ಬೆಂಗಳೂರು | ಪ್ರೆಷರ್ ಕುಕ್ಕರ್‌ನಲ್ಲಿ ಡ್ರಗ್ಸ್‌ ತಯಾರು ಮಾಡುತ್ತಿದ್ದ ವಿದೇಶಿ ಪ್ರಜೆ ಬಂಧನ

Date:

Advertisements

ವಿದೇಶಿ ಪ್ರಜೆಯೊಬ್ಬ ಮನೆಯಲ್ಲಿ ಅಡುಗೆ ಮಾಡುವ ಪ್ರೆಷರ್ ಕುಕ್ಕರ್ ಮೂಲಕ ಸಿಂಥೆಟಿಕ್ ಡ್ರಗ್ಸ್‌ ತಯಾರಿಸಿ ಮಾರಾಟ ಮಾಡುತ್ತಿದ್ದವನನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಬೆಂಜಮಿನ್ ಬಂಧಿತ ಆರೋಪಿ. ಈತ ಮೂಲತಃ ನೈಜೀರಿಯಾದವನು. ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಈತನಿಂದ ಸದ್ಯ ₹10 ಕೋಟಿ ಮೌಲ್ಯದ 5 ಕೆಜಿ ಎಂಡಿಎಂಎ, ಡ್ರಗ್ಸ್​ ತಯಾರಿಸಲು ಬೇಕಾದ ಕಚ್ಚಾ ಪದಾರ್ಥಗಳು, 5 ಲೀಟರ್ ಪ್ರೆಷರ್ ಕುಕ್ಕರ್, ಸ್ಟೌವ್, ಗ್ಯಾಸ್ ಸಿಲಿಂಡರ್,‌ 1 ಮೊಬೈಲ್ ಫೋನ್, ದ್ವಿಚಕ್ರ ವಾಹನ ಎಂಡಿಎಂಎ ಮತ್ತು ಅದರ ತಯಾರಿಕೆಗೆ ಬಳಸುತ್ತಿದ್ದ ರಾಸಾಯನಿಕ ವಸ್ತುಗಳು ಹಾಗೂ ರಾಸಾನಿಕ ಆಮ್ಲ ಸೇರಿದಂತೆ ಇನ್ನಿತರ ಉಪಕರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ವಿದೇಶಿ ವ್ಯಕ್ತಿ ನಗರದ ಅವಲಹಳ್ಳಿಯಲ್ಲಿ ಬಟ್ಟೆ ವ್ಯಾಪಾರ ಮಾಡುವುದಾಗಿ 2021ರಲ್ಲಿ ಬಾಡಿಗೆ ಮನೆ ಪಡೆದಿದ್ದನು. ಆದರೆ, ಆತನ ಮನೆಯಲ್ಲಿ ಕಚ್ಚಾ ಪದಾರ್ಥಗಳನ್ನು ಬಳಕೆ ಮಾಡಿ ಪ್ರೆಷರ್ ಕುಕ್ಕರ್‌ನಲ್ಲಿ ಸಿಂಥೆಟಿಕ್ ಡ್ರಗ್‌ ತಯಾರು ಮಾಡುತ್ತಿದ್ದನು. ಹೀಗೇ ಮನೆಯಲ್ಲಿ ತಯಾರು ಮಾಡಿದ ಮಾದಕ ವಸ್ತುಗಳನ್ನು ರಾಜ್ಯ, ಅಂತಾರಾಜ್ಯ ಸೇರಿದಂತೆ ವಿದೇಶಗಳಿಗೆ ಮಾರಾಟ ಮಾಡುತ್ತಿದ್ದನು.

Advertisements

ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಈತನನ್ನು ಪೊಲೀಸರು ಬಂಧಿಸಿ 100 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದರು. ಈತನನ್ನು ಬಂಧಿಸಿದ ಬಳಿಕ ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಈತ ತಾನು ಮನೆಯಲ್ಲಿಯೇ ಡ್ರಗ್ ತಯಾರು ಮಾಡುತ್ತಿದ್ದ ಬಗ್ಗೆ ಬಾಯಿ ಬಿಟ್ಟಿದ್ದಾನೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ, “ಆರೋಪಿ ವ್ಯಾಪಾರಿ ವೀಸಾ ಮೂಲಕ ಭಾರತಕ್ಕೆ ಬಂದಿದ್ದಾನೆ. ವೀಸಾ ಅವಧಿಯೂ 2022ರಲ್ಲಿ ಅಂತ್ಯವಾಗಿದೆ. ಆರೋಪಿಯನ್ನು ನವೆಂಬರ್ 20ರವರೆಗೂ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿ ಈ ಹಿಂದೆ ಹೈದರಾಬಾದ್​ನಲ್ಲಿ ಬಂಧನವಾಗಿದ್ದ ಎಂಬ ವಿಚಾರ ತನಿಖೆಯಿಂದ ಗೊತ್ತಾಗಿದೆ” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜಿಮ್‌ ಸೆಂಟರ್‌ನಲ್ಲಿ ಯುವತಿಯ ಖಾಸಗಿ ವಿಡಿಯೋ ಚಿತ್ರೀಕರಣ; ಟ್ರೇನರ್ ಬಂಧನ

ಬಂಧಿತನ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ಎನ್​ಡಿಪಿಎಸ್ ಕಾಯ್ದೆ ಮತ್ತು ವಿದೇಶಿಗರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X