ಬೆಂಗಳೂರು | ಕೊನೆಗೂ ಬಿಡುಗಡೆಯಾದ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್

Date:

  • ಆ್ಯಪ್ ಬೀಟಾ ಪರೀಕ್ಷೆಯ ಹಂತದಲ್ಲಿದ್ದಾಗ ಆ್ಯಪ್‌ಗೆ ‘ನಿಮ್ ಬಸ್’ ಎಂಬ ಹೆಸರಿತ್ತು
  • ಬಿಎಂಟಿಸಿ ಸಹಾಯವಾಣಿಗಳಿಗೆ ಸಂಪರ್ಕಿಸಲು ಆ್ಯಪ್​ನಲ್ಲಿ ಲಿಂಕ್ ನೀಡಲಾಗಿದೆ

ಬಹುನಿರೀಕ್ಷಿತ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ‘ನಿಮ್ ಬಸ್’ನಿಂದ ‘ನಮ್ಮ ಬಿಎಂಟಿಸಿ’ಯಾಗಿ ಹೊಸ ರೂಪದೊಂದಿಗೆ ಬುಧವಾರ ಅನಾವರಣಗೊಂಡಿದೆ.

- Advertisement -

ಸತತವಾಗಿ 2 ವರ್ಷಗಳ ಬಳಿಕ ಈ ಆ್ಯಪ್ ಬಿಡುಗಡೆಗೊಂಡಿದೆ. 5,568 ಬಸ್‌ ನಿರ್ವಹಿಸುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರತಿನಿತ್ಯ ಸುಮಾರು 30 ಲಕ್ಷ ಪ್ರಯಾಣಿಕರಿಗೆ ತನ್ನ ಸೇವೆಯನ್ನು ನೀಡುತ್ತಿದೆ. ಸಾರ್ವಜನಿಕರಿಗೆ ಅನುಕೂಲವಾಗಲು ಅಂತಿಮವಾಗಿ ಅಪ್ಲಿಕೇಶನ್ ಪ್ರಾರಂಭಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಆ್ಯಪ್ ಬೀಟಾ ಪರೀಕ್ಷೆಯ ಹಂತದಲ್ಲಿದ್ದಾಗ ‘ನಿಮ್ ಬಸ್’ ಎಂದು ಹೆಸರಿಸಲಾಗಿತ್ತು. ಲೈವ್ ಮಾಡುವ ಸಮಯದಲ್ಲಿ ಅದನ್ನು ‘ನಮ್ಮ ಬಿಎಂಟಿಸಿ’ ಎಂದು ಹೆಸರಿಸಲಾಗಿದೆ.

ಆ್ಯಪ್ ಬಳಕೆ ಹೇಗೆ?

‘ನಮ್ಮ ಬಿಎಂಟಿಸಿ’ ಆ್ಯಪ್ ಅನ್ನು ಆಂಡ್ರಾಯ್ಡ್ ಮತ್ತು ಐಒಎಸ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಆ್ಯಪ್ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಲಭ್ಯವಿದ್ದು, ಭಾಷೆ ಬದಲಾಯಿಸಲು ಸರಳವಾದ ಆಯ್ಕೆ ನೀಡಲಾಗಿದೆ. ಸೈನ್ ಇನ್ ಮಾಡುವುದು ಅಥವಾ ಗೆಸ್ಟ್ ಯೂಸರ್ ಆಗಿಯೂ ಸಾರ್ವಜನಿಕರು ಆನ್‌ಲೈನ್‌ನಲ್ಲಿ ಆ್ಯಪ್ ಬಳಸಬಹುದು.  

ಆ್ಯಪ್‌ನ ಉಪಯೋಗ ಏನು?

  • ನೈಜ ಸಮಯದಲ್ಲಿ ಬಸ್‌ಗಳನ್ನು ಟ್ರ್ಯಾಕ್ ಮಾಡಬಹುದು. ಆದರೆ, ಕೆಲವು ಹಳೆಯ ಬಸ್‌ಗಳನ್ನು ಟ್ರ್ಯಾಕ್ ಮಾಡುವುದಿಲ್ಲ ಎಂದು ತಿಳಿದುಬಂದಿದೆ.
  • ತುರ್ತು ಸಂದರ್ಭಗಳಲ್ಲಿ ಬಳಕೆದಾರರಿಗೆ ಸಹಾಯ ಮಾಡಲು ಅಪ್ಲಿಕೇಶನ್‌ನಲ್ಲಿ ಎಸ್​​ಒಎಸ್ ವೈಶಿಷ್ಟ್ಯವನ್ನು ನೀಡಲಾಗಿದೆ.
  • ಬಿಎಂಟಿಸಿ ಸಹಾಯವಾಣಿಗಳಿಗೆ ಸಂಪರ್ಕಿಸಲು ಆ್ಯಪ್​ನಲ್ಲಿ ಲಿಂಕ್ ನೀಡಲಾಗಿದೆ.
  • ಬಳಕೆದಾರ ಸ್ನೇಹಿ ಇಂಟರ್ಫೇಸ್ ಮತ್ತು ರಿಯಲ್ ಟೈಮ್ ಟ್ರ್ಯಾಕಿಂಗ್, ಹತ್ತಿರದ ನಿಲ್ದಾಣಗಳ ಮಾಹಿತಿ, ಪ್ರಯಾಣದ ಯೋಜನೆ ಮತ್ತು ಇತರ ಹಲವು ಪ್ರಮುಖ ವೈಶಿಷ್ಟ್ಯಗಳೊಂದಿಗೆ ನ್ಯಾವಿಗೇಟ್ ಮಾಡಲು ಸುಲಭವಾಗುವಂತೆ ಆ್ಯಪ್ ರೂಪಿಸಲಾಗಿದೆ.
  • ವಾಹನ ನಿಲುಗಡೆ, ವಿಶ್ರಾಂತಿ ಕೊಠಡಿಗಳು, ಎಟಿಎಂ, ಕುಡಿಯುವ ನೀರಿನ ಸೌಲಭ್ಯ, ನಿರ್ದಿಷ್ಟವಾಗಿ ಬಸ್ ನಿಲ್ದಾಣಗಳು, ಟ್ರಾಫಿಕ್ ಮತ್ತು ಟ್ರಾನ್ಸಿಟ್ ಮ್ಯಾನೇಜ್‌ಮೆಂಟ್ ಸೆಂಟರ್ (ಟಿಟಿಎಂಸಿಗಳು) ಒದಗಿಸುವ ಸೌಲಭ್ಯಗಳನ್ನು ಬಳಕೆದಾರರು ತಿಳಿದುಕೊಳ್ಳಬಹುದಾದ ವೈಶಿಷ್ಟ್ಯವನ್ನು ಆ್ಯಪ್ ಹೊಂದಿದೆ.
  • ಬಳಕೆದಾರರು ಬಿಎಂಟಿಸಿ, ಚಾರ್ಟರ್ಡ್ ಬಸ್‌ಗಳು, ನಮ್ಮ ಮೆಟ್ರೋ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್‌ಗಳ ನಿಲ್ದಾಣಗಳನ್ನು ತಿಳಿದುಕೊಳ್ಳಬಹುದು.
  • ‘ಶುಲ್ಕ ಕ್ಯಾಲ್ಕುಲೇಟರ್’ ವೈಶಿಷ್ಟ್ಯವನ್ನು ಶೀಘ್ರದಲ್ಲೇ ಸೇರಿಸಲಾಗುತ್ತದೆ ಎಂದು ಬಿಎಂಟಿಸಿ ತಿಳಿಸಿದೆ.

2022ರ ಡಿಸೆಂಬರ್​​ ಮತ್ತು 2023ರ ಜನವರಿ ಮತ್ತು ಮಾರ್ಚ್​ನಲ್ಲಿ ಆ್ಯಪ್ ಪ್ರಾರಂಭಿಸಲು ನಿರೀಕ್ಷಿಸಲಾಗಿತ್ತು. ಆದರೆ, ತಾಂತ್ರಿಕ ದೋಷಗಳು ಮತ್ತು ಇತರ ಸಮಸ್ಯೆಗಳ ಕಾರಣ ಆ್ಯಪ್ ಅಭಿವೃದ್ಧಿಪಡಿಸಲಾಗಿರಲಿಲ್ಲ. ಅಧಿಕೃತವಾಗಿ ಎಲ್ಲ ಸಮಸ್ಯೆಗಳನ್ನು ನಿವಾರಿಸಿ 2023ರ ಏಪ್ರಿಲ್‌ನಲ್ಲಿ ಬಿಎಂಟಿಸಿ ಆ್ಯಪ್ ಅನ್ನು ಅನಾವರಣಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 500ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು

“ಈ ಆ್ಯಪ್ ಬಳಕೆದಾರರು ನೈಜ ಸಮಯದಲ್ಲಿ ಬಸ್‌ಗಳನ್ನು ಟ್ರ್ಯಾಕ್ ಮಾಡಬಹುದು. ಆ್ಯಪ್ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಲಭ್ಯವಿದೆ. ಸೈನ್ ಇನ್ ಮಾಡುವುದರೊಂದಿಗೆ ಅಥವಾ ಗೆಸ್ಟ್ ಯೂಸರ್ ಆಗಿಯೂ ಜನರು ಆ್ಯಪ್ ಅನ್ನು ಆನ್‌ಲೈನ್‌ನಲ್ಲಿ ಬಳಸಬಹುದು” ಎಂದು ಬಿಎಂಟಿಸಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...