ಬೆಂಗಳೂರು | 80 ವರ್ಷ ಮೇಲ್ಪಟ್ಟವರಿಗಾಗಿ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ : ತುಷಾರ್ ಗಿರಿನಾಥ್

Date:

  • ಮತಗಟ್ಟೆಗಳ ಬಳಿ ಎಲ್ಲ ರೀತಿಯ ಸೌಲಭ್ಯ : ತುಷಾರ್ ಗಿರಿನಾಥ್
  • ಮತದಾನದ ಪ್ರಾಮುಖ್ಯತೆ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ

ಬೆಂಗಳೂರಿನಲ್ಲಿ 80 ವರ್ಷ ಮೇಲ್ಪಟ್ಟವರಿಗಾಗಿ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗವನ್ನು ಎಲ್ಲ ಹಿರಿಯ ನಾಗರಿಕರು ಪಡೆದುಕೊಂಡು ಮತ ಚಲಾಯಿಸಬೇಕು ಹಾಗೂ ಯುವ ಮತದಾರರಲ್ಲಿ ಮತದಾನದ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದರು.

ಪಶ್ಚಿಮ ಹಾಗೂ ದಕ್ಷಿಣ ವಲಯದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಅವರು, “ಹೆಚ್ಚು ಮತದಾನವಾಗಬೇಕೆಂಬ ಉದ್ದೇಶದಿಂದ ಚುನಾವಣಾ ಆಯೋಗವು ಮತಗಟ್ಟೆಗಳ ಬಳಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿದೆ. ಈ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಬೇಕಿದೆ” ಎಂದು ಹೇಳಿದರು.

“ನಗರದಲ್ಲಿ ಮತದಾನ‌ ಮಾಡುವ ಪ್ರತಿಯೊಬ್ಬರೂ ಮತಚಲಾಯಿಸುವಂತೆ ಮಾಡಿ ಮತದಾನದ ಶೇಖಡಾವಾರು ಪ್ರಮಾಣವನ್ನು ಹೆಚ್ವಿಸಬೇಕು. ಪಾಲಿಕೆ ಘನತ್ಯಾಜ್ಯ ವಿಭಾಗದ ಆಟೋ ಟಿಪ್ಪರ್‌ಗಳಲ್ಲಿ ಧ್ವನಿವರ್ಧಕಗಳ ಮೂಲಕ ಮತದಾನದ ಪ್ರಾಮುಖ್ಯತೆ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಸಭೆಯಲ್ಲಿ ಟಿ.ಎನ್.ಬಾಲಕೃಷ್ಣ ಅವರ ನಿರ್ದೇಶನದಲ್ಲಿ ಬಿ.ಎಂ.ಟಿ.ಸಿ-ಕೆ.ಎಸ್.ಆರ್.ಟಿ.ಸಿಯ ನಾಟಕ ತಂಡವು “ಮತದಾನ ಸಂಕಲ್ಪ” ಎಂಬ ಜಾಗೃತಿ ನಾಟಕವನ್ನು ಪ್ರದರ್ಶಿಸಿದರು.

ಈ ವೇಳೆ ವಲಯ ಆಯುಕ್ತರಾದ ಡಾ. ಆರ್.ಎಲ್.ದೀಪಕ್, ಜಯರಾಮ್ ರಾಯ್‌ಪುರ, ರೆಡ್ಡಿ ಶಂಕರಬಾಬು, ಪ್ರೀತಿ ಗೆಹ್ಲೋಟ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಝೀರೋ ಟ್ರಾಫಿಕ್‌ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ನೀಡದ ನಿಮ್ಹಾನ್ಸ್‌; ಸಾವು

ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಒಂದು ವರ್ಷದ ಪುಟ್ಟ ಕಂದಮ್ಮನಿಗೆ...

ಬೆಂಗಳೂರು | ಪ್ರಿಯಕರನ ಮೊಬೈಲ್‌ನಲ್ಲಿತ್ತು 13 ಸಾವಿರ ನಗ್ನ ಫೋಟೋ: ದೂರು ದಾಖಲಿಸಿದ ಪ್ರಿಯತಮೆ

ಸಹೋದ್ಯೋಗಿ, ಪ್ರಿಯತಮೆ ಸೇರಿದಂತೆ ಮಹಿಳೆಯರ 13,000ಕ್ಕೂ ಹೆಚ್ಚು ನಗ್ನ ಫೋಟೋಗಳನ್ನು ಮೊಬೈಲ್‌ನಲ್ಲಿ...

ಭಾರತದ ಅಭಿವೃದ್ಧಿಗೆ ಬಂಡವಾಳಶಾಹಿ ಮಾತ್ರವೇ ಏಕೈಕ ಪರಿಹಾರ: ಇಸ್ಫೋಸಿಸ್ ನಾರಾಯಣ ಮೂರ್ತಿ

ಭಾರತದಂತಹ ಬಡ ದೇಶವು ಅಭಿವೃದ್ಧಿ ರಾಷ್ಟ್ರವಾಗಲು ಸಹಾನುಭೂತಿಯುಳ್ಳ ಬಂಡವಾಳಶಾಹಿಯ ಅಗತ್ಯವಿದೆ. ಅದೊಂದೇ...