₹10 ಸಾವಿರ ಕೋಟಿ ಖರ್ಚು ಮಾಡಿ ಬೆಂಗಳೂರು-ಮೈಸೂರಿಗೆ ಅವೈಜ್ಞಾನಿಕ ಎಕ್ಸ್‌ಪ್ರೆಸ್‌ ವೇ ನಿರ್ಮಾಣ: ಮೋಹನ್ ದಾಸರಿ

Date:

  • ಅಮಾಯಕರ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರವೇ ನೇರ ಹೊಣೆ
  • ವಾಹನ ಚಾಲಕರಿಗೆ ಆಪ್‌ನಿಂದ ಜಾಗರೂಕತೆಯಿಂದ ಚಲಿಸಿ ಎಂಬ ಸಂದೇಶ

“ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಳೆದ 9 ತಿಂಗಳಿನಲ್ಲಿ 165ಕ್ಕೂ ಹೆಚ್ಚು ಅಮಾಯಕ ಚಾಲಕರು ಮತ್ತು ಪ್ರಯಾಣಿಕರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದಕ್ಕೆ ಬಿಜೆಪಿ ಸರ್ಕಾರವೇ ನೇರ ಹೊಣೆ ಹೊರಬೇಕಾಗುತ್ತದೆ. ₹10 ಸಾವಿರ ಕೋಟಿ ಖರ್ಚು ಮಾಡಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಮಾಡಿದ್ದಾರೆ” ಎಂದು ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದರು.

- Advertisement -

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಕಣಮಣಿಕೆ ಟೋಲ್ ಪ್ಲಾಜಾ ಬಳಿ ಆಮ್‌ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಶುಕ್ರವಾರ ಬೆಳಗ್ಗೆ ‘ಸಾವಿನ ರಹದಾರಿ’ ಅಭಿಯಾನ ನಡೆಸಿದರು. ಜತೆಗೆ ವಾಹನ ಚಲಾಯಿಸುವವರಿಗೆ ಕರಪತ್ರ ನೀಡುವ ಮೂಲಕ ಜಾಗರೂಕತೆಯಿಂದ ಚಲಿಸಿ, ಪ್ರಾಣವನ್ನು ಉಳಿಸಿಕೊಳ್ಳಿ ಎಂಬ ಸಂದೇಶವನ್ನು ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ವೇಳೆ ಮಾತನಾಡಿದ ಅವರು, “ಭ್ರಷ್ಟಾಚಾರದಿಂದ ಕೂಡಿರುವ ಇಂತಹ ಹೆದ್ದಾರಿಗಳು ದೇಶಕ್ಕೆ ಅಪಮಾನಕಾರಿ ಸಂಗತಿ. ಸ್ವಾಧೀನ ಪ್ರಕ್ರಿಯೆಯಲ್ಲಿ ಸಂಪೂರ್ಣ ಭ್ರಷ್ಟಾಚಾರವಾಗಿದ್ದು, ಈ ಹಿಂದಿನ ಬಿಜೆಪಿ ಸರ್ಕಾರವು ಸಂಪೂರ್ಣ ಹೊಣೆಗಾರಿಕೆಯನ್ನು ಹೊರಬೇಕಾಗುತ್ತದೆ. ಈಗಿನ ಕಾಂಗ್ರೆಸ್ ಸರ್ಕಾರವು ಸೂಕ್ತ ತನಿಖೆ ನಡೆಸಿ ಹೆದ್ದಾರಿ ಸರಿಪಡಿಸಬೇಕು” ಎಂದು ತಿಳಿಸಿದರು.  

“ಸರ್ಕಾರವೇ ಈ ಹೆದ್ದಾರಿಯ ಟೋಲ್ ಸಂಗ್ರಹ ಮಾಡಬಾರದೆಂದು ತಿಳಿಸಿದ್ದರೂ, ಸಹ ಜುಲೈ ಒಂದರಿಂದ ಶ್ರೀರಂಗಪಟ್ಟಣದಲ್ಲಿ ಟೋಲ್ ಸಂಗ್ರಹಣೆ ಮಾಡುತ್ತಿರುವುದು ಭಾರತೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ದುರ್ನಡತೆಗೆ ಸಾಕ್ಷಿ. ರಾಜ್ಯ ಕಾಂಗ್ರೆಸ್ ಸರ್ಕಾರವು ಸೂಕ್ತ ಆದೇಶವನ್ನು ನೀಡಬೇಕಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಜು.2ರಂದು ಎರಡು ಗಂಟೆ ಅವಧಿಗೆ ವಾಣಿಜ್ಯ ಸೇವೆ ತಾತ್ಕಾಲಿಕ ಸ್ಥಗಿತ

ಅಭಿಯಾನದಲ್ಲಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ, ರಾಜ್ಯ ಉಪಾಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು, ಉಪಾಧ್ಯಕ್ಷ ಸುರೇಶ್ ರಾಥೋಡ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...