತ್ರಗಳನ್ನು ಕಳುಹಿಸಲು ಕೇಳಿದರು. ಅವರು ತಡರಾತ್ರಿ ವಾಟ್ಸ್ಆಪ್ನಲ್ಲಿ ಮೆಸೇಜ್ ಕಳುಹಿಸಲು ಪ್ರಾರಂಭಿಸಿದರು. ಆದರೆ, ನಾನು ಅದನ್ನು ನಿರ್ಲಕ್ಷಿಸಿದೆ. ಈ ಘಟನೆಯಿಂದ ನನಗೆ ಭಯವಾಗಿದೆ. ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದೇನೆ. ಈ ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ನನಗೆ ತಿಳಿದಿಲ್ಲ. ದಯವಿಟ್ಟು ಸಲಹೆ ನೀಡಿ ಎಂದು ಟ್ವೀಟ್ ಮಾಡಿದ್ದಾರೆ.