ಬೆಂಗಳೂರಿನ ಬಾಣಸವಾಡಿ ಸಂಚಾರ ಠಾಣೆಯ ಪೇದೆಯೊಬ್ಬರು ನೋ ಪಾರ್ಕಿಂಗ್ನಲ್ಲಿ ಕಾರು ನಿಲ್ಲಿಸಿದಕ್ಕೆ ಕ್ಲಾಂಪ್ ಹಾಕಿದ್ದರು. ಇದಕ್ಕೆ ಕೋಪಗೊಂಡ ಕಾರು ಮಾಲೀಕ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದ. ಇದೀಗ ಕೃತ್ಯವೆಸಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ, ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಉಮೇಶ್ ಹಲ್ಲೆಗೊಳಗಾದ ಬಾಣಸವಾಡಿ ಸಂಚಾರ ಠಾಣೆಯ ಪೇದೆ. ಈ ಬಗ್ಗೆ ಗುರುವಾರ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಲೇಮಾನ್ ಬಂಧಿತ ಆರೋಪಿ.
ಏನಿದು ಘಟನೆ?
ಜು.11 ರಂದು ಸಂಜೆ 6 ಗಂಟೆ ಸುಮಾರಿಗೆ ಕರ್ತವ್ಯದಲ್ಲಿದ್ದ ಬಾಣಸವಾಡಿ ಸಂಚಾರ ಪೊಲೀಸ್ ಉಮೇಶ್ ನೋ ಪಾರ್ಕಿಂಗ್ ಸ್ಥಳದಲ್ಲಿ ಕಾರು ನಿಲ್ಲಿಸಿದ್ದ ಹಿನ್ನಲೆ ಕ್ಲಾಂಪ್ ಹಾಕಿದ್ದರು. ಈ ಕಾರಣಕ್ಕೆ ನಡುರಸ್ತೆಯಲ್ಲಿಯೇ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಕಾರು ಮಾಲೀಕ ಹಲ್ಲೆ ಮಾಡಿದ್ದ.
“ಬಾಣಸವಾಡಿ ಸಂಚಾರ ಠಾಣೆಯ ಕಾನ್ಸ್ಟೆಬಲ್ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹಲ್ಲೆ ನಡೆಸಲಾಗಿದೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ಮುಂದುವರೆದಿದೆ” ಎಂದು ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ಎಂ ಎನ್ ಅನುಚೇತ್ ಅವರು ಟ್ಟೀಟ್ ಮಾಡಿದ್ದಾರೆ.