ಬೆಂಗಳೂರು | ಬೀದಿ ವ್ಯಾಪಾರಿಗಳಿಗೆ ಮಾರ್ಷಲ್‌ಗಳ ಕಿರುಕುಳ; ಆರೋಪ

Date:

Advertisements

ಜಯನಗರ ನಾಲ್ಕನೇ ಬ್ಲಾಕ್‌ ಬೀದಿ ವ್ಯಾಪಾರಿಗಳಿಗೆ ಬಿಬಿಎಂಪಿ ಮಾರ್ಷಲ್‌ಗಳು ನೀಡುತ್ತಿರುವ ಕಿರುಕುಳ ತಡೆದು, ನಮ್ಮ ಜೀವನೋಪಾಯಕ್ಕೆ ರಕ್ಷಣೆ ನೀಡಬೇಕು ಎಂದು ಅಲ್ಲಿಯ ಬೀದಿ ವ್ಯಾಪಾರಿಗಳು‌ ಬೆಂಗಳೂರು ದಕ್ಷಿಣ ವಲಯ ಬಿಬಿಎಂಪಿ ಆಯುಕ್ತರಿಗೆ ಮನವಿ ಸಲ್ಲಿಸಿದರು.

“ನಮ್ಮ ಒಕ್ಕೂಟದ 27ನೇ ಕ್ರಾಸ್‌, 27ನೇ ಎ ಕ್ರಾಸ್, ಮುಖ್ಯರಸ್ತೆಯಲ್ಲಿ 65 ವ್ಯಾಪಾರಿಗಳು ಸುಮಾರು 30-40 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದಾರೆ. ಹಾಗೆಯೇ 9ನೇ ಮುಖ್ಯರಸ್ತೆಯಲ್ಲಿ 30 ಮಂದಿ ವ್ಯಾಪಾರಿಗಳು ಹಾಗೂ 10ನೇ ಮುಖ್ಯರಸ್ತೆಯಲ್ಲಿ 12 ಮಂದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದಾರೆ. 2023ರ ನವೆಂಬರ್ 7ರಿಂದ ಬಿಬಿಎಂಪಿ ಮಾರ್ಷಲ್‌ಗಳೆಂದು ಹೇಳಿಕೊಂಡು ಕೆಲವರು ಬಂದು, ಅಲ್ಲಿನ ವ್ಯಾಪಾರಿಗಳ ಜೀವನೋಪಾಯದ ಹಕ್ಕಿಗೆ ಅಡ್ಡಿ ಮಾಡುತ್ತಿದ್ದಾರೆ. ಅವರು ಯಾರೆಂದು ನಮಗೆ ಗೊತ್ತಿಲ್ಲ. ಅವರ ಬಳಿ ಯಾವ ಆದೇಶವು ಇಲ್ಲ” ಎಂದು ಬೀದಿ ವ್ಯಾಪಾರಿಗಳು‌ ಆರೋಪಿಸಿದ್ದಾರೆ.

“ನಮ್ಮಲ್ಲಿ ಎಲ್ಲರ ಬಳಿ ನಾವು ವ್ಯಾಪಾರ ಮಾಡುತ್ತಿರುವ ಬಗ್ಗೆ, ಸರ್ಕಾರ ಒಂದಲ್ಲ ಒಂದು ರೀತಿಯ ಗುರುತಿನ ಚೀಟಿ ಇದೆ. ಇನ್ನೂ ಕೆಲವರ ಬಳಿ ಬಿಬಿಎಂಪಿ 2000ನೇ ಇಸವಿಯಲ್ಲಿ ನೀಡಿದ ಪರವಾನಗಿ ಪ್ರತಿ ಇದೆ. ಇನ್ನು ಕೆಲವರ ಬಳಿ ಕೇಂದ್ರ ಸರ್ಕಾರ ಡಾ ಪಿಎಂ ಸ್ವಾನಿಧಿ ಯೋಜನೆಯಡಿ ಸಾಲ ಸಿಕ್ಕಿದೆ. ಕೆಲವರು 2017ರ ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟಿತ್ತು. ಆದರೆ ಬಿಬಿಎಂಪಿ ಅವರ ಗುರುತಿನ ಚೀಟಿ ಕಲೆ ಹಾಕಿದೆ. ಅವರ ಅರ್ಜಿ ಸಂಖ್ಯೆ ಇದೆ. ಕೆಲವರಿಗೆ ಮಾತ್ರ 2017ರ ಸಮೀಕ್ಷೆಯಲ್ಲಿ ಕೈ ಬಿಡಲಾಯಿತು. ಆದರೆ ಅವರೂ ಕೂಡ ಗುರುತಿನ ಚೀಟಿಗಾಗಿ ಅರ್ಜಿ ಹಾಕಿದ್ದಾರೆ” ಎಂದರು.

Advertisements

“ಬೀದಿ ವ್ಯಾಪಾರಿಗಳ (ಜೀವನೋಪಾಯ ರಕ್ಷಣೆ ಹಾಗು ನಿಯಂತ್ರಣ ಕಾಯ್ದೆ 2014ರ ಕಲಂ 3(3) ಪುಕಾರ ಕಾನೂನಿನಡಿಯಲ್ಲಿ ಸಮೀಕ್ಷೆ ಮುಗಿದು ವ್ಯಾಪಾರ ಮಾಡುತ್ತಿರುವ ಎಲ್ಲ ವ್ಯಾಪಾರಿಗಳಿಗೆ ಗುರುತಿನ ಚೀಟಿ ಕೊಡುವ ತನಕ ಯಾರನ್ನೂ ಎತ್ತಂಗಡಿ ಮಾಡುವಂತಿಲ್ಲ” ಎಂದು ತಿಳಿಸಿದ್ದಾರೆ.

“ಜಯನಗರ ನಾಲ್ಕನೇ ಕ್ರಾಸ್‌ನಲ್ಲಿ ವ್ಯಾಪಾರ ಮಾಡುತ್ತಿದ್ದ ಎಲ್ಲ ಬೀದಿ ವ್ಯಾಪಾರಿಗಳಿಗೆ ವ್ಯಾಪಾರ ಮುಂದುವರೆಸುವಂತೆ ರಕ್ಷಣೆ ನೀಡಬೇಕು. ಬೀದಿ ವ್ಯಾಪಾರಕ್ಕೆ ತೊಂದರೆಯಾಗದಂತೆ ಸೂಕ್ತ ಆದೇಶ ನೀಡಬೇಕು. ನಮಗೆ ಕಿರುಕುಳ ನೀಡುತ್ತಿರುವ ಮಾರ್ಷಲ್‌ಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಂಗ್ರೆಸ್‌ನವರು ಗೊಂದಲದಲ್ಲಿದ್ದು, ಹತಾಶರಾಗಿ ಮಾತನಾಡುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ

“ಬೀದಿ ವ್ಯಾಪಾರಿಗಳ(ಜೀವನೋಪಾಯ ರಕ್ಷಣೆ ಹಾಗು ನಿಯಂತ್ರಣ )ಕಾಯ್ದೆ 2014ರ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ತರಬೇತಿ (ಕಾರ್ಯಾಗಾರ ) ನೀಡಬೇಕು. ಬೀದಿ ವ್ಯಾಪಾರಿಗಳ ಕಾನೂನು ಕಲಂ 3ರ ಪ್ರಕಾರ ತಕ್ಷಣ ಪಟ್ಟಣ ವ್ಯಾಪಾರ ಸಮಿತಿಯಡಿ ಸಮೀಕ್ಷೆ ನಡೆಸಬೇಕು. ಜಯನಗರ 4ನೇ ಬಡಾವಣೆ ಬೀದಿ ವ್ಯಾಪಾರಿಗಳ ಸಮಸ್ಯೆ ಪರಿಹಾರ ಮಾಡುವುದಕ್ಕಾಗಿ ಕೂಡಲೇ ಪಟ್ಟಣ ವ್ಯಾಪಾರ ಸಮಿತಿ ಸಭೆ ಕರೆಯುವಂತೆ ಆದೇಶಿಸಿ ಕೂಡಲೇ ನಮ್ಮ ಹಕ್ಕಿನ ರಕ್ಷಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X