ಬೆಂಗಳೂರು | ಕೊಂದು ಮೃತದೇಹವನ್ನು ಬೈಕ್‌ನಲ್ಲಿ ತಂದ ಆರೋಪಿ

Date:

Advertisements
  • ಸರ್ಜಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
  • ದ್ವಿಚಕ್ರ ವಾಹನದಲ್ಲಿ ಮೃತದೇಹ ಊರಿಗೆ ತಂದ ಆರೋಪಿ

ಪಾರ್ಟಿಗೆಂದು ಸ್ನೇಹಿತನನ್ನು ಕರೆದು, ಆತನನ್ನು ಕೊಲೆ ಮಾಡಿ ಮೃತದೇಹವನ್ನು ಬೈಕ್‌ನಲ್ಲಿ ಊರಿಗೆ ತಂದ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದೆ.

ಮೊಹಮ್ಮದ್ ಸಲೀಂ ಕೊಲೆಯಾದ ದುರ್ದೈವಿ. ಚರಣ್ ಮತ್ತು ನಾರಾಯಣಪ್ಪ ಬಂಧಿತ ಆರೋಪಿಗಳು.

ಜುಲೈ 31ರಂದು ಚರಣ್ ಎಂಬುವವನ ಬರ್ತಡೇ ಪಾರ್ಟಿ ಮಾಡಲಾಗುತ್ತಿತ್ತು. ಈ ವೇಳೆ, ಮೊಹಮ್ಮದ್ ಸಲೀಂ ಎಂಬಾತನನ್ನು ಪಾರ್ಟಿಗೆ ಕರೆದಿದ್ದಾರೆ. ಇದರ ಹಿಂದೆ ಆರೋಪಿಗಳು ಸಲೀಂನನ್ನು ಕೊಲ್ಲವ ಸಂಚು ರೂಪಿಸಿದ್ದರು.

Advertisements

ಸಲೀಂ ಪಾರ್ಟಿಗೆ ಬರುತ್ತಿದ್ದಂತೆ ಮದ್ಯಪಾನ ಮಾಡಿಸಿ ಬಳಿಕ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ. ಮೃತದೇಹವನ್ನು ಅಲ್ಲಿಯೇ ಬಿಟ್ಟು ತೆರಳಿದ್ದಾರೆ. ಆರೋಪಿ ನಾರಾಯಣಪ್ಪ ಊರಿಗೆ ತೆರಳಿದ ಬಳಿಕ ಮನೆಯವರೆಲ್ಲ ಸಲೀಂ ಎಲ್ಲಿ ಎಂದು ವಿಚಾರಿಸಿದಾಗ ನಾರಾಯಣಪ್ಪ ಮತ್ತೆ ಮೃತದೇಹ ಇರುವ ಸ್ಥಳಕ್ಕೆ ತೆರಳಿ ತನ್ನದೆ ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನದಲ್ಲಿ ಮೃತದೇಹವನ್ನು ಊರಿಗೆ ತಂದಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮದ್ಯ ಸೇವಿಸಿ ಟ್ಯಾಂಕರ್ ಚಾಲನೆ; ಪಾದಾಚಾರಿಗಳ ಸಾವು

ಮೃತದೇಹ ಕಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಸರ್ಜಾಪುರ ಠಾಣೆಯ ಪೊಲೀಸರು ನಾರಾಯಣಪ್ಪ ಮತ್ತು ಚರಣ್ ಅವರನ್ನು ವಶಕ್ಕೆ ಪಡೆದು ವಿಚಾರ ನಡೆಸುತ್ತಿದ್ದಾರೆ.

ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅನೈತಿಕ ಸಂಬಂಧದ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X