ಬೆಂಗಳೂರು | 9 ತಾಲ್ಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Date:

Advertisements

ಬೆಂಗಳೂರು ನಗರ ಜಿಲ್ಲೆಯ ಒಂಬತ್ತು ತಾಲ್ಲೂಕು ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ಮತ್ತು ನ್ಯಾಯಾಂಗ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ, ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಭ್ರಷ್ಟಾಚಾರ, ದುರಾಡಳಿತ ಹಾಗೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹಲವಾರು ದೂರುಗಳ ಬಂದ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯ ಐದು ಮತ್ತು ಬೆಂಗಳೂರು ನಗರ ಜಿಲ್ಲೆಯ ನಾಲ್ಕು ತಾಲ್ಲೂಕು ಕಚೇರಿಗಳ ಮೇಲೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಪೊಲೀಸ್ ವರದಿ ಆಧರಿಸಿ ಕಚೇರಿಗಳ ಮೇಲೆ ದಿಢೀರ್ ದಾಳಿ ಮಾಡಿ ಶೋಧ ಕಾರ್ಯ ನಡೆಸುವಂತೆ‌ ಆದೇಶಿಸಿದ್ದರು. ಲೋಕಾಯುಕ್ತದ ಪೊಲೀಸ್ ಮತ್ತು ನ್ಯಾಯಾಂಗ ವಿಭಾಗಗಳ ಒಂಬತ್ತು ತಂಡಗಳು ದಾಳಿ ಮಾಡಿದ್ದು, ಸದ್ಯ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Advertisements

ಎರಡು ಜಿಲ್ಲೆಗಳ ತಾಲ್ಲೂಕು ಕಚೇರಿಗಳ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ 599 ಪ್ರಕರಣಗಳು ಸದ್ಯ ವಿಚಾರಣೆ ಹಂತದಲ್ಲಿವೆ. ದಾಳಿ ಮಾಡಿರುವ ಒಂಬತ್ತು ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರದ ಬಗ್ಗೆ ಅಧಿಕಾರಿಗಳು ಗೌಪ್ಯ ಮಾಹಿತಿ ಸಂಗ್ರಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ

ಕಂದಾಯ ಭವನದಲ್ಲಿರುವ ಬೆಂಗಳೂರು ಉತ್ತರ ಮತ್ತು ದಕ್ಷಿಣ ತಾಲ್ಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು ಕಾರ್ಯಾಚರಣೆ ಪರಿಶೀಲಿಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X