ಬೆಂಗಳೂರು | ಮುಕ್ತ ಕಾಲುದಾರಿ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರ ಪೊಲೀಸ್‌

Date:

  • ನಗರದಲ್ಲಿ ಅಕ್ರಮವಾಗಿ ಒತ್ತುವರಿಯಾದ ಪಾದಚಾರಿ ಮಾರ್ಗಗಳು
  • ಅಕ್ರಮವಾಗಿ ನಿಲುಗಡೆ ಮಾಡಿದ ವಾಹನ ಮತ್ತು ಅವಶೇಷಗಳ ತೆರವು

ಬೆಂಗಳೂರಿನ ಫುಟ್‌ಪಾತ್‌ಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡಿ, ಪಾದಚಾರಿಗಳ ಓಡಾಟಕ್ಕೆ ಅನುಕೂಲ ಮಾಡಿಕೊಡಲು ಬೆಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದಾರೆ.

- Advertisement -

ಜುಲೈ 10ರಂದು ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರು ‘ಮುಕ್ತ ಕಾಲುದಾರಿ’ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

“ಬೆಂಗಳೂರಿನಲ್ಲಿ ಪಾದಚಾರಿಗಳು, ನಿರ್ಗತಿಕರು ಇತ್ತೀಚಿಗೆ ಅಪಘಾತಕ್ಕೆ ಈಡಾಗುತ್ತಿದ್ದರು. ಹಾಗಾಗಿ, ಬೆಳ್ಳಂಬೆಳಗ್ಗೆ ಸ್ಪೆಷಲ್ ಡ್ರೈವ್ ಮಾಡಿದ್ದಿವಿ. ಹಲವಾರು ನಿರ್ಗತಿಕರಿಗೆ ತಿಂಡಿ ಕೊಟ್ಟು ತಿಳಿವಳಿಕೆ ಹೇಳಿ ಭಿಕ್ಷುಕರ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಎಲ್ಲರೂ ಮನುಷ್ಯರೇ. ನಾವು ಮಾಡಿದ್ದು ಸರಿ ಅಂತ ನಮಗನಿಸ್ತಿದೆ ನಿಮ್ಗೆ?” ಎಂದು ಬೆಂಗಳೂರು ಸಂಚಾರ ಪೊಲೀಸ್‌ ಟ್ವೀಟ್‌ ಮಾಡಿದೆ.

48 ಟ್ರಾಫಿಕ್ ಪೊಲೀಸ್ ಠಾಣೆಗಳಲ್ಲಿ ಪ್ರತಿ ದಿನವೂ ತಮ್ಮ ವ್ಯಾಪ್ತಿಗೆ ಬರುವ ಒಂದು ಫುಟ್‌ಪಾತ್ ಮೇಲೆ ಕೇಂದ್ರೀಕರಿಸಿ, ಅಕ್ರಮವಾಗಿ ನಿಲುಗಡೆ ಮಾಡಿದ ವಾಹನಗಳು ಮತ್ತು ಅವಶೇಷಗಳನ್ನು ತೆರವುಗೊಳಿಸುತ್ತಿದೆ.

ಜಂಟಿ ಪೊಲೀಸ್ ಕಮಿಷನರ್ (ಸಂಚಾರ) ಎಮ್ ಎನ್ ಅನುಚೇತ್ ಮಾತನಾಡಿ, “ಈ ಡ್ರೈವ್ ಚಾಲ್ತಿಯಲ್ಲಿರುವ ‘ಮುಕ್ತ ಕಾಲುದಾರಿ’ (ReclaimFootpaths) ಅಭಿಯಾನದ ಭಾಗವಾಗಿದೆ. ಇದನ್ನು ಇತರ ಅಭಿಯಾನಗಳೊಂದಿಗೆ ಏಕಕಾಲದಲ್ಲಿ ನಡೆಸಲಾಗುವುದು” ಎಂದರು.

“ಈ ಅಭಿಯಾನದಲ್ಲಿ ಫುಟ್‌ಪಾತ್‌ಗಳಲ್ಲಿ ಅಕ್ರಮವಾಗಿ ನಿಲುಗಡೆ ಮಾಡಿದ ವಾಹನಗಳನ್ನು ತೆರವುಗೊಳಿಸುತ್ತೇವೆ. ಇದರಿಂದ ಪಾದಚಾರಿಗಳು ಫುಟ್‌ಪಾತ್‌ಗಳನ್ನು ಮುಕ್ತವಾಗಿ ಬಳಸಬಹುದು. ಫುಟ್‌ಪಾತ್‌ಗಳ ಸುಧಾರಣೆ ಅಥವಾ ಮೂಲಸೌಕರ್ಯ ಬದಲಾವಣೆಗಳ ಅಗತ್ಯವಿದ್ದರೆ ಸಂಚಾರ ಪೊಲೀಸರು ಪುರಸಭೆಯ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಾರೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಸೀದಿಯಲ್ಲಿ ಮಲಗಲು ಜಾಗ ನೀಡಿಲ್ಲವೆಂದು ಹುಸಿ ಬಾಂಬ್‌ ಕರೆ; ಬಿಎಸ್‌ಸಿ ಪದವೀಧರ ಬಂಧನ

2022ರಲ್ಲಿ ಬೆಂಗಳೂರಿನಲ್ಲಿ 248 ಜನ ಪಾದಚಾರಿಗಳು ಸಾವನ್ನಪ್ಪಿದ್ದಾರೆ. ಇನ್ನೂ 819 ಪಾದಚಾರಿಗಳು ಗಾಯಗೊಂಡಿದ್ದಾರೆ. ಪಾದಚಾರಿ ಮಾರ್ಗಗಳು ಅಕ್ರಮವಾಗಿ ಒತ್ತುವರಿಯಾದ ಕಾರಣ ಜನರು ಓಡಾಡಲು ಸ್ಥಳಾವಕಾಶದ ಕೊರತೆಯಾಗುತ್ತದೆ. ಇದರಿಂದ ಜನರು ರಸ್ತೆಯ ಮೇಲೆ ನಡೆಯಬೇಕಾಗುತ್ತದೆ. ಈ ವೇಳೆ, ಪಾದಚಾರಿಗಳು ಅಪಘಾತ ಮತ್ತು ಸಾವುಗಳಿಗೆ ಒಳಗಾಗುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...