ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಕೆಂಗೇರಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕೆಲಸಗಳನ್ನು ಕೈಗೊಳ್ಳಬೇಕಾಗಿರುವುದರಿಂದ ಸೆ.23 ರಿಂದ ಸೆ.30 ರವರೆಗೆ 8 ದಿನಗಳ ಕಾಲ ಚಿತಾಗಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಪಾಲಿಕೆ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ರಾಜರಾಜೇಶ್ವರಿ ನಗರ ವಲಯದ ಕಾರ್ಯಪಾಲಕ ಅಭಿಯಂತರರು, “ಕೆಂಗೇರಿ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಕಾರಣ ಮೃತ ದೇಹದ ದಹನ ಕ್ರಿಯೆಗಾಗಿ ಸಾರ್ವಜನಿಕರು ಸಮೀಪದಲ್ಲಿರುವ ಸುಮನಹಳ್ಳಿ, ಮೇಡಿ ಅಗ್ರಹಾರ ಅಥವಾ ಪೀಣ್ಯ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದು” ಎಂದು ತಿಳಿಸಿದ್ದಾರೆ.