ಬೆಂಗಳೂರು | ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆ; ಗಡುವು ವಿಸ್ತರಣೆ ಸಾಧ್ಯತೆ

Date:

Advertisements

2019ರ ಏಪ್ರಿಲ್‌ಗಿಂತ ಮೊದಲು ನೋಂದಣಿಯಾದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಲು ನೀಡಿದ್ದ ಗಡುವು (ನವೆಂಬರ್ 17) ಸಮೀಪಿಸುತ್ತಿದ್ದರೂ, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 2 ಕೋಟಿಯಷ್ಟು ಹಳೆಯ ವಾಹನಗಳ ಪೈಕಿ ಕೇವಲ 1.75 ಲಕ್ಷ (ಶೇ.10 ಕ್ಕಿಂತ ಕಡಿಮೆ) ವಾಹನಗಳು ಮಾತ್ರ ತಮ್ಮ ಫಲಕಗಳನ್ನು ನವೀಕರಿಸಿವೆ ಎನ್ನಲಾಗಿದೆ.

ಎಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ರಾಜ್ಯ ಸರ್ಕಾರ ವಿಸ್ತರಿಸುವ ಸಾಧ್ಯತೆಯಿದ್ದು, ನಂಬರ್‌ ಪ್ಲೇಟ್ ಅಳವಡಿಕೆಗೆ ಜನರನ್ನು ಉತ್ತೇಜಿಸಲು ವ್ಯಾಪಕ ಪ್ರಚಾರ ನೀಡುವ ಸಾಧ್ಯತೆಯಿದೆ ಎಂದು ಹಿರಿಯ ಸಾರಿಗೆ ಅಧಿಕಾರಿಗಳು‌ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

“ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (ಎಂಒಆರ್‌ಟಿಎಚ್) ಭದ್ರತೆ ಸೇರಿದಂತೆ ಹಲವು ಕಾರಣಗಳಿಗಾಗಿ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಂಟಿಸುವುದನ್ನು ಕಡ್ಡಾಯಗೊಳಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಒಮ್ಮೆ ಅಳವಡಿಸಿದ ಬಳಿಕ ತೆಗೆದುಹಾಕಲು ಸಾಧ್ಯವಿಲ್ಲ. ಅವುಗಳನ್ನು ರಿವಿಟ್‌ಗಳನ್ನು ಬಳಸಿ ಅಳವಡಿಸುವುದರಿಂದ ಪ್ಲೇಟನ್ನು ಮುರಿಯಬೇಕಾಗುತ್ತದೆ. ಇದರಿಂದಾಗಿ ನಂಬರ್ ಪ್ಲೇಟ್‌ಗಳ ವಿನಿಮಯಕ್ಕೆ ಯಾವುದೇ ಅವಕಾಶ ಇರುವುದಿಲ್ಲ. 2019ರ ಏಪ್ರಿಲ್ 1ಕ್ಕಿಂತ ಮೊದಲು ರಾಜ್ಯದಲ್ಲಿ ಸುಮಾರು 2 ಕೋಟಿ ವಾಹನಗಳು ನೋಂದಣಿಯಾಗಿವೆ. ಏಪ್ರಿಲ್ 2019 ರ ನಂತರ ನೋಂದಾಯಿಸಿರುವ ಎಲ್ಲ ವಾಹನಗಳಿಗೂ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅ.31ರಂದು ಮಲೆನಾಡು-ಕರಾವಳಿ ಸಮಸ್ಯೆಗಳ ಸಮಾಲೋಚನೆ ಸಭೆ

“ರಾಜ್ಯ ಸರ್ಕಾರದ ಅಧಿಸೂಚನೆಯು ಹಳೆಯ ವಾಹನಗಳು ಸಾಲಿನಲ್ಲಿ ಬರಲು ನವೆಂಬರ್ 17 ರವರೆಗೆ ಗಡುವು ನೀಡಿದ್ದರೂ, ಪ್ರತಿಕ್ರಿಯೆ ನೀರಸವಾಗಿದೆ. ಜನರನ್ನು ಉತ್ತೇಜಿಸಲು ನಾವು ಅಧಿಸೂಚನೆಯ ವ್ಯಾಪಕ ಪ್ರಚಾರವನ್ನು ಯೋಜಿಸುತ್ತಿದ್ದೇವೆ. ಆದರೆ ಕೆಲವರು ಈ ವಿಷಯವನ್ನು ನ್ಯಾಯಾಲಯಕ್ಕೆ ತೆಗೆದುಕೊಂಡು ಹೋಗಿದ್ದರಿಂದ, ನೋಂದಣಿ ಫಲಕಗಳನ್ನು ಸರಿಪಡಿಸಲು ಮೂಲ ಉಪಕರಣ ತಯಾರಕರಿಂದ (ಒಇಎಂ) ಅಧಿಕಾರ ಪಡೆದ ಎಚ್‌ಎಸ್‌ಆರ್‌ಪಿ ತಯಾರಕರಿಗೆ ಮಾತ್ರ ಅನುಮತಿ ನೀಡುವುದರ ವಿರುದ್ಧ ವಾದಿಸಿದ್ದರಿಂದ ಅದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಹಾಗಾಗಿ ಸರ್ಕಾರವು ಪುನಃ ನಂಬರ್‌ ಪ್ಲೇಟ್‌ ಅಳವಡಿಕೆಯ ಗಡುವನ್ನು ವಿಸ್ತರಿಸಬಹುದು” ಎಂದು ಅಧಿಕಾರಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X