ಬೆಂಗಳೂರು | ರೈಲಿನ ಮೂಲಕ ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿ ಬಂಧನ

Date:

Advertisements

ಹೊಸ ವರ್ಷಾಚರಣೆಗೆ ಮಾದಕ ವಸ್ತುವನ್ನು ಬೆಂಗಳೂರಿಗೆ ರೈಲಿನ ಮೂಲಕ ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೈಯಪ್ಪನಹಳ್ಳಿ, ಬೆಂಗಳೂರು ಗ್ರಾಮಾಂತರ ಮತ್ತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಗಳಲ್ಲಿ ಐದು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಒಡಿಸ್ಸಾದ ಸಿಮುಲಿಯಾ ಬಲೇಶ್ವರ ವಾಸಿ ನಿತ್ಯಾನಾದ್ ದಾಸ್(37), ತ್ರಿಪುರದ ನಾರ್ಥ್ ಭಾಗನ್ನ ರಾಜೇಶ್ ದಾಸ್(25), ಬಿಹಾರದ ಕುಮ್ರಾವಿಷ್ಣುಪುರದ ಅಮರ್ಜಿತ್ (23), ಒಡಿಸ್ಸಾದ ಬಾಲಾಂಗಿರ್ ಜಿಲ್ಲೆಯ ನಿಕೇಶ್ ರಾಣಾ (23), ಒಡಿಸ್ಸಾದ ಕೊಂದಮಾಲ್ನ ಜಲಂಧರ್ ಕನ್ಹರ್(20), ಬೈಕುಂಟಾ ಕನ್ಹರ್ ಹಾಗೂ ಸಾಗರ್ ಕನ್ಹರ್ ಎಂಬುವರನ್ನು ಬಂಧಿತ ಆರೋಪಿಗಳು.

ಹೊಸ ವರ್ಷ ಹಿನ್ನೆಲೆಯಲ್ಲಿ ಮಾದಕ ವಸ್ತು ಕಳ್ಳಸಾಗಣೆ ತಡೆಗೆ ರೈಲ್ವೆ ಪೊಲೀಸರು ಡಿ.22 ರಿಂದ ವಿಶೇಷ ತಂಡಗಳನ್ನು ರಚಿಸಿ ಬೆಂಗಳೂರಿಗೆ ಆಗಮಿಸುತ್ತಿದ್ದ ರೈಲುಗಳನ್ನು ಶೋಧ ಮಾಡುತ್ತಿದ್ದಾರೆ. ರೈಲ್ವೆ ಪೊಲೀಸ್ ಘಟಕದ ವಿಶೇಷ ತಂಡ ₹60 ಲಕ್ಷ ಮೌಲ್ಯದ 60.965 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.

Advertisements

ಪ್ರಶಾಂತಿ ಎಕ್ಸ್‌ಪ್ರೆಸ್, ಶೇಷಾದ್ರಿ ಎಕ್ಸ್‌ಪ್ರೆಸ್ ಮತ್ತು ಶಾಲಿಮಾರ್-ವಾಸ್ಕೋ-ಡ-ಗಾಮಾ ಅಮರಾವತಿ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಆರೋಪಿಗಳು ಅಕ್ರಮವಾಗಿ ಗಾಂಜಾವನ್ನು ಸಾಗಿಸುತ್ತಿದ್ದುದು ಪತ್ತೆಯಾಗಿದೆ.

ಬೆಂಗಳೂರಿನಲ್ಲಿ ಆರೋಪಿ ನಿತ್ಯಾನಂದ ದಾಸ್ ಮತ್ತು ರಾಜೇಶ್ ಫುಡ್ ಡೆಲೆವರಿ ಬಾಯ್ ಏಜೆಂಟ್ಗಳಂತೆ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ನೌಕರರ ಮೇಲಿದ್ದ 6,969 ಪ್ರಕರಣ ಖುಲಾಸೆ

ಈ ಸಂಬಂಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆ, ಬೈಯ್ಯಪ್ಪನಹಳ್ಳಿ, ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ, ಹುಬ್ಬಳ್ಳಿಯಲ್ಲಿ ತಲಾ 1 ಪ್ರಕರಣ ದಾಖಲಾಗಿದೆ. 7 ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

Download Eedina App Android / iOS

X