- ₹30 ಲಕ್ಷ ಮೌಲ್ಯದ 70 ಕೆಜಿ ಗಾಂಜಾವನ್ನು ಸಾಗಿಸುತ್ತಿದ್ದರು
- ಸಹಾನಿ ವಿರುದ್ಧ ಎನ್ಡಿಪಿಎಸ್ ಅಡಿಯಲ್ಲಿ ಪ್ರಕರಣ ದಾಖಲು
ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದ ₹30 ಲಕ್ಷ ಮೌಲ್ಯದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, 26 ವರ್ಷದ ಯುವಕನನ್ನು ಬಂಧಿಸಿದ್ದಾರೆ.
ಒಡಿಶಾದ ಕಂಧಮಾಲ್ ಜಿಲ್ಲೆಯ ರಾಜ್ ಕಿಶೋರ್ ಸಹಾನಿ ಬಂಧಿತ ಆರೋಪಿ. ಏಪ್ರಿಲ್ 19 ರಂದು ಸಂಜೆ 4.30 ರ ಸುಮಾರಿಗೆ ಕಾಟನ್ಪೇಟೆಯ ಬಾಳೆಹಣ್ಣು ಮಾರ್ಕೆಟ್ ಪಾರ್ಕಿಂಗ್ ಸ್ಥಳದಲ್ಲಿ ಓಡಿಶಾದಿಂದ ಗಾಂಜಾವನ್ನು ಅಕ್ರಮವಾಗಿ ತಂದು ಮಾರಾಟ ಮಾಡಲಾಗುತ್ತಿತ್ತು. ಈ ವೇಳೆ ಪೊಲೀಸರು ಆರೋಪಿಗಳನ್ನು ಮತ್ತು ಗಾಂಜಾವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
“₹30 ಲಕ್ಷ ಮೌಲ್ಯದ 70 ಕೆಜಿ ಗಾಂಜಾವನ್ನು ಸಾಗಿಸುತ್ತಿದ್ದರು. ನಿಷಿದ್ಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಹಾನಿ ವಿರುದ್ಧ ಎನ್ಡಿಪಿಎಸ್ (ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ‘ಗಾಲ್ಫ್ ಬಾಲ್’; ಚಾಲಕನಿಗೆ ಗಾಯ
ಬೆಂಗಳೂರಿನಲ್ಲಿ ಮಾದಕ ವ್ಯಸನಿಗಳಿಗೆ ನಿಯಮಿತವಾಗಿ ಗಾಂಜಾ ಸರಬರಾಜು ಮಾಡುತ್ತಿದ್ದರು. ಏ. 15ರಂದು ಗಾಂಜಾ ಸೇವನೆಯಿಂದ ಬಂಧಿತನಾದ ಮತ್ತಿಕೆರೆ ನಿವಾಸಿ ಸುಭಾಷ್ ಎನ್ (26) ಎಂಬುವರಿಂದ ಮಾಹಿತಿ ಪಡೆದು ನಂತರ ಪೊಲೀಸರು ಆರೋಪಿಗಾಗಿ ಶೋಧ ನಡೆಸಿದ್ದಾರೆ.