ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ನಿರ್ಗಮನ ದ್ವಾರದ ಬಳಿ ಅಳವಡಿಸಿದ ನಾಮಫಲಕ ಹೊತ್ತುರಿದ ಕಾರಣ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಯಿತು.
ಮಾದಾವರದಿಂದ ರೇಷ್ಮೆ ಸಂಸ್ಥೆಯ ಕಡೆಗಿನ ಹಸಿರು ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಮಧ್ಯಾಹ್ನ 1:30ರ ಸುಮಾರಿಗೆ ನಾಮಫಲಕ ಹೊತ್ತುರಿದಿದೆ. ಮೆಟ್ರೋ ಆವರಣದ ಸುತ್ತಲೂ ದಟ್ಟ ಹೊಗೆ ಆವರಿಸಿದೆ. ಕೂಡಲೇ ಪ್ಲಾಟ್ಫಾರ್ಮ್ನಲ್ಲಿದ್ದ ಪ್ರಯಾಣಿಕರನ್ನು ಹೊರಕಳುಹಿಸಲಾಗಿದೆ ಮತ್ತು ನಿಲ್ದಾಣಕ್ಕೆ ಬರಲಿದ್ದ ರೈಲುಗಳನ್ನು ಸ್ಥಗಿತಗೊಳಿಸಲಾಯಿತು. ತಕ್ಷಣವೇ ಮೆಟ್ರೋ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ದುರದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ.
ಘಟನೆ ಸಂಭವಿಸದ ಕೂಡಲೇ ನಾಗಸಂದ್ರ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಕೆಲಕಾಲದ ನಂತರ ಪರಿಸ್ಥಿತಿ ಯಥಾಸ್ಥಿತಿಗೆ ಮರಳಿದ್ದು, ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು BMRCL ಮಾಹಿತಿ ನೀಡಿದೆ.




