ಬೆಂಗಳೂರು | ಜುಲೈ ವೇಳೆಗೆ ನಾಗಸಂದ್ರದಿಂದ ಮಾದಾವರದವರೆಗೆ ಮೆಟ್ರೋ ಸಂಚಾರ ಸಾಧ್ಯತೆ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ನಮ್ಮ ಮೆಟ್ರೋ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಬೆಂಗಳೂರಿನ ನಾಲ್ಕು ದಿಕ್ಕೂಗಳಿಗೂ ಮೆಟ್ರೋ ಸಂಚಾರ ಲಭ್ಯವಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮೆಟ್ರೋ ವ್ಯಾಪ್ತಿಯನ್ನು ವಿಸ್ತರಣೆ ಮಾಡುತ್ತಿದ್ದು, ನಾಗಸಂದ್ರದಿಂದ ಮಾದಾವರದವರೆಗೆ 3.3 ಕಿ.ಮೀ ಉದ್ದದ ಹಸಿರು ಮಾರ್ಗದ ಮೆಟ್ರೊ ಜುಲೈ ವೇಳೆಗೆ ಸಾರ್ವಜನಿಕ ಕಾರ್ಯಾಚರಣೆಗೆ ಮುಕ್ತವಾಗುವ ಸಾಧ್ಯತೆಯಿದೆ.

ನಾಗಸಂದ್ರದಿಂದ ಮಾದಾವರದವರೆಗೆ 3.3 ಕಿ.ಮೀ ಉದ್ದದ ಹಸಿರು ಮಾರ್ಗದ ಮೆಟ್ರೊ ಜುಲೈ ವೇಳೆಗೆ ಸಾರ್ವಜನಿಕ ಕಾರ್ಯಾಚರಣೆಗೆ ಮುಕ್ತವಾಗುವ ಸಾಧ್ಯತೆಯಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

₹298 ಕೋಟಿ ವೆಚ್ಚದ ಮೆಟ್ರೋ ಮಾರ್ಗವು ನಾಗಸಂದ್ರದ ಆಚೆಗೆ ಮಂಜುನಾಥ್ ನಗರ, ಚಿಕ್ಕಬಿದರಕಲ್ಲು ಹಾಗೂ ಮಾದಾವರ ನಿಲ್ದಾಣಗಳನ್ನು ಒಳಗೊಂಡಿದೆ.

Advertisements

ನಾಗಸಂದ್ರದಿಂದ ಮಾದಾವರವರೆಗಿನ (ಬಿಐಇಸಿ) ರೀಚ್–3 ಕಾಮಗಾರಿಗೆ 2017ರ ಮೇ ತಿಂಗಳಲ್ಲಿ ಚಾಲನೆ ನೀಡಲಾಗಿತ್ತು. ಭೂಸ್ವಾಧೀನ ಮತ್ತು ಕಾಮಗಾರಿಗೆ ₹964 ಕೋಟಿ ಮೀಸಲಿಡಲಾಗಿತ್ತು. ಭೂಸ್ವಾಧೀನ ಪ್ರಕ್ರಿಯೆ ಕಗ್ಗಂಟಾಗಿ ಪರಿಣಮಿಸಿತ್ತು. ಹೈಕೋರ್ಟ್‌ನಲ್ಲಿ ವ್ಯಾಜ್ಯ ಇತ್ಯರ್ಥವಾಗಲು ಸುಮಾರು ನಾಲ್ಕು ವರ್ಷಗಳು ಬೇಕಾದವು. ಆನಂತರ ಕಾಮಗಾರಿ ಚುರುಕುಗೊಂಡಿತು. ಮಂಜುನಾಥನಗರ, ಚಿಕ್ಕಬಿದರಕಲ್ಲು (ಜಿಂದಾಲ್) ಮೆಟ್ರೊ ನಿಲ್ದಾಣಗಳ ಕಾಮಗಾರಿ ಮುಕ್ತಾಯಗೊಂಡಿವೆ.

ತುಮಕೂರು ರಸ್ತೆಯಲ್ಲಿ ವಿಪರೀತ ವಾಹನ ದಟ್ಟಣೆ ಉಂಟಾಗಿದೆ. ನೆಲಮಂಗಲ ಕಡೆಯಿಂದ ಪೀಣ್ಯ ಕೈಗಾರಿಕಾ ವಲಯ ಸಹಿತ ಬೆಂಗಳೂರಿನ ನಾನಾ ಕಡೆಗೆ ಬರುವ ಕಾರ್ಮಿಕರು, ಉದ್ಯೋಗಿಗಳು ನಾಗಸಂದ್ರದವರೆಗೆ ಬಂದು ಮೆಟ್ರೊ ರೈಲು ಹತ್ತುತ್ತಿದ್ದಾರೆ. ಮಾದಾವರವರೆಗೆ ಮೆಟ್ರೊ ಪ್ರಾರಂಭವಾದರೆ, 3 ಕಿ.ಮೀ. ಮೊದಲೇ ಮೆಟ್ರೊ ಸೇವೆ ಅವರಿಗೆ ಲಭ್ಯವಾಗಲಿದೆ. ವಾಹನ ದಟ್ಟಣೆ ಕಡಿಮೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜ.16ರಿಂದ 19ರ ವರೆಗೆ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್

“ಈಗಾಗಲೇ, ಮೆಟ್ರೋ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಸದ್ಯಕ್ಕೀಗ ಪ್ರಕ್ರಿಯೆಯಲ್ಲಿ ಪೂರ್ಣಗೊಳಿಸುವ ಕೆಲಸ ಮಾತ್ರ ಬಾಕಿಯಿವೆ. ಇನ್ನು ಟ್ರ್ಯಾಕ್ ಹಾಕುವ ಕಾಮಗಾರಿ ಪೂರ್ಣಗೊಳ್ಳಲು 2.5 ತಿಂಗಳು ಬೇಕಾಗಲಿದೆ. ಮೆಟ್ರೋ ರೈಲು ಸುರಕ್ಷತಾ ಆಯುಕ್ತರಿಂದ ರೈಲುಗಳ ಪ್ರಾಯೋಗಿಕ ಓಡಾಟ ನಡೆಯಲಿದ್ದು, ಜುಲೈ ವೇಳೆಗೆ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ” ಎಂದು ಬಿಎಂಆರ್‌ಸಿಎಲ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X