ಬೆಂಗಳೂರು | ಕರಗ ಹೊತ್ತ ಅರ್ಚಕನ ಕೊಲೆಗೆ ಯತ್ನ; ದೂರು ದಾಖಲು

Date:

  • ಕರಗ ಹೊತ್ತ ಜ್ಞಾನೇಂದ್ರ ಅವರ ಮೈ ಮೇಲೆ ಸುಟ್ಟ ಗಾಯ
  • ಆದಿನಾರಾಯಣ ವಿರುದ್ಧ ಕೊಲೆ ಯತ್ನ ಆರೋಪ; ಎಫ್‌ಐಆರ್‌ ದಾಖಲು

ರಾಜಧಾನಿ ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಬೆಂಗಳೂರು ಕರಗ ಏ. 6ರಂದು ನಡೆದಿದ್ದು. ಈ ವೇಳೆ, ಕರಗಕ್ಕೆ ಅಪಚ್ಯುತಿ ತರಲು ಕೆಲವು ಕಿಡಿಗೇಡಿಗಳು ಉತ್ಸವಕ್ಕೆ ಬಳಸುವ ಹೂವಿಗೆ ಖಾರದ ಪುಡಿ ಹಾಗೂ ಕೆಲವು ರಾಸಾಯನಿಕಗಳನ್ನು ಮಿಶ್ರಣ ಮಾಡಿ ಎರಚಿದ್ದಾರೆ ಎಂದು ಕರಗ ಹೊತ್ತ ಅರ್ಚಕ ಜ್ಞಾನೇಂದ್ರ ಆರೋಪಿಸಿದ್ದಾರೆ.

ಕರಗ ಹೊತ್ತ ಜ್ಞಾನೇಂದ್ರ ಅವರ ಮೈ ಮೇಲೆ ಸುಟ್ಟ ಗಾಯಗಳಾಗಿದ್ದು, ರಾಸಾಯನಿಕ ವಸ್ತು ಎರಚಿ ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಹಲಸೂರು ಗೇಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

“ಕರಗ ಉತ್ಸವದ ವೇಳೆ ಜ್ಞಾನೇಂದ್ರ ಮೇಲೆ ಆದಿನಾರಾಯಣ ಎಂಬ ವ್ಯಕ್ತಿ ಯಾವುದೋ ವಸ್ತು ಎಸೆಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜ್ಞಾನೇಂದ್ರ ನೀಡಿದ ದೂರಿನ ಮೇರೆಗೆ ಜಯನಗರದ ಆದಿನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ” ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ರಾಜಧಾನಿಯಲ್ಲಿ ದೇಶದ ಮೊದಲ 3‘ಡಿ’ ತಂತ್ರಜ್ಞಾನದ ಅಂಚೆ ಕಚೇರಿ

“ಈ ಘಟನೆಯಿಂದ ಜ್ಞಾನೇಂದ್ರ ಅವರ ಕುತ್ತಿಗೆ, ಎದೆ, ಹೊಟ್ಟೆಭಾಗ ಸೇರಿದಂತೆ ನಾನಾ ಕಡೆಗಳಲ್ಲಿ ಸುಟ್ಟಗಾಯಗಳಾಗಿವೆ. ಹಲವು ವರ್ಷಗಳಿಂದ ಕರಗ ಹೊರುವ ವಿಚಾರವಾಗಿ ಆದಿನಾರಾಯಣ ಹಾಗೂ ಜ್ಞಾನೇಂದ್ರ ನಡುವೆ ಮನಸ್ತಾಪವಿದೆ. ಈ ಕಾರಣಕ್ಕಾಗಿ ಆತ ಕೃತ್ಯ ಎಸಗಿರಬಹುದು” ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ; ಮತ್ತೆ ಟೋಲ್‌ ದರ ಹೆಚ್ಚಳ

ಬೆಂಗಳೂರು-ಮೈಸೂರು ನಡುವಿನ ಎಕ್ಸ್‌ಪ್ರೆಸ್‌-ವೇ ಕಾಮಗಾರಿ ಆರಂಭವಾದಾಗಿನಿಂದಲೂ ನಾನಾ ರೀತಿಯಲ್ಲಿ ಚರ್ಚೆಯ ವಿಷಯವಾಗಿಯೇ...

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ಸಿಎಂ ವಿರುದ್ಧ ಸುಳ್ಳು ಸುದ್ದಿ ಪ್ರಸಾರ: ಅರ್ನಬ್ ಗೋಸ್ವಾಮಿ, ಆರ್.‌ಕನ್ನಡ ಸಂಪಾದಕರ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಿ ದ್ವೇಷ...

ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್‌ ಕೌಂಟರ್‌ಗಳಲ್ಲಿ ಸೇವೆ

ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಂಗಳೂರು ವಿದ್ಯುತ್...