ಬೆಂಗಳೂರು | ಕುಡಿಯುವ ನೀರನ್ನು ಈ ಚಟುವಟಿಕೆಗಳಿಗೆ ಬಳಸಿದರೆ 5,000 ರೂ. ದಂಡ

Date:

Advertisements

ಕಳೆದ ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ಬೆಂಗಳೂರು ನಗರವು ಪರದಾಡುವಂತೆ ಮಾಡಿತ್ತು. ಈಗ, ಈ ವರ್ಷದ ಬೇಸಿಕೆ ಎದುರಾಗುತ್ತಿದೆ. ಬೇಸಿಗೆಯಲ್ಲಿ ನೀರಿನ ಬಿಕ್ಕಟ್ಟು ಎದುರಾಗದಂತೆ ಎಚ್ಚರಿಕೆ ಹವಿಸಲು, ಕುಡಿಯುವ ನೀರಿನ ವ್ಯರ್ಥ ಬಳಕೆಯನ್ನು ತಡೆಯಲು ಜಲಮಂಡಳಿ ಮುಂದಾಗಿದೆ. ಕುಡಿಯುವ ನೀರನ್ನು ವ್ಯರ್ಥ ಮಾಡುವವರಿಗೆ ದಂಡ ವಿಧಿಸುವುದಾಗಿ ಘೊಷಿಸಿದೆ.

ಕಾರು ತೊಳೆಯುವುದು, ತೋಟಗಾರಿಕೆ ಸೇರಿದಂತೆ ಇತರ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸಿದರೆ 5,000 ರೂ. ದಂಡ ವಿಧಿಸಲಾಗುವುದು ಎಂದು ಜಲ ಮಂಡಳಿ ತಿಳಿಸಿದೆ. ಪದೇ-ಪದೇ ತಪ್ಪು ಮಾಡಿದರೆ, ಹೆಚ್ಚುವರಿ ದಂಡ ವಿಧಿಸುವುದಾಗಿಯೂ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಜಲಮಂಡಳಿ, “ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಹನ ತೊಳೆಯುವುದು, ತೋಟಗಾರಿಕೆ, ನಿರ್ಮಾಣ, ಅಲಂಕಾರಿಕ ಉದ್ಯಾನ, ಮನರಂಜನಾ ಉದ್ದೇಶಗಳು, ರಸ್ತೆ ನಿರ್ಮಾಣ, ಶುಚಿತ್ವ ಕೆಲಸಗಳು ಹಾಗೂ ಸಿನೆಮಾ ಹಾಲ್‌ಗಳು ಮತ್ತು ಮಾಲ್‌ಗಳಲ್ಲಿ ಇತರ ಯಾವುದೇ ಉದ್ದೇಶಕ್ಕೆ ಕುಡಿಯುವ ನೀರನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ” ಎಂದು ಹೇಳಿದೆ.

Advertisements

“ನಿಯಮವನ್ನು ಉಲ್ಲಂಘಿಸುವವರಿಗೆ ಜಲಮಂಡಳಿ ಕಾಯ್ದೆಯ ಸೆಕ್ಷನ್ 109ರ ಅಡಿಯಲ್ಲಿ 5,000 ರೂ. ದಂಡ ವಿಧಿಸಲಾಗುವುದು. ಪುನರಾವರ್ತಿತ ಅಪರಾಧಗಳಿಗೆ 5,000 ರೂ. ಜೊತೆಗೆ ಹೆಚ್ಚುವರಿಯಾಗಿ ದಿನಕ್ಕೆ 500 ರೂ. ದಂಡ ವಿಧಿಸಲಾಗುವುದು. ನಿಯಮವನ್ನು ಉಲ್ಲಂಘಿಸುವುದು ಕಂಡುಬಂದರೆ ನಿವಾಸಿಗಳು ಕಾಲ್‌ಸೆಂಟರ್ ಸಂಖ್ಯೆ 1916ಕ್ಕೆ ಕರೆಮಾಡುವಂತೆ” ಎಂದು ಜಲಮಂಡಳಿ ಕೋರಿದೆ.

ತಾಪಮಾನ ಏರಿಕೆ ಮತ್ತು ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಈಗಾಗಲೇ ಗಮನಾರ್ಹವಾಗಿ ಕುಸಿದಿವೆ. ಹೀಗಾಗಿ, ಮುಂಬರುವ ತಿಂಗಳುಗಳಲ್ಲಿ ನೀರಿನ ಕೊರತೆಯ ಸಾಧ್ಯತೆಯ ಬಗ್ಗೆ ಎಚ್ಚರಿಸಿವೆ ತಜ್ಞರು ಎಚ್ಚರಿಸಿದ್ದಾರೆ ಎಂದು ಮಂಡಳಿ ತಿಳಿಸಿದೆ.

ಕಳೆದ ವರ್ಷ, ಸರಿಯಾಗಿ ಮಳೆಯಾಗದ ಪರಿಣಾಮ ಬೇಸಿಗೆಯಲ್ಲಿ ತೀವ್ರ ನೀರಿನ ಬಿಕ್ಕಟ್ಟನ್ನು ಎದುರಾಗಿತ್ತು. ಬೆಂಗಳೂರಿನ 14,000 ಬೋರ್‌ವೆಲ್‌ಗಳು ಒಣಗಿ ಹೋಗಿದ್ದವು. ದಿನಕ್ಕೆ 300-500 ದಶಲಕ್ಷ ಲೀಟರ್‌ ನೀರಿನ ಕೊರತೆಯನ್ನು ಎದುರಿಸಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X