ಬೆಂಗಳೂರು | ಕರಗ ಹೊತ್ತಿದ್ದ ಜ್ಞಾನೇಂದ್ರ ಕೊಲೆಗೆ ಯತ್ನ; ಆರೋಪಿ ಬಂಧನ

Date:

  • ಉತ್ಸವದ ವೇಳೆ ಖಾರದ ಪುಡಿ ಹಾಗೂ ರಾಸಾಯನಿಕ ದ್ರಾವಣ ಎರಚಿದ ಆರೋಪಿ
  • ಜೆಪಿ ನಗರ ನಿವಾಸಿ ಜಯನಗರದ ಆದಿನಾರಾಯಣ ಬಂಧಿತ ಆರೋಪಿ

ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಆದರೆ, ಕರಗವನ್ನು ಹೊತ್ತಿದ್ದ ಜ್ಞಾನೇಂದ್ರ ಅವರ ಕೊಲೆಗೆ ಯತ್ನ ನಡೆದಿದ್ದು, ಈ ಸಂಬಂಧ ಓರ್ವ ಆರೋಪಿಯನ್ನು ಹಲಸೂರು ಗೇಟ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

- Advertisement -

ಜೆಪಿ ನಗರ ನಿವಾಸಿ ಜಯನಗರದ ಆದಿನಾರಾಯಣ ಬಂಧಿತ ಆರೋಪಿ. ಈತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹಲವು ವರ್ಷಗಳಿಂದ ಕರಗ ಹೊರುವ ವಿಚಾರವಾಗಿ ಆದಿನಾರಾಯಣ ಹಾಗೂ ಜ್ಞಾನೇಂದ್ರ ಅವರ ನಡುವೆ ಮನಸ್ತಾಪವಿದೆ. ಈ ಸೇಡಿನಿಂದ ಆತ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಏ. 6ರಂದು ನಡೆದ ಕರಗ ಉತ್ಸವದ ವೇಳೆ ಖಾರದ ಪುಡಿ ಹಾಗೂ ಬೆಳ್ಳಿ ವಸ್ತುಗಳಿಗೆ ಬಳಸಲಾಗುವ ಸೈನೆಡ್ ಪೆಟಲ್ಸ್ ಎಂಬ ರಾಸಾಯನಿಕ ದ್ರಾವಣವನ್ನು ಹೂವಿನಲ್ಲಿ ಬೆರೆಸಿ ಕರಗ ಹೊತ್ತಿದ್ದ ಜ್ಞಾನೇಂದ್ರ ಮೇಲೆ‌ ಆರೋಪಿ ಎರಚಿದ್ದನು. ಈ ಬಗ್ಗೆ ಕರಗ ಹೊತ್ತ ಅರ್ಚಕ ಜ್ಞಾನೇಂದ್ರ ಅವರು ಆರೋಪಿಸಿ ಹಲಸೂರು ಗೇಟ್‌ ಪೊಲೀಸ್‌ ಠಾಣೆಗೆ ಮಂಗಳವಾರ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಶಾಸಕ ರಘು ಬೆಂಬಲಿಗರಿಂದ ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು

ಈ ದೂರಿನ ಮೇರೆಗೆ ಜಯನಗರದ ಆದಿನಾರಾಯಣ ವಿರುದ್ಧ ಕೊಲೆ ಯತ್ನ ಆರೋಪದಡಿ ಎಫ್‌ಐಆರ್‌ ದಾಖಲಾಗಿತ್ತು.

ಕರಗ ಉತ್ಸವದ ವೇಳೆ ಜ್ಞಾನೇಂದ್ರ ಮೇಲೆ ಆದಿನಾರಾಯಣ ಯಾವುದೋ ವಸ್ತು ಎಸೆಯುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರಿಂದ ಜ್ಞಾನೇಂದ್ರ ಅವರ ಕುತ್ತಿಗೆ ಭಾಗ ಹಾಗೂ ದೇಹದ ನಾನಾ ಭಾಗಗಳಲ್ಲಿ ಸುಟ್ಟಗಾಯಗಳಾಗಿವೆ.

“ಕರಗ ಹೊರುವ ಪೂಜಾರಿ ಮೇಲೆ ರಾಸಾಯನಿಕ ಪದಾರ್ಥವನ್ನು ಎರಚಿದ್ದಾರೆ. ಕರಗ ಹೊರುವ ವಿಚಾರದಲ್ಲಿ ಅವರ ಮಧ್ಯೆ ವಿವಾದಗಳಿವೆ. ಆ ಕಾರಣಕ್ಕಾಗಿ ಈ ರೀತಿಯ ಘಟನೆ ನಡೆದಿದೆ. ಪ್ರಾಥಮಿಕ ತನಿಖೆ ವೇಳೆ ಈ ವಿಷಯ ತಿಳಿದುಬಂದಿದೆ. ದೂರು ದಾಖಲಾಗಿದೆ. ಘಟನೆ ಬಗ್ಗೆ ತನಿಖೆ ಕೈಗೊಳ್ಳಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ” ಎಂದು ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...