ಬೆಂಗಳೂರು | ಕೊಳಚೆ ನೀರಿನಿಂದ ಮೀನುಗಳ ಮಾರಣಹೋಮ

Date:

  • ಮೀನುಗಳ ಸಾವಿಗೆ ಒಳಚರಂಡಿ ನೀರು ಕಾರಣ
  • ನೀರಿನ ಗುಣಮಟ್ಟದ ಬಗ್ಗೆ ಕಾಳಜಿ ವಹಿಸದ ಬಿಬಿಎಂಪಿ

ಇತ್ತಿಚೆಗೆ ಸುರಿದ ಮಳೆಯಿಂದ ಸೀತಾರಾಮಪಾಳ್ಯ ಕೆರೆಗೆ ವಿಷಕಾರಿ ಕೊಳಚೆ ನೀರು ನುಗ್ಗಿದ್ದು, ಕರೆಯಲ್ಲಿದ್ದ ಮೀನುಗಳು ಸಾವನ್ನಪ್ಪಿರುವ ಘಟನೆ ಶನಿವಾರ ವರದಿಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ವರ್ಷದಲ್ಲಿ ಕೆರೆಗಳಲ್ಲಿ ಮೀನುಗಳು ಸಾವನ್ನಪ್ಪಿರುವ ನಾಲ್ಕನೇ ಘಟನೆ ಇದಾಗಿದೆ.

- Advertisement -

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕೆರೆ ಹೋರಾಟಗಾರ ರಾಘವೇಂದ್ರ ಪಾಶ್ಚಾಪೂರ, “ಇದುವರೆಗೆ ಕೊತ್ತನೂರು ಕೆರೆಯಲ್ಲಿ ಎರಡು ಬಾರಿ ಮತ್ತು ಇಬ್ಲೂರು ಕೆರೆಯಲ್ಲಿ ಒಮ್ಮೆ ಮೀನುಗಳ ಮಾರಣಹೋಮ ನಡೆದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಚರಂಡಿಗಳು ಮತ್ತು ಕೆರೆಗಳನ್ನು ನಿರ್ವಹಣೆ ಮಾಡದೇ ಇರುವುದರಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

”ಕೊಳಚೆ ನೀರು ಕೆರೆಗಳಿಗೆ ಹರಿಯುವುದನ್ನು ತಡೆಯಲು ಕೆರೆಗಳ ಬಾಯಿಯ ಬಳಿ ಡೈವರ್ಶನ್ ಚಾನಲ್‌ಗಳನ್ನು ನಿರ್ಮಿಸಲು ಬಿಬಿಎಂಪಿ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿದೆ. ಆದರೆ, ಒಳಹರಿವುಗಳಿಗೆ ಯಾವುದೇ ನಿರ್ವಹಣೆ ಇಲ್ಲ. ತ್ಯಾಜ್ಯ ನೀರು ಕೂಡ ಕೆರೆಗಳಿಗೆ ಸೇರುತ್ತದೆ” ಎಂದರು.

“ಬಿಬಿಎಂಪಿ ಅಧಿಕಾರಿಗಳು ನೀರಿನ ಗುಣಮಟ್ಟದ ಬಗ್ಗೆ ಕಾಳಜಿ ವಹಿಸದಿದ್ದರೂ, ಬಿಡಬ್ಲ್ಯೂಎಸ್ಎಸ್‌ಬಿ ಕೂಡ ನೀರನ್ನು ಶುದ್ಧವಾಗಿಡಲು ಖಾತ್ರಿಪಡಿಸುವುದಿಲ್ಲ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಮುಲ್-ನಂದಿನಿ ಬಗ್ಗೆ ಹೊಸ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ; ಆಪ್ ಸಲಹೆ

ಬಿಬಿಎಂಪಿಯ ಮಹದೇವಪುರ ವಲಯದ ಕಾರ್ಯಪಾಲಕ ಎಂಜಿನಿಯರ್ (ಕೆರೆಗಳು) ಭೂಪ್ರದಾ ಮಾತನಾಡಿ, “ಈ ಕೆರೆಯಲ್ಲಿ ಯಾವುದೇ ತಿರುವು ಚರಂಡಿಗಳಿಲ್ಲ. ಈ ಕೆರೆಯನ್ನು 2020ರಲ್ಲಿ ಬಿಬಿಎಂಪಿಗೆ ಹಸ್ತಾಂತರಿಸಲಾಯಿತು. ಇದನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಸಿಎಸ್ಆರ್ ಕಾರ್ಯಕ್ರಮದ ಅಡಿಯಲ್ಲಿ ನಿರ್ವಹಣೆ ಮಾಡಲಾಗುತ್ತಿದೆ. ಆದರೆ, ಕೆರೆಯ ಅಭಿವೃದ್ಧಿ ಕೆಲಸಗಳನ್ನು ಆದ್ಯತೆಯಾಗಿ ತೆಗೆದುಕೊಂಡು ಕಾಮಗಾರಿ ಆರಂಭಿಸಿಲ್ಲ” ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...