ಬೆಂಗಳೂರು | ಪಾರ್ಕಿಂಗ್‌ ವಿಚಾರಕ್ಕೆ ಜಗಳ : ಸಹೋದ್ಯೋಗಿಯ ಕೊಲೆ

Date:

  • ಜನಾರ್ದನ ಭಟ್ ಮತ್ತು ಆರೋಪಿಗಳು ಇಬ್ಬರೂ ಒಂದೇ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು
  • ಭಟ್ ಅವರನ್ನು ಸುಲೈಮಾನ್ ಮತ್ತು ರಿಜ್ವಾನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ

ಬೆಂಗಳೂರಿನ ಶ್ರೀನಿವಾಸಪುರ ಅಪಾರ್ಟ್‌ಮೆಂಟ್‌ವೊಂದರಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ ವಿಚಾರಕ್ಕೆ ಕಿತ್ತಾಡಿಕೊಂಡು ಖಾಸಗಿ ಸಂಸ್ಥೆಯೊಂದರ ಉದ್ಯೋಗಿ (28)ಯನ್ನು ಸಹೋದ್ಯೋಗಿಗಳು ಹತ್ಯೆ ಮಾಡಿದ್ದಾರೆ.

- Advertisement -

ಜನಾರ್ದನ್ ಭಟ್ ಕೊಲೆಯಾದ ದುರ್ದೈವಿ. ಇವರು ಯಲಹಂಕ ಸಮೀಪದ ಕೋಗಿಲುನಲ್ಲಿರುವ ಯುನಿಯೋಕ್ಸ್ ಡಿಜಿಟಲ್ ಸಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದನು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಶ್ರೀನಿವಾಸಪುರದ ಸಾಯಿ ಸಮೃದ್ಧಿ ಅಪಾರ್ಟ್‌ಮೆಂಟ್‌ನಲ್ಲಿರುವ ಬಾಡಿಗೆ ಫ್ಲಾಟ್‌ನಲ್ಲಿ ಯುನಿಯೋಕ್ಸ್ ಡಿಜಿಟಲ್ ಸಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ ಕಂಪನಿಯ ಮಾಲೀಕರು ತಮ್ಮ ಉದ್ಯೋಗಿಗಳಿಗೆ ವಸತಿ ಒದಗಿಸಿದ್ದಾರೆ. ಜನಾರ್ದನ ಭಟ್ ಮತ್ತು ಆರೋಪಿಗಳು ಇಬ್ಬರೂ ಒಂದೇ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು.

ಮಾರ್ಚ್ 29ರಂದು ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಆರೋಪಿಗಳು ತಮ್ಮ ಮೋಟಾರ್ ಬೈಕ್‌ಗಳನ್ನು ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವ ಬಗ್ಗೆ ಭಟ್ ಅವರೊಂದಿಗೆ ಜಗಳವಾಡಿದ್ದರು. ಪಾಷಾ ಮತ್ತು ಇನ್ನೊಬ್ಬ ಬಾಡಿಗೆದಾರರು ವಾಗ್ವಾದದ ಮಧ್ಯಪ್ರವೇಶಿಸಿ ಆರೋಪಿಗಳನ್ನು ತಮ್ಮ ಕೋಣೆಗೆ ಕರೆದೊಯ್ದಿದ್ದರು.

ಮರುದಿನ, ಬೆಳಗ್ಗೆ 9 ಗಂಟೆ ಸುಮಾರಿಗೆ ಪಾಷಾ ಅವರು ಭಟ್ ಅವರು ಇರುವ ಕೋಣೆಗೆ ತೆರಳಿದ್ದಾರೆ. ಈ ವೇಳೆ, ಕೋಣೆಯಲ್ಲಿ ಭಟ್‌ ಅವರ ಕೈಕಾಲುಗಳನ್ನು ಕಟ್ಟಿ, ಬಾಯಿಯನ್ನು ಟೇಪ್‌ನಿಂದ ಮುಚ್ಚಿದ್ದರು. ಕುತ್ತಿಗೆಗೆ ತಂತಿಯನ್ನು ಸುತ್ತಿದ್ದರು. ಭಟ್‌ ಹಾಸಿಗೆಯ ಕೆಳಗೆ ಬಿದ್ದಿದ್ದರು. ಪಾಷಾ ಅವರು ಕೋಣೆಯಲ್ಲಿ ಮೃತ ಸಹೋದ್ಯೋಗಿಯನ್ನು ಪತ್ತೆ ಮಾಡಿ, ಪೊಲೀಸ್‌ರಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೇಡಹಳ್ಳಿಯಲ್ಲಿ ಅಗ್ನಿ ಅವಘಡ : ಚಿಕಿತ್ಸೆ ಫಲಿಸದೆ 7 ಕಾರ್ಮಿಕರು ಸಾವು

ಜನಾರ್ದನ್ ಭಟ್ ಅವರನ್ನು ಸುಲೈಮಾನ್ ಮತ್ತು ರಿಜ್ವಾನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಪರಾರಿಯಾಗಿರುವ ಆರೋಪಿಗಳನ್ನು ಹಿಡಿಯಲು ಯಲಹಂಕ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ಸಂಸ್ಥೆಯ ಮಾಲಕಿ ಹೇಮಲತಾ ಅವರು ಸ್ಥಳಕ್ಕೆ ಧಾವಿಸಿ, ಉದ್ಯೋಗಿ ಮೃತಪಟ್ಟಿರುವುದನ್ನು ಕಂಡು ಟಿವಿ ಮತ್ತು ಏರ್ ಕಂಡಿಷನರ್ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದ, ಸುಲೈಮಾನ್ ಮತ್ತು ರಿಜ್ವಾನ್ ಇಬ್ಬರು ಸೇರಿ ಜನಾರ್ದನ್ ಭಟ್ ಅವರನ್ನು ಕೊಂದಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಸಾವಿನ ಬಗ್ಗೆ ತಮ್ಮ ಉದ್ಯೋಗಿ ಆರೀಫ್ ಪಾಷಾ ಅವರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಭಟ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...