ಬೆಂಗಳೂರು | ರಾಜಕಾಲುವೆ ಒತ್ತುವರಿ ಮಾಡಿದ್ದ ಬಿಲ್ಡರ್‌ಗೆ ₹85 ಲಕ್ಷ ದಂಡ ವಿಧಿಸಿದ ಎನ್‌ಜಿಟಿ

Date:

  • ಸ್ಥಳೀಯ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಿಲ್ಲ
  • ಸ್ಥಳೀಯರ ಸತತ ಎರಡು ವರ್ಷಗಳ ಹೋರಾಟಕ್ಕೆ ಸಿಕ್ಕ ಫಲ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜಕಾಲುವೆ ಹಾಗೂ ಬಫರ್ ಜೋನ್ ಅತಿಕ್ರಮಣ ಮಾಡಿಕೊಂಡು ಶೌಚಾಲಯ ಮತ್ತು ಈಜುಕೊಳ ನಿರ್ಮಿಸಿದ್ದ ಖಾಸಗಿ ಬಿಲ್ಡರ್‌ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಒತ್ತುವರಿ ತೆರವುಗೊಳಿಸುವಂತೆ ಆದೇಶ ನೀಡಿ, ₹85 ಲಕ್ಷ ದಂಡ ವಿಧಿಸಿದೆ.

ಖಾಸಗಿ ಬಿಲ್ಡರ್‌ಗಳು ಬೆಂಗಳೂರಿನ ಪೂರ್ವ ತಾಲೂಕು ಕುಂಬೇನ ಅಗ್ರಹಾರ ಮೂಲಕ ಹಾದು ಹೋಗಿದ್ದ ರಾಜಕಾಲುವೆ ಹಾಗೂ 15 ಮೀಟರ್ ಬಫರ್ ಜೋನ್​ನಲ್ಲಿ ಒತ್ತುವರಿ ಮಾಡಿದ್ದರು.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವದನ್ನು ತೆರುವು ಮಾಡುವಂತೆ ಸ್ಥಳೀಯರೆಲ್ಲರೂ ತಿಳಿಸಿದ್ದರು. ಈ ವಿಚಾರವಾಗಿ ಸ್ಥಳೀಯ ಅಧಿಕಾರಿಗಳಿಗೆ ದೂರು ನೀಡಿದರೂ, ಯಾವುದೇ ಪ್ರಯೋಜನವಾಗಿರಲಿಲ್ಲ. ಖಾಸಗಿ ಬಿಲ್ಡರ್‌ ಒತ್ತುವರಿ ಮಾಡಿಕೊಂಡಿರುವ ಪ್ರದೇಶವನ್ನು ತೆರವು ಮಾಡಿರಲಿಲ್ಲ.  

ರಾಜಕಾಲುವೆ ಒತ್ತುವರಿ ತೆರುವು ಆಗದ ಹಿನ್ನಲೆ, ಸ್ಥಳೀಯರೆಲ್ಲರೂ ಸೇರಿ ರಾಜಕಾಲುವೆ ಹಾಗೂ ಬಫರ್ ಜೋನ್ ಉಳಿಸುವ ಯೋಚನೆಯಿಂದ ಈ ಬಗ್ಗೆ ಚನ್ನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾರ್ಕಿಂಗ್‌ ವಿಚಾರಕ್ಕೆ ಜಗಳ : ಸಹೋದ್ಯೋಗಿಯ ಕೊಲೆ

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಲ್ಲಿ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವೂ ಒತ್ತುವರಿ ತೆರವು ಮಾಡುವಂತೆ ಬಿಲ್ಡರ್‌ಗೆ ತಿಳಿಸಿದೆ. ಜತೆಗೆ ಒತ್ತುವರಿ ಮಾಡಿಕೊಂಡಿರುವವರಿಗೆ ₹85 ಲಕ್ಷ ದಂಡ ವಿಧಿಸಿದೆ.

ಸ್ಥಳೀಯರ ಸತತ ಎರಡು ವರ್ಷಗಳ ಹೋರಾಟಕ್ಕೆ ಫಲ ಸಿಕ್ಕಿದೆ. ನ್ಯಾಯಾಲಯದ ಈ ಆದೇಶದ ಬೆನ್ನಲ್ಲೆ, ಸ್ಥಳೀಯ ಅಧಿಕಾರಿಗಳು ರಾಜಕಾಲುವೆ ಒತ್ತುವರಿಯನ್ನು ತೆರವು ಮಾಡಿದ್ದಾರೆ. ಈಗ ರಾಜಕಾಲುವೆಯ ಬಫರ್ ಜೋನ್​ನಲ್ಲಿ ‘ಗ್ರೀನ್ ಲ್ಯಾಂಡ್’ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ

ಕೇಂದ್ರ ಸರ್ಕಾರ ಹಾಗೂ ನಾನಾ ರಾಜ್ಯಗಳಲ್ಲಿ ಉದ್ಯೋಗ ಮಾಡಿ ನಿವೃತ್ತಿ ಹೊಂದಿ...

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಮಕ್ಕಳಿಗಿದು ಸುರಕ್ಷಿತ ತಾಣವೇ?

ಕಳೆದ ಐದು ವರ್ಷಗಳಲ್ಲಿ ಕರ್ನಾಟಕ ನಾಲ್ವರು ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೂ ರಾಜ್ಯದ...

ಹೆಣ್ಣುಭ್ರೂಣ ಹತ್ಯೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ; ಹಲವರ ಕೈವಾಡವಿರುವ ಶಂಕೆ

ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಪ್ರಕರಣದ ಆರೋಪಿಗಳು 1,500ಕ್ಕೂ ಅಧಿಕ...

ಬೆಂಗಳೂರು | ನ. 29ರಂದು ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ-ಉರ್ದು ಕವಿಗೋಷ್ಠಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ...