ಬೆಂಗಳೂರು | ಕೈಯಲ್ಲಿ ಕತ್ತಿ ಹಿಡಿದು ಬೈಕ್‌ ವ್ಹೀಲಿಂಗ್, ಐವರು ಯುವಕರ ಬಂಧನ

Date:

ಬೆಂಗಳೂರು ನಗರದ ಕೆಲ ರಸ್ತೆಗಳಲ್ಲಿ ಕತ್ತಿ ಝಳಪಿಸುತ್ತಾ ವೀಲಿಂಗ್ ಮಾಡುತ್ತಿದ್ದ ಐದು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ರಾಮಮೂರ್ತಿನಗರ, ಕೆ.ಆರ್.ಪುರಂ ಫ್ಲೈ ಓವರ್ ಮಾರ್ಗವಾಗಿ ಸಿನಿಮೀಯ ರೀತಿಯಲ್ಲಿ ಸಾಲು ಸಾಲಾಗಿ ಬೈಕ್‌ಗಳಲ್ಲಿ ಕೈಯಲ್ಲಿ ಕತ್ತಿ ಹಿಡಿದು, ವಾಹನ ಸವಾರರಿಗೆ ಭಯ ಬೀಳಿಸಿದ್ದಾರೆ. ಪೊಲೀಸರ ಭಯವೇ ಇಲ್ಲದೇ ಹತ್ತಾರು ಮಂದಿ ಪುಂಡರು ಲಾಂಗ್ ಹಿಡಿದುಕೊಂಡು ರಾಜಾರೋಷವಾಗಿ ಬೈಕ್ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಲಾಂಗ್ ಹಿಡಿದು ಬೈಕ್‌ಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ನಡೆಸುತ್ತಿರುವ ಪುಂಡರ ಬಂಧನಕ್ಕೆ ಬೆಂಗಳೂರು ಪೂರ್ವ ವಿಭಾಗದ ಪೊಲೀರು ಶೋಧ ನಡೆಸಿ, ಡಿಜೆ ಹಳ್ಳಿ ಮತ್ತು ರಾಮಮೂರ್ತಿ ನಗರ ಪ್ರದೇಶಗಳಲ್ಲಿ ಕತ್ತಿ ಝಳಪಿಸುತ್ತಾ ವೀಲಿಂಗ್ ಮಾಡುತ್ತಿದ್ದ ಐದು ಯುವಕರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನಯೀಮ್, ಅರಾಫತ್, ಸಾಹಿಲ್, ನಂಜಾಮತ್ ಹಾಗೂ ಅದ್ನಾನ್ ಎಂದು ಗುರುತಿಸಲಾಗಿದೆ.

ಪುಂಡರ ಈ ಗುಂಪು ಹವಾ ಮೆಂಟೇನ್ ಮಾಡುವುದಕ್ಕೆ ಭಯಬೀಳಿಸುವಂತೆ ಕೈಯಲ್ಲಿ ಕತ್ತಿ, ಲಾಂಗು, ಡ್ರ್ಯಾಗರ್ ಹಿಡಿದು ಅಟ್ಟಹಾಸ ಮೆರೆಯುತ್ತಾ, ರಸ್ತೆಯಲ್ಲಿ ಬೆಂಕಿ ಬರುವಂತೆ ಕತ್ತಿ ಹಾಗೂ ಲಾಂಗ್‌ನಿಂದ ಬೀಸುತ್ತಿದ್ದು, ಪುಂಡರ ಹಾವಳಿಗೆ ವಾಹನ ಸವಾರರು ಬೆಚ್ಚಿಬಿದ್ದಿದ್ದರು.

“ಲಾಂಗ್ ಹಿಡಿದುಕೊಂಡು ಪುಂಡರು ಬೈಕ್ ವ್ಹೀಲಿಂಗ್ ನಡೆಸಿದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಖಡಕ್ ಆಗಿ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಇಂತಹ ಪುಂಡರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಯಾವ ಸೆಕ್ಷನ್ ಅಡಿ ಕೇಸ್ ಹಾಕಬೇಕು ಅದನ್ನು ಪೊಲೀಸರು ಮಾಡ್ತಾರೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದ್ದು, ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ತಾರೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...

ಬೆಂಗಳೂರು ಪೊಲೀಸರ ದೈಹಿಕ, ಮಾನಸಿಕ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’- ಏನಿದು ಯೋಜನೆ?

ಹಗಲು-ರಾತ್ರಿಯೆನ್ನದೆ ಸಾರ್ವಜನಿಕರ ರಕ್ಷಣೆಗಾಗಿ ಶ್ರಮಿಸುವ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿಯ ದೈಹಿಕ...