ಬೆಂಗಳೂರು | ಮೇ 10ರಂದು ತಪ್ಪದೆ ಮತದಾನ ಮಾಡಲು ಐಟಿ-ಬಿಟಿ ಉದ್ಯೋಗಿಗಳಿಗೆ ಸಂಬಳ ಸಹಿತ ರಜೆ

Date:

  • ಮತದಾನ ಉತ್ಸವದಲ್ಲಿ ತಪ್ಪದೆ ಭಾಗವಹಿಸಿ ಮತದಾನ ಮಾಡುವಂತೆ ಎಲ್ಲರಿಗೂ ತಿಳಿಸಿ
  • ಎಲ್ಲರಿಂದಲೂ ಮತದಾನ ಮಾಡಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ

“ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳು ಎಲ್ಲರೂ ಮೇ 10ರಂದು ತಪ್ಪದೆ ಮತದಾನ ಮಾಡುವ ಸಲುವಾಗಿ ಸಂಬಳ ಸಹಿತ ರಜೆ ನೀಡಲಾಗುವುದು” ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಭರವಸೆ ನೀಡಿದರು.

- Advertisement -

ಎಲೆಕ್ಟ್ರಾನಿಕ್ ಸಿಟಿಯ ಟೆಕ್ ಮಹೀಂದ್ರದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ವೇಳೆ ಮಾತನಾಡಿದ ಅವರು, “ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸ್ಥೆಗಳ ಸಿಇಒಗಳು ತಮ್ಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಉದ್ಯೋಗಿಗಳಿಗೆ ಮತದಾನ ಉತ್ಸವದಲ್ಲಿ ತಪ್ಪದೆ ಭಾಗವಹಿಸಿ ಮತದಾನ ಮಾಡಲು ತಿಳಿಸಿ” ಎಂದರು.

“ಬೆಂಗಳೂರು ವ್ಯಾಪ್ತಿಯಲ್ಲಿ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳಿಗೆ ಮತದಾನ ಮಾಡುವ ಒಲವು ಹೆಚ್ಚಾಗಿ ಇರುವುದಿಲ್ಲ. ಈ ಸಂಬಂಧ ಅವರಲ್ಲಿರುವಂತಹ ತಪ್ಪು ಕಲ್ಪನೆ ಹಾಗೂ ಆಲೋಚನೆಗಳನ್ನು ಬದಲಿಸಿ ಎಲ್ಲರಿಂದಲೂ ಮತದಾನ ಮಾಡಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ” ಎಂದು ಹೇಳಿದರು.

“ಬೆಂಗಳೂರು ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಬಾರಿ ಹೆಚ್ಚು ಮತದಾನ ಮಾಡಿಸುವ ಉದ್ದೇಶವನ್ನಿಟ್ಟುಕೊಂಡು, ಎಲ್ಲ ಕಡೆ ಮತದಾನ ಜಾಗೃತಿ ಜಾಥ, ನಾಟಕ ಸೇರಿದಂತೆ ನಮ್ಮ ಬೆಂಗಳೂರು ಐಕಾನ್ಸ್‌ಗಳ ಮೂಲಕ ಮತದಾರರು ತಪ್ಪದೆ ಮತಚಲಾಯಿಸುವಂತೆ ಪ್ರೇರೇಪಿಸುವ ಕೆಲಸ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದ್ಯುತ್ ಪ್ರವಹಿಸಿ ಕೇರಳ ಮೂಲದ ವ್ಯಕ್ತಿ ಸಾವು

ಈ ವೇಳೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಸಂಗಪ್ಪ, ಜಂಟಿ ಆಯುಕ್ತರಾದ ಕೃಷ್ಣಮೂರ್ತಿ, ನಾನಾ ಸಂಸ್ಥೆಗಳ ಸಿಇಒಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...