ಬೆಂಗಳೂರು | ವಿದ್ಯಾರ್ಥಿಗಳು ಕನ್ನಡದ ಕಥೆ-ಕಾದಂಬರಿ ಓದಬೇಕು: ಶಾಸಕ ಎಂ. ಕೃಷ್ಣಪ್ಪ

Date:

Advertisements

ʼಪ್ರಸ್ತುತ ಕಾಲದ ವಿದ್ಯಾರ್ಥಿಗಳು ಕನ್ನಡದ ಕಥೆ-ಕಾದಂಬರಿಗಳನ್ನು ಓದುವುದನ್ನು ಮೈಗೂಡಿಸಿಕೊಂಡರೆ ಸಾಕು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬಹುದುʼ ಎಂದು ಮಾಜಿ ಸಚಿವ ಹಾಗೂ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಕರ್ನಾಟಕ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಮಾಹಿತಿ ಯುಗದಲ್ಲಿ ಯುವಕರು ಓದುವುದು ಕಡಿಮೆಯಾಗಿದ್ದು, ಮೊಬೈಲ್‌ನಲ್ಲಿ ಮುಳುಗಿ ಹೋಗಿದ್ದಾರೆ. ಅದರಿಂದ ಹೊರಬಂದು ಭಾಷೆಯ ಬೆಳವಣಿಗೆಗೆ ತೊಡಗಿಸಿಕೊಳ್ಳಬೇಕು. ರಾಜ್ಯದಲ್ಲಿ ದೇಶದ ಎಲ್ಲ ಜನರು ನೆಲೆಸಿದ್ದಾರೆ. ಅವರು ತಮ್ಮ ಮನೆಗಳಲ್ಲಿ ಮಾತೃಭಾಷೆಗಳಲ್ಲಿ ಮಾತನಾಡಲಿ, ಆದರೆ ಹೊರಗೆ ಬಂದಾಗ ಕನ್ನಡ ಭಾಷೆಯನ್ನು ಮಾತನಾಡಿ ಕನ್ನಡಕ್ಕೆ ಗೌರವ ನೀಡಬೇಕು” ಎಂದರು.

Advertisements

“ನಮ್ಮ ಸರ್ಕಾರ ಉನ್ನತ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುತ್ತಿದೆ. ಆದ್ದರಿಂದ ಇಂದು ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಾಗಿದೆ. ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು” ಎಂದು ಹೇಳಿದರು.

“ಬಹುತೇಕ ಮಹಾನ್ ನಾಯಕರ ಹೋರಾಟದ ಫಲವಾಗಿ ವಿಶಾಲ ಕರ್ನಾಟಕದ ಉಗಮವಾಗಿದೆ. ಇದರ ಆಚರಣೆಯೇ ಕರ್ನಾಟಕ ರಾಜ್ಯೋತ್ಸವ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಚಂದ್ರಯಾನ ಯಶಸ್ವಿಯಾದರೂ ಮಹಿಳೆಯರ ಮೇಲಿನ ಕೀಳಿರಿಮೆ ಕಡಿಮೆಯಾಗಿಲ್ಲ: ಎನ್‌ಎಫ್‌ಐಡಬ್ಲ್ಯೂ ರಾಜ್ಯಾಧ್ಯಕ್ಷೆ 

ʼನಿರಂತರ ಯೂಟ್ಯೂಬ್ ಟಿವಿʼ ಉದ್ಘಾಟನೆ: ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವತಿಯಿಂದ ವಿದ್ಯಾರ್ಥಿಗಳು ಆರಂಭಿಸಿರುವ ʼವಿಜಯ ನಿರಂತರʼ ಯೂಟ್ಯೂಬ್ ಟಿವಿಯನ್ನು ಶಾಸಕರು ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ವೈ ವೆಂಕಟೇಶಪ್ಪ, ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಗುಂಡೀಗೆರೆ ವಿಶ್ವನಾಥ್, ಸುಪ್ರಸಿದ್ಧ ಗಾಯಕ ಕಡಬಗೆರೆ ಮುನಿರಾಜು, ಕನ್ನಡ ಸಂಘದ ಸಂಚಾಲಕ ಕೆ ಭೈರಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X