ಸ್ವೀಕಾರಕ್ಕೆ ಆರ್‌ಬಿಐ ನಿರಾಕರಣೆ: ಕೋಟ್ಯಂತರ ಮೌಲ್ಯದ ಹಳೇ ನೋಟು ಸುಡಲು ಮುಂದಾದ ಬೆಂಗಳೂರು ಪೊಲೀಸರು

Date:

Advertisements

ಕೋಟ್ಯಂತರ ಮೌಲ್ಯದ ಹಳೇ ನೋಟುಗಳನ್ನು ನಾಶಪಡಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಈ ಹಳೇ ನೋಟುಗಳನ್ನು ಆರ್​ಬಿಐಗೆ ನೀಡಿ ಬದಲಾವಣೆಗೆ ಮುಂದಾಗಿದ್ದು ಆರ್​​ಬಿಐ ಕೂಡ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆ ಇದೀಗ ಹಳೇ ನೋಟುಗಳಿಗೆ ಬೆಂಕಿ ಇಡಲು ಪೊಲೀಸರು ತೀರ್ಮಾನಿಸಿದ್ದು ಕೋರ್ಟ್ ಮೊರೆ ಹೋಗಿದ್ದಾರೆ.

ಬೆಂಗಳೂರಿನ ಪೊಲೀಸರ ಬಳಿ ಐದು ಕೋಟಿಗೂ ಅಧಿಕ ಹಳೆಯ ನೋಟಿನ ಕಂತೆಗಳಿವೆ. 1 ಸಾವಿರ ಹಾಗೂ 500 ಮುಖಬೆಲೆಯ ಹಳೇ ನೋಟುಗಳಿಗೆ ಇವುಗಳಿಗೆ ನಯಾಪೈಸೆ ಬೆಲೆ ಇಲ್ಲ. ಆ ನೋಟುಗಳೀಗ ಕೇವಲ ಕಾಗದದ ಚೂರಷ್ಟೇ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

Advertisements

ಬೆಂಗಳೂರಿನ ಹಲವು ಪ್ರಕರಣದಲ್ಲಿ 5 ಕೋಟಿಗೂ ಅಧಿಕ ಹಳೆಯ ನೋಟುಗಳನ್ನು ಮುಟ್ಟುಗೋಲು ಮಾಡಲಾಗಿದೆ. ಬೇರೆ ಬೇರೆ ಪ್ರಕರಣದಲ್ಲಿ ಹಳೇ ನೋಟುಗಳು ಪತ್ತೆಯಾಗಿವೆ. ನೋಟು ಅಮಾನ್ಯೀಕರಣ ಬಳಿಕ ಹಳೇ ನೋಟುಗಳು ಬೆಲೆ ಕಳೆದುಕೊಂಡಿವೆ. ನೋಟು ಅಮಾನ್ಯೀಕರಣ ಬಳಿಕ ಬದಲಾವಣೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಕೊಟ್ಟ ಕಾಲಾವಕಾಶ ಕೂಡ ಮುಗಿದು ಹೋಗಿದೆ. ಹೀಗಾಗಿ ಹಳೇ ನೋಟುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಆರ್‌ಬಿಐ ತಿಳಿಸಿದೆ.

ಹಳೇ ನೋಟು ಹಿನ್ನೆಲೆ ಪೊಲೀಸರು ಬ್ಯಾಂಕ್​ನಲ್ಲಿ ಠೇವಣಿ ಮಾಡಲು ಆಗುತ್ತಿಲ್ಲ. ಅತ್ತ ಆರ್​ಬಿಐ ಕೂಡ ಈ ಹಣವನ್ನು ಸ್ವೀಕಾರ ಮಾಡುತ್ತಿಲ್ಲ. ಹೀಗಾಗಿಯೇ ಹಳೇ ನೋಟುಗಳನ್ನ ಸುಟ್ಟು ಹಾಕಲು ಪೊಲೀಸರು ನಿರ್ಧರಿಸಿದ್ದಾರೆ. ಕೋರ್ಟ್ ಅನುಮತಿ ಪಡೆದ ಬಳಿಕ ಪೊಲೀಸರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಪೊಲೀಸರು ಹಳೇ ನೋಟು ನಾಶಪಡಿಸಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X