ಬೆಂಗಳೂರು | ಕಸ ಸುರಿವ ‘ತೊಟ್ಟಿ’ಯಾದ ಚಿಕ್ಕಪೇಟೆ ಮುಖ್ಯ ರಸ್ತೆ!

Date:

Advertisements

ಬೆಂಗಳೂರಿನ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಒಂದಾದ, ವ್ಯಾಪಾರ ಚಟುವಟಿಕೆ ತಾಣವಾಗಿರುವ ಚಿಕ್ಕಪೇಟೆಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಚಿಕ್ಕಪೇಟೆಯ ಮುಖ್ಯರಸ್ತೆಯು ಕಸ ಹಾಕುವ ‘ಡಂಪಿಂಗ್ ಯಾರ್ಡ್‌’ಆಗಿ ಬದಲಾಗಿದೆ.

ಚಿಕ್ಕಪೇಟೆ ಮುಖ್ಯರಸ್ತೆಯನ್ನು ದುರಸ್ತಿ ಮಾಡಲು, ಒಂದು ಬದಿಯ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸುಮಾರು ಮೂರು ತಿಂಗಳೇ ಕಳೆದಿವೆ. ರಸ್ತೆಯನ್ನು ಕಿತ್ತು, ಸಮತಟ್ಟು ಮಾಡಲಾಗಿದೆ. ಈ ನಡುವೆ ಕಾಮಗಾರಿ ಸ್ಥಗಿತಗೊಂಡಿದ್ದು, ಕೆಲಸಗಳು ನಡೆಯುತ್ತಿಲ್ಲ.

ಇದೇ ಸಮಯದಲ್ಲಿ ಮಳೆಯೂ ಸುರಿಯುತ್ತಿದ್ದು, ವ್ಯಾಪಾರಿಗಳಿಗೆ ರಸ್ತೆಯೇ ಕಸದ ಸುರಿಯುವ ತಾಣವಾಗಿದೆ. ಹಲವಾರು ದಿನಗಳಿಂದ ರಸ್ತೆಯಲ್ಲಿ ಕಸ ಸುರಿಯಲಾಗಿದ್ದು, ಈಗ ರಸ್ತೆ ಕಸದ ತೊಟ್ಟಿಯಾಗಿ ಮಾರ್ಪಟ್ಟಿದೆ. ಮಳೆನೀರಿನಲ್ಲಿ ತ್ಯಾಜ್ಯ ಕೊಳೆದು ವಾಸನೆ ಹರಡಲಾರಂಭಿಸಿದ. ಜೊತೆಗೆ, ಸೊಳ್ಳೆಗಳ ಹಾವಳಿಯೂ ಹೆಚ್ಚುತ್ತಿದೆ.

Advertisements

ಈಗಾಗಲೇ, ಡೆಂಗ್ಯೂ ಜ್ವರದ ಹಾವಳಿ ಬೆಂಗಳೂರಿನಲ್ಲಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹೆಚ್ಚಿಸಿದೆ. ಇಂತಹ ಸಮಯದಲ್ಲಿ ಹೆಚ್ಚು ಜನರು ಓಡಾಡುವ ಸ್ಥಳದಲ್ಲಿ ರಾಶಿ-ರಾಶಿ ಕಸ ಬಿದ್ದಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ.

ಚಿಕ್ಕಪೇಟೆಯಲ್ಲಿ ಕಸದ ರಾಶಿ ಬಿದ್ದಿರುವ ವಿಡಿಯೋವನ್ನು ಆಮ್ ಆದ್ಮಿ ಪಕ್ಷ (ಎಎಪಿ) ಹಂಚಿಕೊಂಡಿದೆ. “ಬೆಂಗಳೂರಿನ ಜನನಿಬಿಡ ಪ್ರದೇಶವಾದ ಚಿಕ್ಕಪೇಟೆಯಲ್ಲಿ ಕಸದ ರಾಶಿ ಹೀಗೆ ರಸ್ತೆ ಮೇಲೆ ಹರಡಿರುವುದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಬಿಬಿಎಂಪಿಗೆ ಧನ್ಯವಾದಗಳು. ಮಾನ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಚಿಕ್ಕಪೇಟೆ ಖಾಯಿಲೆಗಳ ಗೂಡಾಗುವುದರಲ್ಲಿದೆ, ಬಿಜೆಪಿ ಎಂಎಲ್‌ಎ ಉದಯ್ ಗರುಡಾಚಾರ್ ಅವರೇ ಮನೆ ಬಿಟ್ಟು ಹೊರಗೆ ಬನ್ನಿ ಇನ್ನಾದರು ಕಾರ್ಯಪ್ರವೃತ್ತರಾಗಿ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X