ಬೆಂಗಳೂರು | ಏ.6ರ ಮಧ್ಯರಾತ್ರಿ ಐತಿಹಾಸಿಕ ಕರಗ ಉತ್ಸವ

Date:

  • ಎಂಟು ಶತಮಾನಗಳಿಂದ ನಡೆಯುತ್ತಿರುವ ಐತಿಹಾಸಿಕ ಕರಗ ಉತ್ಸವ
  • 12ನೇ ಬಾರಿಗೆ ಕರಗ ಹೊರಲಿರುವ ತಿಗಳ ಸಮುದಾಯದ ಅರ್ಚಕ ಜ್ಞಾನೇಂದ್ರ

ವಿಶ್ವವಿಖ್ಯಾತ ಹಾಗೂ ಭಾವೈಕ್ಯತೆ ಪ್ರತೀಕ ಬೆಂಗಳೂರು ಕರಗ ಉತ್ಸವ ಜತೆಗೆ ಧರ್ಮರಾಯಸ್ವಾಮಿ ಮಹಾರಥೋತ್ಸವ ಗುರುವಾರ ಮಧ್ಯರಾತ್ರಿ ನಡೆಯಲಿದೆ.

- Advertisement -

ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಕಳೆದ ಎಂಟು ಶತಮಾನಗಳಿಂದ ನಡೆಯುತ್ತಿದೆ. ಈ ವರ್ಷ ಚೈತ್ರ ಪೂರ್ಣಿಮೆ ಬೆಳದಿಂಗಳಲ್ಲಿ ಮಧ್ಯರಾತ್ರಿ 12.30ಕ್ಕೆ ಕರಗಕ್ಕೆ ಚಾಲನೆ ದೊರೆಯಲಿದೆ. ಕರಗ ವೀಕ್ಷಣೆಗೆ ಈ ಬಾರಿ 5 ಲಕ್ಷಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಹಿಂದೂ ಪಂಚಾಂಗದ ಪ್ರಕಾರ ಚೈತ್ರ ಪೌರ್ಣಮಿಯ ಗುರುವಾರ ಮಧ್ಯರಾತ್ರಿ 12.30ಕ್ಕೆ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಲಿದೆ. ಪ್ರತಿ ಬಾರಿಯಂತೆ ಈ ಬಾರಿಯೂ 12ನೇ ಬಾರಿ ತಿಗಳ ಸಮುದಾಯದ ಅರ್ಚಕ ವಿ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ.

ಈ ವರ್ಷದ ಕರಗದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪೊಲೀಸ್‌ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಚೈತ್ರ ಹುಣ್ಣಿಮೆಯ ಗುರುವಾರ ಮಧ್ಯರಾತ್ರಿ ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಲಿದೆ. ಇದಕ್ಕೂ ಮುನ್ನ ಗುರುವಾರ ಬೆಳಗ್ಗೆ ದ್ರೌಪದಿ ದೇವಿಗೆ ಅರಿಶಿನ ಬಣ್ಣದ ಸೀರೆ ಉಡಿಸಿ, ಬಳೆಗಳನ್ನು ತೊಡಿಸಿ ಕರಗ ಹೊತ್ತ ಅರ್ಚಕರು ಗಂಗಾಪೂಜೆ ಸಲ್ಲಿಸುತ್ತಾರೆ. ಅಲ್ಲಿಂದ ಹಸಿ ಕರಗವನ್ನು ಮಂಟಪಕ್ಕೆ ತಂದು ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ, ರಾತ್ರಿ 12.30ಕ್ಕೆ ಕರಗ ಮೆರವಣಿಗೆ ಹೊರಡುತ್ತದೆ. ಕರಗ ಮೆರವಣಿಗೆಯೂ ಸುಮಾರು 38 ಕಿ.ಮೀ ಒಳಗೊಂಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಕರಗ ಶಕ್ತ್ಯೋತ್ಸವ | ತಾತ್ಕಾಲಿಕ ಸಂಚಾರ ನಿರ್ಬಂಧ ಎಲ್ಲೆಲ್ಲಿ? ಇಲ್ಲಿದೆ ನೋಡಿ

ನಗರದ ಕುಂಬಾರಪೇಟ್ ರೋಡ್, ರಾಜ ಮಾರ್ಕೆಟ್ ಸರ್ಕಲ್-ಸಿಟಿ ಮಾರ್ಕೆಟ್ ಸರ್ಕಲ್ ಮೂಲಕ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ ಮೆರವಣಿಗೆ ಹೋಗುತ್ತದೆ. ಅಲ್ಲಿಂದ, ಮಸ್ತಾನ್ ಸಾಬ್ ದರ್ಗಾಕ್ಕೆ ತೆರಳಿ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ, ಬಳೇಪೇಟೆ ಸರ್ಕಲ್ ಮೂಲಕ ಅಣ್ಣಮ್ಮ ದೇವಿಯ ದೇವಸ್ಥಾನಕ್ಕೆ ತೆರಳಿ, ಕಬ್ಬನ್ ಪೇಟೆ ಮುಖ್ಯ ರಸ್ತೆ ಮೂಲಕ ಶ್ರೀಧರ್ಮರಾಯ ಸ್ವಾಮಿ ದೇಗುಲಕ್ಕೆ ಮರಳುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಯ ಬೆಳಗಿನ ಜಾವಕ್ಕೆ ಶಿಫ್ಟ್‌? ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಕಾರಣ – ಸರ್ಕಾರ ಚಿಂತನೆ

​ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಶೀಘ್ರವೇ...

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಯೋಗದಿಂದ ಶಾಸಕ ಎನ್ ಎ ಹ್ಯಾರಿಸ್ ಭೇಟಿ: ಹಲವು ವಿಚಾರಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ ಯುವಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ...

ಬೆಂಗಳೂರು ವಿ.ವಿ ಯಡವಟ್ಟು: ರಾಮನಗರ ಸರ್ಕಾರಿ ಕಾಲೇಜಿನ 46 ಉತ್ತರ ಪತ್ರಿಕೆಗಳು ನಾಪತ್ತೆ

ಪರೀಕ್ಷೆ ಬರೆದು ಒಂದೂವರೆ ವರ್ಷ ಕಳೆದರೂ ಫಲಿತಾಂಶ ಬಾರದೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ...

SIR | ಮ್ಯಾಪಿಂಗ್‌ ಆಗಿದ್ದು ತಾಯಿಯೊಂದಿಗೆ – ನೋಟಿಸ್‌ ಬಂದಿದ್ದು ಅಜ್ಜನ ವಯಸ್ಸಿಗೆ; ಮತದಾರರಿಗೆ ಚು. ಆಯೋಗದ ಕಿರುಕುಳ

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ದಿನಕ್ಕೊಂದು ವಿಲಕ್ಷಣ ಘಟನೆಗಳು ಮತ್ತು ಯಾಂತ್ರಿಕ ದೋಷಗಳು...