ಬೆಂಗಳೂರು | ಬೆಳಿಗ್ಗೆ ಕೆಲಸಕ್ಕೆ ಸೇರಿ, ಮಧ್ಯಾಹ್ನ ಮಾಲೀಕನ ಮಗುವಿನ ಅಪಹರಣ

Date:

Advertisements

ಬೆಳಿಗ್ಗೆ ಕೆಲಸಕ್ಕೆ ಸೇರಿಕೊಂಡು ಮಧ್ಯಾಹ್ನದ ವೇಳೆಗೆ ಮಾಲೀಕನ ಮಗುವನ್ನೇ ಅಪಹರಿಸಿದ ಪ್ರಕರಣವೊಂದು ಬೆಂಗಳೂರಿನ ಕಾವೇರಿಪುರದಲ್ಲಿ ಡಿ.28ರಂದು ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಆರೋಪಿ ವಸೀಂ ಎಂಬಾತ ಕಳೆದ ಗುರುವಾರ ಶಫೀವುಲ್ಲಾ ಎಂಬವರ ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದಾನೆ. ಮಧ್ಯಾಹ್ನದ ವೇಳೆಗೆ ಅವರ ಮಗುವನ್ನು ಅಪಹರಿಸಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಶಫೀವುಲ್ಲಾ ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

Advertisements

ಶಫೀವುಲ್ಲಾ ಪತ್ನಿಯಿಂದ ವಿಚ್ಛೇದನ ಪಡೆದು ಮಗಳೊಂದಿಗೆ ಬೆಂಗಳೂರಿನ ಬನಶಂಕರಿ ಠಾಣೆ ವ್ಯಾಪ್ತಿಯ ಕಾವೇರಿಪುರದಲ್ಲಿ ವಾಸವಾಗಿದ್ದರು. ಶಫೀವುಲ್ಲ ಅವರು ಫರ್ನಿಚರ್‌ ಶಾಪ್‌ ಇಟ್ಟುಕೊಂಡಿದ್ದರು. ಈ ಹಿಂದೆ ಈತ ಶಫೀವುಲ್ಲ ಅವರ ಫರ್ನೀಚರ್‌ ಶಾಪ್‌ನಲ್ಲಿ ಕೆಲಸಕ್ಕೆ ಸೇರಿದ್ದ ವಸೀಂ ಎಂಬಾತ ಕೇಲವೇ ದಿನಗಳಲ್ಲಿ ಕೆಲಸ ಬಿಟ್ಟಿದ್ದನು.

ಮತ್ತೆ ಮಾಲೀಕನಿಗೆ ಕೆಲಸ ಕೊಡಿ ಎಂದು ಅಂಗಲಾಚಿ ಕಣ್ಣೀರು ಹಾಕಿದ್ದನು. ಹೀಗಾಗಿ, ಮಾಲೀಕ ಆತನಿಗೆ ಮತ್ತೆ ಕೆಲಸ ಕೊಟ್ಟಿದ್ದರು. ಕೆಲಸಕ್ಕಾಗಿ ಆರೋಪಿ ವಸೀಂ ಎಂಬಾತ ಡಿಸೆಂಬರ್ 28ರ ಬೆಳಿಗ್ಗೆ ಕೆಲಸಕ್ಕೆ ಸೇರಿದ್ದನು. ಮಧ್ಯಾಹ್ನ ಶಫೀವುಲ್ಲ್ ಅವರ ನಾಲ್ಕು ವರ್ಷದ ಮಗುವಿಗೆ ಚಾಕಲೇಟ್‌ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ.

ಈ ಸುದ್ದಿ ಓದಿದ್ದೀರಾ? 60 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಅರಣ್ಯ ಒತ್ತುವರಿ ತೆರವು

“ಕೆಲಸಕ್ಕೆ ಸೇರಿದ ದಿನವೇ ಮಗುವಿಗೆ ಚಾಕಲೇಟ್‌ ಕೊಡಿಸುವುದಾಗಿ ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ” ಎಂದು ಶಫೀವುಲ್ಲಾ ಆರೋಪಿಸಿದ್ದಾರೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಶಫೀವುಲ್ಲಾ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X