ಬೆಂಗಳೂರು | ಕೊರೊನಾ ನಂತರ ಪಾದಚಾರಿಗಳ ಸಾವಿನ ಸಂಖ್ಯೆಯಲ್ಲಿ ಏರಿಕೆ

Date:

Advertisements
  • 2013ರ ರಸ್ತೆ ಅಪಘಾತಗಳಲ್ಲಿ 382 ಪಾದಚಾರಿಗಳು ಸಾವನ್ನಪ್ಪಿ, 1,403 ಮಂದಿಗೆ ಗಾಯ
  • 2022ರಲ್ಲಿ ನಿಯಮ ಉಲ್ಲಂಘಿಸಿದ 18,144 ಪಾದಚಾರಿಗಳ ವಿರುದ್ಧ ಪ್ರಕರಣ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಂತರ ಮತ್ತೆ ರಸ್ತೆ ಅಪಘಾತಗಳಲ್ಲಿ ಪಾದಚಾರಿಗಳ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.

ನಗರದಲ್ಲಿ ರಸ್ತೆ ಅಪಘಾತಗಳಿಂದ 2022ರಲ್ಲಿ ಒಟ್ಟು 248 ಪಾದಚಾರಿಗಳು ಸಾವನ್ನಪ್ಪಿ,819 ಮಂದಿ ಗಾಯಗೊಂಡಿದ್ದಾರೆ. 2019ರಲ್ಲಿ 272 ಸಾವು ಮತ್ತು 1,197 ಮಂದಿ ಗಾಯಗೊಂಡಿದ್ದರು. 2013ರಲ್ಲಿ 382 ಸಾವು ಮತ್ತು 1,403 ಮಂದಿ ಗಾಯಗೊಂಡಿದ್ದರು.

“ನಗರದಲ್ಲಿ ದ್ವಿಚಕ್ರ ವಾಹನ ಸವಾರರು ನಿರ್ಲಕ್ಷ್ಯವಾಗಿ ವಾಹನ ಚಾಲನೆ ಮಾಡುತ್ತಾರೆ. ದ್ವಿಚಕ್ರ ವಾಹನಗಳನ್ನು ಫುಟ್‌ಪಾತ್‌ಗಳಲ್ಲಿ ಪಾರ್ಕಿಂಗ್ ಮಾಡುವುದು. ಸಿಗ್ನಲ್‌ಗಳನ್ನು ಜಂಪ್‌ ಮಾಡುವುದರಿಂದ ನಗರದಲ್ಲಿರುವ ರಸ್ತೆಗಳು ಮತ್ತು ಫುಟ್‌ಪಾತ್‌ಗಳು ಪಾದಚಾರಿಗಳಿಗೆ ಅಸುರಕ್ಷಿತವಾಗಿಸಿದೆ” ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಟ್ರಾನ್ಸ್‌ಪೋರ್ಟ್ ಸಿಸ್ಟಮ್ಸ್ ಎಂಜಿನಿಯರಿಂಗ್‌ ಪ್ರೊಫೆಸರ್ ಆಶಿಶ್ ವರ್ಮಾ ಹೇಳಿದ್ದಾರೆ.

Advertisements

“ಕಳೆದೆರಡು ವರ್ಷಗಳಿಂದ ನಡೆಯುತ್ತಿರುವ ಮೆಟ್ರೊ ಕಾಮಗಾರಿ ಮತ್ತು ರಸ್ತೆ ದುರಸ್ತಿ ಕಾಮಗಾರಿಗಳಿಂದಾಗಿ ಫುಟ್‌ಪಾತ್‌​ಗಳಲ್ಲಿ ಪಾದಚಾರಿಗಳು ಓಡಾಡಲು ತೊಂದರೆಯಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸುತ್ತಿವೆ. ನಗರದಲ್ಲಿ ಪಾದಚಾರಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ ಮೆಟ್ರೋ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಪಾದಚಾರಿಗಳು ಓಡಾಡುವುದು ಅಸಾಧ್ಯವಾಗಿದೆ. ಹೀಗಾಗಿ, ವಾಹನಕ್ಕೆ ಡಿಕ್ಕಿಯಾಗುವ ಅಪಾಯವನ್ನು ಹೆಚ್ಚಿಸಿದೆ” ಎಂದು ಆಶಿಶ್ ವರ್ಮಾ ತಿಳಿಸಿದ್ದಾರೆ.

2022ರಲ್ಲಿ ಫುಟ್‌ಪಾತ್‌ಗಳಲ್ಲಿ ಸವಾರಿ ಮಾಡಿದ್ದಕ್ಕಾಗಿ 18,144 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದು ಹಿಂದಿನ ವರ್ಷ​​ಕ್ಕಿಂತ ಶೇ. 115.4ರಷ್ಟು ಹೆಚ್ಚಾಗಿದೆ. ಕಳೆದ ವರ್ಷ ಸಂಖ್ಯೆ 8,422 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ನಗರದ ಹಲವೆಡೆ ವಾಹನ ಬಳಸುವವರು ಫುಟ್‌ಪಾತ್ ಮೇಲೆಯೇ ವಾಹನಗಳನ್ನು ನಿಲ್ಲಿಸುತ್ತಾರೆ. ಕಳೆದ ವರ್ಷ, ನಗರದಲ್ಲಿ ವಾಹನ ಬಳಕೆದಾರರ ವಿರುದ್ಧ 1,53,983 ಫುಟ್‌ಪಾತ್ ಪಾರ್ಕಿಂಗ್ ಪ್ರಕರಣಗಳು ದಾಖಲಾಗಿವೆ. 2021ರಲ್ಲಿ 74,851 ಪ್ರಕರಣಗಳಿಂದ ಶೇ. 105 ಹೆಚ್ಚಳವಾಗಿದೆ. ಇದರರ್ಥ ಪಾದಚಾರಿಗಳಿಗೆ ಅವರಿಗೆ ಮೀಸಲಾದ ಪ್ರದೇಶದಲ್ಲಿ ನಡೆದಾಡಲು ಕಡಿಮೆ ಸ್ಥಳಾವಕಾಶವಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೊಳಚೆ ನೀರಿನಿಂದ ಮೀನುಗಳ ಮಾರಣಹೋಮ

ಈ ವರ್ಷ ಈಗಾಗಲೇ ನಗರದಲ್ಲಿ ಸಿಗ್ನಲ್‌ಗಳನ್ನು ಜಂಪ್ ಮಾಡುವ ವಾಹನಗಳ ಸಂಖ್ಯೆಯಲ್ಲಿ ಆತಂಕಕಾರಿ ಹೆಚ್ಚಳ ಕಂಡುಬಂದಿದೆ. ಫೆಬ್ರವರಿ 28 ರವರೆಗೆ, ಸಿಗ್ನಲ್‌ ಜಂಪ್‌ ಮಾಡಿದ ವಾಹನ ಸವಾರರ ವಿರುದ್ಧ 1,61,352 ಪ್ರಕರಣ ದಾಖಲಿಸಲಾಗಿದೆ. 2022 ಮತ್ತು 2021ರ ಅಂಕಿಅಂಶಗಳ ಪ್ರಕಾರ ಕ್ರಮವಾಗಿ 4,20,541 ಮತ್ತು 8,22,529 ಪ್ರಕರಣಗಳನ್ನು ದಾಖಲಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X