ಬೆಂಗಳೂರು | ಬನ್ನೇರುಘಟ್ಟ ಉದ್ಯಾನವನದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಆನೆ ಸಾವು

Date:

  • ಆನೆ ಅಗಲಿಕೆಯಿಂದ ಪಾರ್ಕ್​ನಲ್ಲಿ ನೀರವ ಮೌನ ಉಂಟಾಗಿದೆ
  • ಅತಿ ಹೆಚ್ಚು ಆನೆ ಮರಿಗಳಿಗೆ ಜನ್ಮ ನೀಡಿದ್ದ ಸುವರ್ಣ ಆನೆ

ಬೆಂಗಳೂರಿನ ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮರಿಆನೆ ಏ.20ರಂದು ತನ್ನ ತಾಯಿಯ ಹೊಟ್ಟೆಯಲ್ಲಿರುವಾಗಲೇ ಮೃತಪಟ್ಟಿತ್ತು. ಇದೀಗ ಏ.21ರಂದು ತಾಯಿ ಆನೆ ಸಾವನ್ನಪ್ಪಿದೆ.

47 ವರ್ಷದ ಸುವರ್ಣ ಎಂಬ ಹೆಸರಿನ ಆನೆ ಏ.21 ಮಧ್ಯಾಹ್ನ 12:13ಕ್ಕೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದೆ. ಆನೆಗೆ ಪ್ರಸವ ವೇದನೆ ಮುಗಿದರೂ ಮರಿ ಜನನವಾಗದ ಹಿನ್ನೆಲೆ, ವೈದ್ಯರು ಆನೆ ಹೊಟ್ಟೆ ತಪಾಸಣೆ ಮಾಡಿದ್ದರು. ಈ ವೇಳೆ ಭ್ರೂಣದಲ್ಲೇ ಮರಿ ಆನೆ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

ಪ್ರಾಣಿ‌ ಶಸ್ತ್ರ ‌ಚಿಕಿತ್ಸೆ ತಜ್ಞರ ನೇತೃತ್ವದಲ್ಲಿ ಆಪರೇಶನ್ ಮಾಡುವ ಮೂಲಕ ಮೃತಪಟ್ಟ ಮರಿಯನ್ನು ಪಶುವೈದ್ಯರು ತೆಗೆದಿದ್ದರು. ಆದರೆ, ಮರಿ ಮೃತಪಟ್ಟಿದ್ದರಿಂದ ಆನೆ ದೇಹದಲ್ಲಿ ಇನ್ಫೆಕ್ಷನ್ ಹರಡಿಕೊಂಡು ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಆನೆ ಮೃತಪಟ್ಟಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟೆಕ್ ಕಾರಿಡಾರ್‌ನಲ್ಲಿ ವಸತಿ ಬಾಡಿಗೆ ಶೇ. 24 ರಷ್ಟು ಏರಿಕೆ

ಉದ್ಯಾನವನದಲ್ಲಿ ಆನೆ ಸಾವಿಗೆ ಕಂಬನಿ ಮಿಡಿದ ಸಿಬ್ಬಂದಿ

ಕಳೆದ ರಾತ್ರಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಆನೆಯ ಸ್ಥಿತಿ ಕಂಡು ಪಾರ್ಕ್ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಆನೆಯ ಅಗಲಿಕೆಯಿಂದ ಪಾರ್ಕ್​ನಲ್ಲಿ ನೀರವ ಮೌನ ಉಂಟಾಗಿದೆ.

ಅತಿ ಹೆಚ್ಚು ಆನೆ ಮರಿಗಳಿಗೆ ಜನ್ಮ ನೀಡಿದ್ದ ಸುವರ್ಣಳನ್ನು ಬನ್ನೇರುಘಟ್ಟ ‌ಬಯಲಾಜಿಕಲ್ ಪಾರ್ಕ್ ಒಳಗಡೆ‌ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...

ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ...