ಬೆಂಗಳೂರು | ರಾಜ್ಯದ ಎಲ್ಲ ಬಡವರಿಗೆ ಭೂಮಿ ದೊರೆಯದೆ ಹೋರಾಟ ನಿಲ್ಲದು: ಕುಮಾರ್ ಸಮತಳ

Date:

Advertisements
  • ಕಾಂಗ್ರೆಸ್‌ ಸರ್ಕಾರ ಜನಪರವಾಗಿ ಕೆಲಸ ಮಾಡಬೇಕು
  • ಹಿಂದಿನ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ, ಜನ ವಿರೋಧಿ ಸರ್ಕಾರ

“ಬಡವರು, ಭೂಮಿ ಮತ್ತು ಹಕ್ಕು ವಂಚಿತರು. ತಮ್ಮ‌ ಹಕ್ಕುಗಳಿಗಾಗಿ ಕಳೆದ 40-50 ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಯಾವ ಸರ್ಕಾರಗಳು ಅವರ ಹಕ್ಕುಗಳನ್ನು ಒದಗಿಸಲು ಮುಂದಾಗಿಲ್ಲ. ಇದು ನಿರ್ಣಾಯಕ ಹೋರಾಟವಾಗಿದೆ. ರಾಜ್ಯದ ಎಲ್ಲ ಬಡವರಿಗೆ ಭೂಮಿ, ವಸತಿ ದೊರೆಯದೆ ಹೋರಾಟ ನಿಲ್ಲುವುದಿಲ್ಲ. ಹಕ್ಕುಗಳನ್ನು ಒದಗಿಸುವುದಾಗಿ ಸರ್ಕಾರ ಭರವಸೆ ನೀಡಬೇಕು” ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕುಮಾರ್ ಸಮತಳ ಹೇಳಿದರು.

ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನದ ಮುಂಚೆ ಬೆಂಗಳೂರಿನಲ್ಲಿ ಹೋರಾಟ ಸಮಿತಿ ನಡೆಸುತ್ತಿರುವ ಬಡವರ ‘ಬರಿಹೊಟ್ಟೆ ಸತ್ಯಾಗ್ರಹ’ದಲ್ಲಿ ಅವರು ಮಾತನಾಡಿದರು. “ಭೂವಂಚಿತರ ಹಕ್ಕುಗಳಿಗಾಗಿ ಸ್ವಾತಂತ್ರ್ಯ ಸೇನಾನಿ ಎಚ್.ಎಸ್ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಬೆಂಗಳೂರಿನ‌ ಫ್ರೀಡಂ ಪಾರ್ಕ್‌ನಲ್ಲಿ 18 ದಿನಗಳ ಕಾಲ ಹೋರಾಟ ನಡೆಸಿದ್ದೇವೆ. ಬೆಳಗಾವಿ ಅಧಿವೇಶನದ ವೇಳೆಯೂ ಸತ್ಯಾಗ್ರಹ ನಡೆಸಿದ್ದೇವೆ. ಆದರೆ, ಸರ್ಕಾರಗಳು ಆಶ್ವಾಸನೆಗಳನ್ನಷ್ಟೇ ನೀಡಿ, ಜವಾಬ್ದಾರಿಯಿಂದ ನುಣುಚಿಕೊಂಡಿವೆ” ಎಂದು ಕಿಡಿಕಾರಿದರು.

“40-50 ವರ್ಷಗಳಿಂದ ಭೂಮಿ, ವಸತಿ ವಂಚಿತರಿ ಹೋರಾಟ ನಡೆಸುತ್ತಿದ್ದಾರೆ. ಅಂದಿನಿಂದಲೂ ಜನರು ಹಕ್ಕಿಗಾಗಿ ಕಾಯುತ್ತಿದ್ದಾರೆ. ಅದರೂ, ಯಾವ ಸರ್ಕಾರಗಳೂ ಅವರಿಗೆ ಭೂಮಿ ಹಕ್ಕು ಕೊಟ್ಟಿಲ್ಲ. ನಾವು ನಿರ್ಣಾಯಕ ಹೋರಾಟ ಮಾಡಬೇಕು. ಇಂದು ನಮ್ಮ ಬೇಡಿಕೆ ಈಡೇರದಿದ್ದರೆ, ನಾಳೆ (ಆಗಸ್ಟ್ 15 – ಸ್ವಾತಂತ್ರ್ಯ ದಿನ) ಎಲ್ಲರೂ ಉಪವಾಸ ಸತ್ಯಾಗ್ರಹ ಮಾಡಬೇಕು. ಭೂಮಿ ಇಲ್ಲದೆ, ವಸತಿ ಇಲ್ಲದೆ ಹೇಗೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಿಸಲು ಸಾಧ್ಯ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕರಾಳ ಶನಿವಾರ | ರಾಜ್ಯದಲ್ಲಿ ಅಪಘಾತಗಳಿಂದ 37 ಸಾವು ; ಎಡಿಜಿಪಿ ಟ್ವೀಟ್

“ಹಿಂದಿನ ಸರ್ಕಾರ ಭ್ರಷ್ಟ ಸರ್ಕಾರ, ಜನ ವಿರೋಧಿ ಸರ್ಕಾರವೆಂದು ಸೋಲಿಸಿದ್ದೇವೆ. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಸರ್ಕಾರ ಜನಪರವಾಗಿ ಕೆಲಸ ಮಾಡಬೇಕು. ಭೂಮಿ, ವಸತಿ ವಂಚಿತರಿಗೆ ಭೂಮಿ, ವಸತಿ ನೀಡಬೇಕು. ಅದಕ್ಕಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ಸಭೆ ಕರೆಯಬೇಕು” ಎಂದು ಒತ್ತಾಯಿಸಿದರು.

“ಉನ್ನತ ಮಟ್ಟದ ಸಭೆಗೆ ಕಂದಾಯ ಸಚಿವರು, ಅರಣ್ಯ ಇಲಾಖೆ ಸಚಿವರು, ವಸತಿ ಸಚಿವರು ಹಾಗೂ ಈ ಎಲ್ಲ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು ಇರಬೇಕು” ಎಂದು ಆಗ್ರಹಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X