ಬೆಂಗಳೂರು | ಪತ್ನಿಯ ಹತ್ಯೆಗೈದ ಪತಿ ಬಂಧನ

Date:

Advertisements
  • ತನಿಖೆ ನಡೆಸುವ ವೇಳೆ ಮೃತಳ ಗಂಡನ ಅಸಲಿ ಕಥೆ ಬಯಲು
  • ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಎರಡನೇ ಪತ್ನಿಯನ್ನು ತಾನೇ ಕೊಂದು, ಅವಳು ಮಾತನಾಡುತ್ತಿಲ್ಲ ಎಂದು ಗೋಳಾಡುತ್ತ ಆಸ್ಪತ್ರೆಗೆ ಸೇರಿಸಿದ್ದ ದುರುಳ ಪತಿಯನ್ನು ತನಿಖೆ ಬಳಿಕ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಯಶವಂತಪುರದಲ್ಲಿ ಈ ಘಟನೆ ನಡೆದಿದೆ. ಶರತ್ ಎಂಬುವವನು ಈ ಹಿಂದೆ ಮದುವೆ ಆಗಿದ್ದರೂ ಕೂಡಾ ಪ್ರೀಯಾ ಎಂಬುವವರನ್ನು ಎರಡನೇ ಮದುವೆಯಾಗಿದ್ದನು. ಮೊದಲನೇ ಹೆಂಡತಿಯ ಮನೆಗೆ ಹೋಗುತ್ತೀಯಾ ಎಂಬ ವಿಚಾರಕ್ಕೆ ದಂಪತಿ ಮಧ್ಯೆ ಪದೇಪದೆ ಜಗಳವಾಗುತ್ತಿತ್ತು. ಪ್ರಿಯಾ ಸಾವಿನ ಎರಡು ದಿನಗಳ ಹಿಂದೆ ಕೂಡ ದಂಪತಿಯ ಮಧ್ಯೆ ಜಗಳವಾಗಿತ್ತು.

ಜಗಳದ ಸಮಯದಲ್ಲಿ ಶರತ್ ತನ್ನ ಎರಡನೇ ಪತ್ನಿ ಪ್ರೀಯಾಳಿಗೆ ಥಳಿಸಿದ್ದನು. ಗಲಾಟೆ ವೇಳೆ ಪ್ರೀಯಾ ಕೆಳಗೆ ಬಿದ್ದು, ಅಲ್ಲೇ ಸಾವನ್ನಪ್ಪಿದ್ದಳು. ಪತ್ನಿ ಸಾವನ್ನಪ್ಪಿರುವುದನ್ನು ಕಂಡು ಭಯಬೀತನಾದ ಶರತ್ ಈ ಕೊಲೆಯನ್ನು ಮರೆಮಾಚಲು ಅವಳು ಮಾತನಾಡುತ್ತಿಲ್ಲ ಎಂದು ಗೋಳಾಡುತ್ತ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದನು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಿರೂದ್ಯೋಗವನ್ನು ಬಂಡವಾಳ ಮಾಡಿಕೊಂಡ ಆರೋಪಿಯ ಬಂಧನ

ಗಂಡ ಶರತ್‌ನ ಗೋಳಾಟ ನೋಡಲಾಗದೆ ವೈದ್ಯರು ಪ್ರೀಯಾಳಿಗೆ ಚಿಕಿತ್ಸೆ ನೀಡಲು ಕರೆದುಕೊಂಡು ಹೋಗಿದ್ದಾರೆ. ಚಿಕಿತ್ಸೆ ನೀಡುವ ವೇಳೆ ಪ್ರೀಯಾ ಮೃತಳಾಗಿರುವುದು ಬೆಳಕಿಗೆ ಬಂದಿದೆ. ಬಳಿಕ ಪೊಲೀಸರು ಇದು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುವ ವೇಳೆ ಮೃತಳ ಗಂಡನ ಅಸಲಿ ಕಥೆ ಬೆಳಕಿಗೆ ಬಂದಿದೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶರತ್​ನನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತನಿಖೆ ವೇಳೆ ನಡೆದ ಘಟನೆ ಬಗ್ಗೆ ಬಾಯಿ ಬಿಟ್ಟಿದ್ದಾನೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X