ಬೆಂಗಳೂರು | ಕರಗಕ್ಕೆ ಕರಗಿದ ಬಿಬಿಎಂಪಿ ಅನುದಾನ

Date:

  • ₹1.50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದ ಬಿಬಿಎಂಪಿ
  • ಅನುದಾನ ಬಿಡುಗಡೆಗೆ ಏ.1ರಿಂದ ಆರ್ಥಿಕ ವರ್ಷ ಆರಂಭ ಎಂದು ಸಬೂಬು

ಈ ವರ್ಷ ಬೆಂಗಳೂರು ಧರ್ಮರಾಯಸ್ವಾಮಿಯ ಐತಿಹಾಸಿಕ ದ್ರೌಪದಿ ಕರಗ ಉತ್ಸವಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ₹50 ಲಕ್ಷ ಅನುದಾನ ಕಡಿತಗೊಳಿಸಿದೆ. ಈ ಹಿಂದೆ, ₹1.50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಪಾಲಿಕೆ ಹೇಳಿತ್ತು. ಇದೀಗ, ₹1 ಕೋಟಿ ಅನುದಾನ ನೀಡಿದ್ದು, ಕೊನೆಯ ಹಂತದಲ್ಲಿ ಅನುದಾನ ಕಡಿತಗೊಳಿಸಿದೆ ಎಂದು ಕರಗೋತ್ಸವ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಅನುದಾನ ಕಡಿತದ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನ ಕಮಿಟಿ ಅಧ್ಯಕ್ಷ ಸತೀಶ್, “ಇಲ್ಲಿಯವರೆಗೂ 40 ಲಕ್ಷದ 30 ಸಾವಿರ ಹಣವನ್ನು ಬಿಬಿಎಂಪಿ ನೀಡಿದೆ. ಏಪ್ರಿಲ್ 1ರಿಂದ ಆರ್ಥಿಕ ವರ್ಷ ಆರಂಭವಾಗುತ್ತದೆ. ಹಾಗಾಗಿ, ಉಳಿದ ₹75 ಲಕ್ಷ ಏಪ್ರಿಲ್ ತಿಂಗಳು ಕಳೆದಾದ ಮೇಲೆ ಕೊಡುತ್ತೇವೆಂದು ಹೇಳಿದ್ದಾರೆ. ಇನ್ನೂ ಮೂರು ದಿನದಲ್ಲಿ ಕರಗ ಮಹೋತ್ಸವದ ಖರ್ಚು-ವೆಚ್ಚಗಳ ಲೆಕ್ಕ ಹಾಕಿ ಆಡಿಟ್ ವರದಿ ಮಾಡಿ ಬಿಬಿಎಂಪಿಗೆ ನೀಡುತ್ತೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಕ್ತಿ ಯೋಜನೆಗೆ ಚಾಲನೆ | ಬಿಎಂಟಿಸಿ ಬಸ್‌ಗೆ ಭಾನುವಾರ ಸಿಎಂ ಸಿದ್ದರಾಮಯ್ಯ ಕಂಡಕ್ಟರ್‌

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ, ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಒದಗಿಸುವ...

ಲೋಕಸಭಾ ಚುನಾವಣೆಯಲ್ಲೂ ಬಿಜೆಪಿಯನ್ನು ಸೋಲಿಸಬೇಕು; ಸಿಎಂ ಜೊತೆ ‘ಎದ್ದೇಳು ಕರ್ನಾಟಕ’ ನಿಯೋಗ ಚರ್ಚೆ

ನಾಡಿನ ಜನತೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಿದ್ಧಾಂತವನ್ನು ಚುನಾವಣೆಯಲ್ಲಿ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ....

ಬೆಂಗಳೂರು | ಕೆಐಎ ಒಂದನೇ ಟರ್ಮಿನಲ್‌ ಶೀಘ್ರ ನವೀಕರಣ

ಹದಿನೈದು ವರ್ಷಗಳಲ್ಲಿ 250 ದಶಲಕ್ಷಕ್ಕೂ ಹೆಚ್ಚು ಪ್ರಯಾಣಿಕರಿಗೆ ಸೇವೆ ಒದಗಿಸಿದ ಟರ್ಮಿನಲ್...

ಬೆಂಗಳೂರು | ಸ್ನೇಹಿತನ ಜತೆ ಸೇರಿ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿದ ಪ್ರಿಯಕರ

ಗಿರಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಜೂ. 6ರಂದು ನಡೆದಿದ್ದ ಘಟನೆ...