ಬೆಂಗಳೂರು | ರೌಡಿಶೀಟರ್​, ಮೀಟರ್​ ಬಡ್ಡಿ ದಂಧೆ ನಡೆಸುತ್ತಿದ್ದವರ ಮನೆ ಮೇಲೆ ಸಿಸಿಬಿ ದಾಳಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಗ್ಗಿಲ್ಲದೇ ಮೀಟರ್ ಬಡ್ಡಿ ದಂಧೆ ನಡೆಯುತ್ತಿದೆ. ಈ ನಡುವೆ ಸಿಸಿಬಿ ಪೊಲೀಸರು ರೌಡಿಶೀಟರ್ ಮತ್ತು ಮೀಟರ್‌ ಬಡ್ಡಿ ದಂಧೆ ನಡೆಸುತ್ತಿದ್ದವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಅಮಾಯಕರಿಗೆ ಹೆದರಿಸಿ, ಬೆದರಿಸಿ ನಿವೇಶನ ಕಬಳಿಸುವುದು, ಮೀಟರ್ ಬಡ್ಡಿ ದಂಧೆ ನಡೆಸುವುದು ಸೇರಿದಂತೆ ಹಲವಾರು ಆರೋಪಗಳು ಅನ್ನಪೂರ್ಣೇಶ್ವರಿ ನಗರ ರೌಡಿಶೀಟರ್ ಬೋರ್ ವೆಲ್ ಅನಿಲ್ ಮೇಲೆ ಕೇಳಿಬಂದಿದ್ದವು. ಈ ಹಿನ್ನೆಲೆ, ಅನಿಲ್ ಮನೆ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಅಲ್ಲದೇ, ದಾಳಿ ವೇಳೆ, ಅನಿಲ್ ಮನೆಯಲ್ಲಿ ತಕರಾರು ಆಸ್ತಿಪತ್ರ, ಹಲವು ಚೆಕ್​ಗಳು ಪತ್ತೆಯಾಗಿವೆ. ಸದ್ಯ ಸಿಸಿಬಿ ಪೊಲೀಸರು ಅನಿಲ್​ ಮನೆಯಲ್ಲಿ ಸಿಕ್ಕಿರುವ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಸಣ ಕಾರ್ಮಿಕರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ: ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ

Advertisements

ಜತೆಗೆ, ಯಶವಂತಪುರ ರೌಡಿಶೀಟರ್ ಗಿರೀಶ್ ಅಲಿಯಾಸ್​​​ ರಾಬರಿ ಗಿರಿ, ವಿವೇಕನಗರ ರೌಡಿಶೀಟರ್​ಗಳಾದ ನಾರಾಯಣ, ಹೇಮಂತ್, ರಾಮು, ಸೋಲದೇವನಹಳ್ಳಿ ರೌಡಿಶೀಟರ್ ತಿಮ್ಮ ಸೇರಿ ಅನೇಕರ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಿನದ ಲೆಕ್ಕದಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಕೃಷ್ಣೇಗೌಡ ಕಚೇರಿ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಗ್ರಿಮೆಂಟ್ ಪೇಪರ್ ಮತ್ತು ಚೆಕ್​ಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X