ಬೆಂಗಳೂರು | ಸಹಾಯ ಕೇಳುವ ನೆಪದಲ್ಲಿ ಮಕ್ಕಳ ಅಪಹರಣ; ಆರೋಪಿ ಮಹಿಳೆ ಬಂಧನ

Date:

  • ರಾತ್ರಿ ವೇಳೆ ಚಾಕು, ಚೂರಿ ತೋರಿಸಿ ದರೋಡೆ ಮಾಡುತ್ತಿದ್ದ ಆರೋಪಿ
  • ಮಾ. 29ರಂದು ಸ್ಕ್ರಾಪ್​ ಕಾರೊಂದರಲ್ಲಿ ಅನುಮಾನಸ್ಪಾದ ವ್ಯಕ್ತಿಯ ಮೃತದೇಹ ಪತ್ತೆ

ಮನೆಯಲ್ಲಿದ್ದ ಮಕ್ಕಳನ್ನು ಕದ್ದೊಯುತ್ತಿದ್ದ ಆರೋಪಿ ನಂದಿನಿ ಅಲಿಯಾಸ್ ಆಯೇಷಾಳನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ನಂದಿನಿ ಯಾವುದೋ ಒಂದು ಸಂಸ್ಥೆಯ ಬ್ರೋಷರ್ ಹಿಡಿದುಕೊಂಡು ಈ ಸಂಸ್ಥೆಗೆ ಧನ ಸಹಾಯ ಮಾಡಿ ಎಂದು ಜನರ ಮನೆ ಬಾಗಿಲಿಗೆ ತೆರಳಿ ಪರಿಪರಿಯಾಗಿ ಬೇಡಿಕೊಳ್ಳುತ್ತಿದ್ದಳು. ಈ ವೇಳೆ, ಮನೆಯವರು ಹಣ ತೆಗೆದುಕೊಂಡು ಬರಲು ಮನೆ ಒಳಗೆ ಹೋದಾಗ, ಮಗು ಅಥವಾ ಮನೆಯಲ್ಲಿರುವ ವಸ್ತುಗಳನ್ನು ಎತ್ತಿಕೊಂಡು ಪರಾರಿಯಾಗುತ್ತಿದ್ದಳು.

ಈ ಹಿಂದೆ, ಸಣ್ಣ ಪುಟ್ಟ ಪ್ರಕರಣಗಳಲ್ಲಿ ನಂದಿನಿ ಅಲಿಯಾಸ್ ಆಯೇಷಾ ಪೊಲೀಸರ ಅತಿಥಿಯಾಗಿದ್ದಳು. ಈಕೆ ಹೆಚ್ಚಾಗಿ ಬುರ್ಖಾ ಧರಿಸಿ ಮನೆಗಳಿಗೆ ತೆರಳುತ್ತಿದ್ದರಿಂದ ಸಿಸಿಟಿವಿಯಲ್ಲೂ ಈಕೆ ಯಾರು ಎಂಬ ಗುರುತುಗಳೂ ಸರಿಯಾಗಿ ಪತ್ತೆಯಾಗುತ್ತಿರಲಿಲ್ಲ ಎನ್ನಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೊಬೈಲ್, ಹಣ ಕದಿಯುತ್ತಿದ್ದ ಈಕೆ, ಇತ್ತೀಚೆಗೆ ರಾತ್ರಿ ವೇಳೆ ಚಾಕು, ಚೂರಿ ತೋರಿಸಿ ದರೋಡೆ ಕೂಡ ಮಾಡುತ್ತಿದ್ದಳು. ಮಕ್ಕಳನ್ನೂ ಕದಿಯುತ್ತಿದ್ದಳು ಎಂದು ಆರೋಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ಇನ್ನಿಲ್ಲ

ಕೆಲವು ದಿನಗಳ ಹಿಂದೆ, ಈಕೆ ಒಂದು ಮಗುವನ್ನು ಕಳ್ಳತನ ಮಾಡಿದ್ದಳು. ಆ ಮಗುವನ್ನು ತನ್ನ ಮನೆಯಲ್ಲಿಯೇ ಇಟ್ಟುಕೊಂಡಿದ್ದಳು. ಒಂದು ತಿಂಗಳ ಮಗುವಿಗೆ ಹಾಲು ಉಣಿಸದೇ ಮಗುವಿಗೆ ಉಪ್ಪಿಟ್ಟು ಕೊಟ್ಟಿದ್ದಳು. ಈ ವೇಳೆ, ಮಗು ಅಳುವುದನ್ನು ಕೇಳಿಸಿಕೊಂಡ ಅಕ್ಕಪಕ್ಕದವರು ಅನುಮಾನಗೊಂಡು ಮನೆಗೆ ನುಗ್ಗಿ ಮಗುವನ್ನು ರಕ್ಷಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕದ್ದ ಮಕ್ಕಳನ್ನು ಯಾರಿಗೆ ಕೊಡುತ್ತಿದ್ದಳು ಅಥವಾ ಏನು ಮಾಡುತ್ತಿದ್ದಳು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಕ್ರಾಪ್​ ಕಾರಿನಲ್ಲಿ ಅನುಮಾನಾಸ್ಪದ ವ್ಯಕ್ತಿಯ ಮೃತದೇಹ ಪತ್ತೆ

ಮಾರ್ಚ್‌ 29ರಂದು ಬೆಳಗ್ಗೆ ಸ್ಕ್ರಾಪ್​ ಕಾರೊಂದರಲ್ಲಿ ಅನುಮಾನಾಸ್ಪದವಾಗಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಸ್ಥಳೀಯರು ಸುಟ್ಟು ಕರಕಲಾಗಿರುವ ಕಾರೊಂದರಲ್ಲಿ ವ್ಯಕ್ತಿಯ ಶವ ಇರುವುದು ತಿಳಿದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಕೊಡಿಗೇಹಳ್ಳಿ ​ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...

ಲೋಕಸಭಾ ಚುನಾವಣೆ | ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭ: ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಮತದಾರರು

ರಾಜ್ಯದ 14 ಕ್ಷೇತ್ರಗಳಲ್ಲಿ ಏ.26ರಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ....

ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ ಎಂದ ನಟಿ ಶೃತಿ: ಮಹಿಳಾ ಆಯೋಗದಿಂದ ನೋಟಿಸ್

“ಪ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗೆ...