ಬೆಂಗಳೂರು | ಎಲೆಕ್ಟ್ರಾನಿಕ್ ಸಿಟಿ – ಮಾದವಾರ ಬಿಎಂಟಿಸಿ ಬಸ್‌ ಸೇವೆ ಆರಂಭ

Date:

Advertisements

ಪ್ರಯಾಣಿಕರ ಬೇಡಿಕೆ ಮೇರೆಗೆ ನೈಸ್‌ ರಸ್ತೆಯ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿಯಿಂದ ಮಾದವಾರಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಸೇವೆ ಆರಂಭವಾಗಿದೆ.

ಮಾದವಾರ ಮತ್ತು ಎಲೆಕ್ಟ್ರಾನಿಕ್ ಸಿಟಿಗೆ ನೈಸ್ ರಸ್ತೆಯ ಮೂಲಕ ಬೆಳಗ್ಗೆ 6:40 ರಿಂದ ರಾತ್ರಿ 8 ಗಂಟೆವರೆಗೆ ಬಿಎಂಟಿಸಿ ಬಸ್‌ ಸೇವೆ ಇರಲಿದೆ. ನವೆಂಬರ್‌ 20 ರಿಂದ ಈ ಬಸ್‌ ಸೌಲಭ್ಯ ಆರಂಭವಾಗಿದೆ.

ಬೇರೆ ಊರಿನಿಂದ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕರು ಮೆಜೆಸ್ಟಿಕ್‌ಗೆ ತಲುಪಿ ನಂತರ ಅಲ್ಲಿಂದ ಎಲೆಕ್ಟ್ರಾನಿಕ್ ಬಸ್ ಹಿಡಿದು ಪ್ರಯಾಣ ಬೆಳೆಸಬೇಕಿತ್ತು. ಇದಕ್ಕೆ ಬರೋಬ್ಬರಿ 2 ಗಂಟೆ ಸಮಯ ಹಿಡಿಯುತ್ತಿತ್ತು. ಬಿಎಂಟಿಸಿ ಬಸ್​ ಇಲ್ಲದ ಕಾರಣ ಪ್ರಯಾಣಿಕರು ಟೆಂಪೋ, ಆಟೋ, ಲಾರಿಗಳಲ್ಲಿ ಸಂಚಾರ ಮಾಡುತ್ತಿದ್ದರು. ಈ ಮಾರ್ಗಕ್ಕೆ ಬಸ್ ಒದಗಿಸುವಂತೆ ಪ್ರಯಾಣಿಕರು ಹಲವಾರು ಬಾರಿ ಮನವಿ ಮಾಡಿದ್ದರು. ಇದೀಗ, ಬಿಎಂಟಿಸಿಯಿಂದ ಮಾದವಾರ – ಎಲೆಕ್ಟ್ರಾನಿಕ್‌ ಸಿಟಿಗೆ ನೇರ ಬಸ್‌ ಸೇವೆ ಆರಂಭವಾಗಿದೆ. ಈ ಬಸ್‌ ನೈಸ್‌ ರಸ್ತೆಯ ಮೂಲಕ ನಗರದ ಹೊರವಲಯದಲ್ಲಿಯೇ ಸಂಚರಿಸಲಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಲಿಂಡರ್​ ಸ್ಫೋಟಗೊಂಡು ಐವರಿಗೆ ಗಾಯ

ಇನ್ನು ತುಮಕೂರು ಮತ್ತು ಹಾಸನ ಕಡೆಯಿಂದ ಆಗಮಿಸುವ ಪ್ರಯಾಣಿಕರು ಮೆಜೆಸ್ಟಿಕ್‌ಗೆ ಬರುವ ತೊಂದರೆ ಇಲ್ಲದೆ, ನೇರವಾಗಿ ಮಾದವಾರದಿಂದಲೇ ಎಲೆಕ್ಟ್ರಾನಿಕ್ ಸಿಟಿ ತಲುಪಬಹುದು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X