ಬೆಂಗಳೂರು | 38 ವರ್ಷದ ಹಿಂದೆ ಸೈಕಲ್ ಕಳ್ಳತನ ಮಾಡಿದ್ದ ಆರೋಪಿಯ ಬಂಧನ

Date:

Advertisements

38 ವರ್ಷದ ಹಿಂದೆ ಕಳ್ಳತನ ಮಾಡಿದ್ದ ಆರೋಪಿಯನ್ನು ಕೊನೆಗೂ ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಪಾಷಾ ಜಾನ್ ಎಂಬುವವರು ತಾವು 22 ವರ್ಷ ವಯಸ್ಸಿನಲ್ಲಿದ್ದಾಗ, ಅಂದರೆ 1985ರಲ್ಲಿ, ಸೈಕಲ್ ಕಳ್ಳತನ ಮಾಡಿದ್ದರು. ಈ ಕಳ್ಳತನ ನಡೆದ ಒಂದೇ ತಿಂಗಳಿಗೆ ಕೆಜಿಎಫ್‌ ಪೊಲೀಸರು ಬಂಧಿಸಿದ್ದರು.

ಪೊಲೀಸ್‌ ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ, ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಬಳಿಕ ಪಾಷಾ ಜಾನ್ ನಾಪತ್ತೆಯಾಗಿದ್ದರು. ಅವರ ಹೆಸರಿನಲ್ಲಿ ಸುಮಾರು 200 ವಾರಂಟ್‌ ಹೊರಡಿಸಲಾಗಿತ್ತು ಎಂದು ವಕೀಲರೊಬ್ಬರು ತಿಳಿಸಿದ್ದಾರೆ.

Advertisements

ಆರೋಪಿ ಪಾಷಾ ಜಾನ್ ಅವರು ಕೆಜಿಎಫ್‌ನಿಂದ ಬೆಂಗಳೂರಿಗೆ ಬಂದು ಇಲ್ಲಿಯೇ ನೆಲೆಸಿದ್ದರು. ನಗರದಲ್ಲಿ ಆಟೋ ರಿಕ್ಷಾ ಓಡಿಸಿ ಜೀವನ ನಡೆಸುತ್ತಿದ್ದರು. ಇದೀಗ ಇವರಿಗೆ 60 ವರ್ಷ ತುಂಬಿದೆ.

ಪಾಷಾ ಅವರು ಕೆಜಿಎಫ್‌ನಿಂದ ಬೆಂಗಳೂರಿಗೆ ಬಂದು ನೆಲೆಸಿದ್ದ ಕಾರಣದಿಂದ ಪೊಲೀಸರು ಅವರನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ ರೈಲು ಸೇವೆ ಪಂಢರಪುರದವರೆಗೆ ವಿಸ್ತರಣೆ

ಆರೋಪಿ ಪತ್ತೆಗಾಗಿ ಮೂವರು ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, ಆರೋಪಿಯ ಸಂಬಂಧಿಕರೊಬ್ಬರು ಆರೋಪಿ ಕೆ.ಆರ್‌.ಪುರಂನಲ್ಲಿ ನೆಲೆಸಿರುವುದಾಗಿ ಮಾಹಿತಿ ನೀಡಿದ್ದಾರೆ. ಆರೋಪಿ ಮನೆಗೆ ತೆರಳಿ ಪೊಲೀಸರು ಆತನನ್ನು ಹಿಡಿದಿದ್ದಾರೆ.

ಈ ವೇಳೆ ಆರೋಪಿಯು, ‘ನಾನು ಕಳ್ಳತನ ಮಾಡಿಲ್ಲ, ತಪ್ಪಾಗಿ ತಿಳಿದುಕೊಳ್ಳಲಾಗಿದೆ’ ಎಂದು ಪೊಲೀಸರಿಗೆ ಹೇಳಿದಾಗ, ಪೊಲೀಸ್ ತಂಡ ಜಾನ್‌ ಅವರ ಬೆರಳಚ್ಚು ಸಂಗ್ರಹಿಸಿ ಆತನೇ ಆರೋಪಿ ಎಂದು ಖಚಿತಪಡಿಸಿಕೊಂಡು ನಂತರ ಆತನನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X