ಬೆಂಗಳೂರು | ಕೆಐಎ ಟರ್ಮಿನಲ್ ಆವರಣದಲ್ಲಿಟ್ಟಿದ್ದ ₹3.5 ಲಕ್ಷ ಮೌಲ್ಯದ ವಸ್ತುಗಳು ಕಳವು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಆವರಣದಲ್ಲಿಟ್ಟಿದ್ದ ₹3.5 ಲಕ್ಷ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿವೆ.

ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೋದ್ರೇಜ್ ಮತ್ತು ಬಾಯ್ಸ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯ ಮ್ಯಾನೇಜರ್ ಕುಲದೀಪಕ್ ಸಿಂಗ್ ಶನಿವಾರ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 379 (ಕಳ್ಳತನಕ್ಕೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಟರ್ಮಿನಲ್ 2 ಅನ್ನು ಸಂಪರ್ಕಿಸುವ ಮಲ್ಟಿಮೋಡಲ್ ಟ್ರಾನ್ಸ್ಪೋರ್ಟೇಶನ್ ಹಬ್ ಅನ್ನು ನಿರ್ಮಿಸಲು ವಿಮಾನ ನಿಲ್ದಾಣದ ಆವರಣದಲ್ಲಿ 3,50,000 ಮೌಲ್ಯದ ಕಬ್ಬಿಣದಿಂದ ತಯಾರಿಸಿದ 30 ರೈಲ್ಸ್ ಆಪ್ಟಿಮೈಸರ್ಗಳನ್ನು ಇರಿಸಲಾಗಿತ್ತು. ಇದೀಗ ಇವು ನಾಪತ್ತೆಯಾಗಿವೆ ಎಂದು ದೂರು ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಕಿಲ್​ ಡಿಕೆ ಬ್ರದರ್ಸ್’​​ ಎಂದು ಪೋಸ್ಟ್‌ ಹಾಕಿದ್ದವನ ಬಂಧನ

ಫೆಬ್ರವರಿ 20, 2020ರಿಂದ ವಿಮಾನ ನಿಲ್ದಾಣದಲ್ಲಿ ಕೆಲವು ಕೆಲಸಗಳನ್ನು ನಿರ್ವಹಿಸಿದ ನಂತರ, ಇತರ ಕೆಲಸಗಳಿಗಾಗಿ ಡಿಸೆಂಬರ್ 2022ರಿಂದ ಆವರಣದೊಳಗೆ ಉಳಿದ ನಿರ್ಮಾಣ ಸಾಮಗ್ರಿಗಳನ್ನು ಇರಿಸಲಾಗಿದೆ. ಸಂಸ್ಥೆಯ ಕಾರ್ಮಿಕರು ಕೆಲಸ ಮಾಡಲು ಸಾಮಗ್ರಿಗಳನ್ನು ತೆಗೆದುಕೊಳ್ಳಲು ಹೋದಾಗ, ಸಾಮಾನುಗಳು ಕಾಣೆಯಾಗಿರುವುದು ತಿಳಿದುಬಂದಿದೆ.

ವಸ್ತುಗಳು ಕಾಣೆಯಾಗಿರುವ ಬಗ್ಗೆ ಭದ್ರತಾ ಸಿಬ್ಬಂದಿಗೆ ಬಗ್ಗೆ ತಿಳಿದಿರಲಿಲ್ಲ ಎಂದು ಎಫ್ಐಆರ್ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X