ಬೆಂಗಳೂರು | ಮಾರ್ಚ್‌ನಲ್ಲಿ 79,027 ಪಾಸ್‌ಪೋರ್ಟ್‌ ವಿತರಿಸಿದ ರಿಜನಲ್ ಪಾಸ್‌ಪೋರ್ಟ್ ಆಫೀಸ್

Date:

Advertisements
  • ಅತಿ ಹೆಚ್ಚು ಪಾಸ್‌ಪೋರ್ಟ್‌ಗಳ ವಿತರಣೆಯಲ್ಲಿ ಬೆಂಗಳೂರು ಮೊದಲ ಸ್ಥಾನ
  • 2021ರಲ್ಲಿ ಪಾಸ್‌ಪೋರ್ಟ್‌ ಪಡೆಯುವುದು ಕಷ್ಟದ ಕೆಲಸವಾಗಿತ್ತು

ಬೆಂಗಳೂರಿನಲ್ಲಿ ಪಾಸ್‌ಪೋರ್ಟ್‌ಗಳನ್ನು ಮಾಡಿಸುವವರ ಸಂಖ್ಯೆ ಹೆಚ್ಚಾಗಿದೆ. ನಗರದ ರಿಜನಲ್ ಪಾಸ್‌ಪೋರ್ಟ್ ಆಫೀಸ್ ಮಾರ್ಚ್‌ ತಿಂಗಳಲ್ಲಿ ಬರೋಬ್ಬರಿ 79,027 ಪಾಸ್‌ಪೋರ್ಟ್‌ಗಳನ್ನು ವಿತರಿಸಿದೆ.

ರಾಜ್ಯದಲ್ಲಿ ಮಾರ್ಚ್‌ ತಿಂಗಳಿನಲ್ಲಿ ಅತಿ ಹೆಚ್ಚು ಪಾಸ್‌ಪೋರ್ಟ್‌ಗಳನ್ನು ಬೆಂಗಳೂರಿನ ಪಾಸ್‌ಪೋರ್ಟ್ ಸೇವಾ ಕೇಂದ್ರಗಳು (ಪಿಎಸ್‌ಕೆ) ನೀಡಿದ್ದು, ಮೊದಲ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಹಾಗೂ ಮೈಸೂರು ಇದೆ.

ಮಂಗಳೂರಿನಲ್ಲಿ ಪಾಸ್‌ಪೋರ್ಟ್‌ ಮಾಡಿಸುವವರ ಸಂಖ್ಯೆ ಗಣನೀಯ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ ವಿತರಿಸಿದ 79,027 ಹೊಸ ಪಾಸ್‌ಪೋರ್ಟ್‌ಗಳನ್ನು ಮುದ್ರಿಸಲಾಗಿದೆ ಮತ್ತು ನವೀಕರಣ ಮಾಡಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? 2023ರ ವಿಧಾನಸಭಾ ಚುನಾವಣೆ | ಮತದಾರರ ಓಲೈಕೆಗೆ ‘ಉಚಿತ’ಗಳ ಸುರಿಮಳೆ; ಇವು ಕೇವಲ ಭರವಸೆಗಳೇ?

ದೇಶದಲ್ಲಿ ಕೋವಿಡ್ ಇದ್ದ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ರಯಾಣ ನಿಷೇಧದಿಂದಾಗಿ ಪಾಸ್‌ಪೋರ್ಟ್‌ ಅರ್ಜಿದಾರರ ಸಂಖ್ಯೆ ಕುಸಿದಿತ್ತು. ಈಗ ಹೊಸ ಅರ್ಜಿಗಳು ಮತ್ತು ಪಾಸ್‌ಪೋರ್ಟ್‌ಗಳ ನವೀಕರಣಕ್ಕಾಗಿ ಪಿಎಸ್‌ಕೆಗಳಲ್ಲಿ ಅರ್ಜಿಗಳು ಹೆಚ್ಚಾಗಿವೆ.

2021ರಲ್ಲಿ ಪಾಸ್‌ಪೋರ್ಟ್‌ ಪಡೆಯುವುದು ಕಷ್ಟದ ಕೆಲಸವಾಗಿತ್ತು. ಈಗ ಹೊಸ ಪಾಸ್‌ಪೋರ್ಟ್‌ಗಳು ಮತ್ತು ಪೊಲೀಸ್-ಕ್ಲಿಯರೆನ್ಸ್ ಪ್ರಮಾಣ ಪತ್ರಗಳ ಅಪಾಯಿಂಟ್‌ಮೆಂಟ್‌ಗಳು ಒಂದು ವಾರ ಅಥವಾ ಎರಡು ವಾರಗಳಲ್ಲಿ ಸಿಗುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X