ಬೆಂಗಳೂರು | ಕೆಪಿಸಿಎಲ್ 622 ಹುದ್ದೆಗಳಿಗೆ ಪರೀಕ್ಷೆ ನಡೆದರೂ ನೇಮಕಾತಿಯಾಗಿಲ್ಲ; ಅರ್ಹರಿಗೆ ನೇಮಕಾತಿ ಪತ್ರ ನೀಡಲು ಆಗ್ರಹ

Date:

Advertisements

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ (ಕೆಪಿಸಿಎಲ್) ಖಾಲಿ ಇರುವ 622 ಎ.ಇ ಮತ್ತು ಜೆ.ಇ ಹುದ್ದೆಗಳ ಭರ್ತಿಗೆ ‘ಇಂಜನಿಯರ್ ಕೆಮಿಸ್ಟ್ ಕೆಮಿಕಲ್ ಸೂಪರ್ ವೈಸರ್’ ನೇಮಕಾತಿ ಪರೀಕ್ಷೆ ನಡೆದಿದೆ. ಪರೀಕ್ಷಾ ಫಲಿತಾಂಶವೂ ಪ್ರಕಟವಾಗಿದೆ. ಪರೀಕ್ಷೆಯಲ್ಲಿ ಉತೀರ್ಣರಾದವರಿಗೆ ಇನ್ನೂ ನೇಮಕಾತಿ ಪತ್ರ ನೀಡಿಲ್ಲ. ಕೂಡಲೇ ನೇಮಕಾತಿ ಪತ್ರ ನೀಡಬೇಕೆಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘ ಒತ್ತಾಯಿಸಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ ನಡೆಸಿದೆ. “ಕೆಪಿಸಿಎಲ್ ನೇಮಕಾತಿಗೆ 2017ರಲ್ಲಿಯೇ ಅಧಿಸೂಚನೆ ಹೊರಡಿಸಲಾಗಿತ್ತು. 2024ರ ಫೆಬ್ರವರಿಯಲ್ಲಿ ಪರೀಕ್ಷೆ ನಡೆಸಿ, ಫಲಿತಾಂಶವನ್ನೂ ಪ್ರಕಟಿಸಲಾಗಿದೆ. 2024ರ ಸೆಪ್ಟೆಂಬರ್‌ನಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನೂ ಪ್ರಕಟಿಸಲಾಗಿದೆ. ಆದರೆ, ಈಗ ನೇಮಕಾತಿಗೆ ಕಾನೂನು ತೊಡಕಿದೆ ಎಂಬ ನೆಪವೊಡ್ಡಿ ಕಳೆದ 5 ತಿಂಗಳಿನಿಂದ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸದೆ ವಿಳಂಬ ಮಾಡಲಾಗಿದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ 8 ವರ್ಷಗಳಾಗಿವೆ. ಈಗಾಗಲೇ 8 ವರ್ಷಗಳ ವಿಳಂಬವಾಗಿದೆ. ಪರೀಕ್ಷೆ ಬರೆದು, ಆಯ್ಕೆಯಾಗಿರುವ ಹಲವಾರು ಯುವಜನರು ನಿರುದ್ಯೋಗದ ಸಮಸ್ಯೆ, ಕೌಟಂಬಿಕ ಸಮಸ್ಯೆಗಳಿಂದ ನೊಂದು-ಬೆಂದು ನರಕಯಾತನೆ ಅನುಭವಿಸುತ್ತಿದ್ದೇವೆ. ಎಲ್ಲ ಅಭ್ಯರ್ಥಿಗಳ ಜೀವನ ಅತಂತ್ರ ಸ್ಥಿತಿಯಲ್ಲಿದೆ. ಎಲ್ಲರ ಭವಿಷ್ಯ ಕೆಪಿಸಿಎಲ್ ನೇಮಕಾತಿಯ ಮೇಲೆಯೇ ನಿರ್ಧಾರವಾಗಿದೆ. ಕೂಡಲೇ ನೇಮಕಾತಿ ಪೂರ್ಣಗೊಳಿಸಿ, ಆದೇಶ ಪ್ರತಿ ನೀಡಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Advertisements

ಮುಖ್ಯಮಂತ್ರಿ ಮತ್ತು ಇಂಧನ ಸಚಿವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘದ ಅದ್ಯಕ್ಷ ಕಾಂತ್ ಕುಮಾರ್, ಉಪಾಧ್ಯಕ್ಷರಾದ ಶ್ರೇಯಸ್ಸು, ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್, ಕಾರ್ಯದರ್ಶಿ ಅಭಿಲಾಶ ರವರು ಉತೀರ್ಣರಾದ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X