ಬೆಂಗಳೂರು | ಕೆನ್ಸಿಂಗ್ಟನ್ ಜಂಕ್ಷನ್ ಸಮೀಪದ ರಸ್ತೆ ಕುಸಿತ: ದೊಡ್ಡ ಗುಂಡಿ ನಿರ್ಮಾಣ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಂಡಿಗಳದೇ ದರ್ಬಾರಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಕಿ ಅಂಶಗಳ ಪ್ರಕಾರ ಸದ್ಯ ನಗರದಲ್ಲಿ 11,366 ಗುಂಡಿಗಳಿವೆ. ಕಳಪೆ ಕಾಮಗಾರಿ, ಅತಿಯಾದ ಮಳೆ ಸೇರಿದಂತೆ ಇನ್ನಿತರೆ ಹಲವು ಕಾರಣಗಳಿಂದ ರಸ್ತೆಗಳಲ್ಲಿ ಗುಂಡಿಗಳು ಬೀಳುತ್ತಿವೆ. ಇದೀಗ ನಗರದ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪದ ರಸ್ತೆ ಕುಸಿದಿದ್ದು, ದೊಡ್ಡ ಗುಂಡಿ ಬಿದ್ದಿದೆ.

ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಗುಂಡಿ ಬಿದ್ದಿದ್ದು, ಮುಂಜಾಗ್ರತಾ ಕ್ರಮವಾಗಿ ಗುಂಡಿಯ ಸುತ್ತಲು ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಕೆನ್ಸಿಂಗ್ಟನ್ ಜಂಕ್ಷನ್ ಬಳಿ ಸಂಚಾರ ನಡೆಸುವವರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗಿದೆ.

ಈ ಮುಖ್ಯ ರಸ್ತೆಯಲ್ಲಿ ವೈಟ್‌ ಟಾಪಿಂಗ್‌ ಮಾಡಲಾಗಿದೆ. ಆದರೆ, ರಸ್ತೆ ಸಂಪೂರ್ಣವಾಗಿ ಕುಸಿದಿದ್ದು, ದೊಡ್ಡ ಗುಂಡಿ ನಿರ್ಮಾಣವಾಗಿದೆ. ಯಾವುದೇ ಅವಘಡಗಳು ನಡೆಯದಿರಲು ಮುಂಜಾಗೃತಾ ಕ್ರಮವಾಗಿ ಬೆಂಗಳೂರು ಸಂಚಾರ ಪೊಲೀಸರು ದೊಡ್ಡ ಗುಂಡಿಯ ಸುತ್ತಲು ಬ್ಯಾರಿಕೇಡ್ ಅಳವಡಿಸಿದ್ದಾರೆ. ಯಾವ ಕಾರಣಕ್ಕೆ ರಸ್ತೆ ಕುಸಿದಿದೆ ಎಂಬ ಬಗ್ಗೆ ಪರಿಶೀಲನೆ ನಡೆದಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಳೆ ವೈಷಮ್ಯಕ್ಕೆ 24 ವರ್ಷದ ಆಟೋ ಚಾಲಕನ ಹತ್ಯೆ: 11 ಆರೋಪಿಗಳ ಬಂಧನ

ರಸ್ತೆಗುಂಡಿಗಳಿಂದ ನಗರದಲ್ಲಿ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತವೆ. ಬಿಬಿಎಂಪಿ ನವೆಂಬರ್‌ ಒಳಗಡೆ ಬೆಂಗಳೂರಿನಲ್ಲಿ ಇರುವ ಶೇ.90ರಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲು ಗುರಿ ಹಾಕಿಕೊಂಡಿತ್ತು. ನಗರದಲ್ಲಿನ ಯಾವ ರಸ್ತೆಗಳು ಇನ್ನೂ ಗುಂಡಿ ಮುಕ್ತವಾಗಿಲ್ಲ.

ಮಳೆ ಬಿಟ್ಟು ಬಿಡದೇ ಸುರಿಯುವ ಕಾರಣ ರಸ್ತೆಗುಂಡಿ ಮುಚ್ಚಲು ಸಾಧ್ಯವಾಗಿಲ್ಲ ಎಂದು ಬಿಬಿಎಂಪಿ ಹೇಳುತ್ತದೆ. ಆದರೆ, ಈ ವರ್ಷ ಸರಿಯಾದ ಸಮಯಕ್ಕೆ ಮಳೆ ಕೂಡ ಆಗಿಲ್ಲ. ಆದರೂ ನಗರದಲ್ಲಿ ಗುಂಡಿಗಳು ರಾರಾಜಿಸುತ್ತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X