ಬೆಂಗಳೂರು | ಪಾರ್ಕಿಂಗ್‌ ವಿಚಾರಕ್ಕೆ ಜಗಳ : ಸಹೋದ್ಯೋಗಿಯ ಕೊಲೆ

Date:

  • ಜನಾರ್ದನ ಭಟ್ ಮತ್ತು ಆರೋಪಿಗಳು ಇಬ್ಬರೂ ಒಂದೇ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು
  • ಭಟ್ ಅವರನ್ನು ಸುಲೈಮಾನ್ ಮತ್ತು ರಿಜ್ವಾನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ

ಬೆಂಗಳೂರಿನ ಶ್ರೀನಿವಾಸಪುರ ಅಪಾರ್ಟ್‌ಮೆಂಟ್‌ವೊಂದರಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ ವಿಚಾರಕ್ಕೆ ಕಿತ್ತಾಡಿಕೊಂಡು ಖಾಸಗಿ ಸಂಸ್ಥೆಯೊಂದರ ಉದ್ಯೋಗಿ (28)ಯನ್ನು ಸಹೋದ್ಯೋಗಿಗಳು ಹತ್ಯೆ ಮಾಡಿದ್ದಾರೆ.

ಜನಾರ್ದನ್ ಭಟ್ ಕೊಲೆಯಾದ ದುರ್ದೈವಿ. ಇವರು ಯಲಹಂಕ ಸಮೀಪದ ಕೋಗಿಲುನಲ್ಲಿರುವ ಯುನಿಯೋಕ್ಸ್ ಡಿಜಿಟಲ್ ಸಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದನು.  

ಶ್ರೀನಿವಾಸಪುರದ ಸಾಯಿ ಸಮೃದ್ಧಿ ಅಪಾರ್ಟ್‌ಮೆಂಟ್‌ನಲ್ಲಿರುವ ಬಾಡಿಗೆ ಫ್ಲಾಟ್‌ನಲ್ಲಿ ಯುನಿಯೋಕ್ಸ್ ಡಿಜಿಟಲ್ ಸಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ ಕಂಪನಿಯ ಮಾಲೀಕರು ತಮ್ಮ ಉದ್ಯೋಗಿಗಳಿಗೆ ವಸತಿ ಒದಗಿಸಿದ್ದಾರೆ. ಜನಾರ್ದನ ಭಟ್ ಮತ್ತು ಆರೋಪಿಗಳು ಇಬ್ಬರೂ ಒಂದೇ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು.

ಮಾರ್ಚ್ 29ರಂದು ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಆರೋಪಿಗಳು ತಮ್ಮ ಮೋಟಾರ್ ಬೈಕ್‌ಗಳನ್ನು ಕಟ್ಟಡದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸುವ ಬಗ್ಗೆ ಭಟ್ ಅವರೊಂದಿಗೆ ಜಗಳವಾಡಿದ್ದರು. ಪಾಷಾ ಮತ್ತು ಇನ್ನೊಬ್ಬ ಬಾಡಿಗೆದಾರರು ವಾಗ್ವಾದದ ಮಧ್ಯಪ್ರವೇಶಿಸಿ ಆರೋಪಿಗಳನ್ನು ತಮ್ಮ ಕೋಣೆಗೆ ಕರೆದೊಯ್ದಿದ್ದರು.

ಮರುದಿನ, ಬೆಳಗ್ಗೆ 9 ಗಂಟೆ ಸುಮಾರಿಗೆ ಪಾಷಾ ಅವರು ಭಟ್ ಅವರು ಇರುವ ಕೋಣೆಗೆ ತೆರಳಿದ್ದಾರೆ. ಈ ವೇಳೆ, ಕೋಣೆಯಲ್ಲಿ ಭಟ್‌ ಅವರ ಕೈಕಾಲುಗಳನ್ನು ಕಟ್ಟಿ, ಬಾಯಿಯನ್ನು ಟೇಪ್‌ನಿಂದ ಮುಚ್ಚಿದ್ದರು. ಕುತ್ತಿಗೆಗೆ ತಂತಿಯನ್ನು ಸುತ್ತಿದ್ದರು. ಭಟ್‌ ಹಾಸಿಗೆಯ ಕೆಳಗೆ ಬಿದ್ದಿದ್ದರು. ಪಾಷಾ ಅವರು ಕೋಣೆಯಲ್ಲಿ ಮೃತ ಸಹೋದ್ಯೋಗಿಯನ್ನು ಪತ್ತೆ ಮಾಡಿ, ಪೊಲೀಸ್‌ರಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೇಡಹಳ್ಳಿಯಲ್ಲಿ ಅಗ್ನಿ ಅವಘಡ : ಚಿಕಿತ್ಸೆ ಫಲಿಸದೆ 7 ಕಾರ್ಮಿಕರು ಸಾವು

ಜನಾರ್ದನ್ ಭಟ್ ಅವರನ್ನು ಸುಲೈಮಾನ್ ಮತ್ತು ರಿಜ್ವಾನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಪರಾರಿಯಾಗಿರುವ ಆರೋಪಿಗಳನ್ನು ಹಿಡಿಯಲು ಯಲಹಂಕ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

ಸಂಸ್ಥೆಯ ಮಾಲಕಿ ಹೇಮಲತಾ ಅವರು ಸ್ಥಳಕ್ಕೆ ಧಾವಿಸಿ, ಉದ್ಯೋಗಿ ಮೃತಪಟ್ಟಿರುವುದನ್ನು ಕಂಡು ಟಿವಿ ಮತ್ತು ಏರ್ ಕಂಡಿಷನರ್ ತಂತ್ರಜ್ಞರಾಗಿ ಕೆಲಸ ಮಾಡುತ್ತಿದ್ದ, ಸುಲೈಮಾನ್ ಮತ್ತು ರಿಜ್ವಾನ್ ಇಬ್ಬರು ಸೇರಿ ಜನಾರ್ದನ್ ಭಟ್ ಅವರನ್ನು ಕೊಂದಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಸಾವಿನ ಬಗ್ಗೆ ತಮ್ಮ ಉದ್ಯೋಗಿ ಆರೀಫ್ ಪಾಷಾ ಅವರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಭಟ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆ. ಗ್ರಾಮಾಂತರ | ನಟಿ ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟನೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಕನಸಿದ ಪಶು ಆಸ್ಪತ್ರೆ ನೆಲಮಂಗಲದ...

ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ

ಕೇಂದ್ರ ಸರ್ಕಾರ ಹಾಗೂ ನಾನಾ ರಾಜ್ಯಗಳಲ್ಲಿ ಉದ್ಯೋಗ ಮಾಡಿ ನಿವೃತ್ತಿ ಹೊಂದಿ...

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ...

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...