ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ವಿದ್ಯಾರ್ಥಿ ಮೇಲೆ ಲಾಂಗ್ನಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ.
ಸತ್ಯ, ಜೀವನ್, ಅಭಿಷೇಕ್, ರವಿಕುಮಾರ್, ಚಂದನ, ಗೌತಮ್ ಗೌಡ ಹಾಗೂ ಸೂರ್ಯ ಬಂಧಿತ ಆರೋಪಿಗಳು.
ಕಳೆದ ಜೂನ್ 5 ರಂದು ನಾಗರಬಾವಿಯ ಖಾಸಗಿ ಕಾಲೇಜು ವಿದ್ಯಾರ್ಥಿ ದರ್ಶನ್ ಎಂಬುವವರು ಕಾಲೇಜು ಮುಂದೆ ತಮ್ಮ ಸ್ನೇಹಿತರೊಂದಿಗೆ ನಿಂತಿದ್ದರು. ಈ ವೇಳೆ, ಬೈಕ್ನಲ್ಲಿ ಬಂದ ಯುವಕರು ದರ್ಶನ್ ಮೇಲೆ ಲಾಂಗ್ನಿಂದ ಹಲ್ಲೆ ಮಾಡಿದ್ದರು. ಅನ್ನಪೂರ್ಣೆಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
21 ವರ್ಷದ ದರ್ಶನ್ ಬಿಬಿಎ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಹಲ್ಲೆ ಮಾಡಿದ ದೃಶ್ಯಾವಳಿಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆಯಾಗಿತ್ತು. ಸಿಸಿಟಿವಿ ವಿಡಿಯೊ ಆಧರಿಸಿ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದರು.
ಈ ಸುದ್ದಿ ಓದಿದ್ದೀರಾ? ವಂದೇ ಭಾರತ್ ರೈಲಿನಲ್ಲಿ 5 ಕಿ.ಮೀ ಪ್ರಯಾಣಕ್ಕೆ 410 ರೂ.
ಪೊಲೀಸರು ಪ್ರಾಥಮಿಕ ತನಿಖೆ ವೇಳೆ ಆರೋಪಿಗಳು ನಗರದಲ್ಲಿ ಹವಾ ಮೆಂಟೇನ್ ಮಾಡಲು ಈ ರೀತಿಯ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.