ಬೆಂಗಳೂರು | ಕಳ್ಳನನ್ನು ಬಂಧಿಸಿ ಹತ್ಯೆಗೈದ ಆರೋಪಿಗಳು

Date:

Advertisements
  • ಸ್ಕ್ರ್ಯಾಪ್ ಅಂಗಡಿಯಲ್ಲಿ ಪದೇಪದೆ ಕಳ್ಳತನ ಮಾಡುತ್ತಿದ್ದ ಸೆಫುಲ್ಲಾ
  • ಮಗನ ಕಾಣೆ ಬಗ್ಗೆ ಮೃತನ ತಾಯಿ ಕೆ.ಜಿ ಹಳ್ಳಿ ಪೊಲೀಸ್‌ ಠಾಣೆಗೆ ದೂರು

ಕಳೆದ ತಿಂಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದ ವ್ಯಕ್ತಿಯೊಬ್ಬನ ಸಾವು ಪ್ರಕರಣಕ್ಕೆ, ಇದೀಗ ತಿರುವು ಸಿಕ್ಕಿದೆ. ಕಳ್ಳನೊಬ್ಬನನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.

ಬೆಂಗಳೂರಿನ ರಾಮಮೂರ್ತಿನಗರದ ಸಾದಹಳ್ಳಿ ಬಳಿಯ ಚರಂಡಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿತ್ತು‌. ಮೃತ ಯುವಕನನ್ನು ಸೆಫುಲ್ಲಾ ಎಂದು ಗುರುತಿಸಲಾಗಿತ್ತು. ರಾಮಮೂರ್ತಿನಗರ ಪೊಲೀಸರು ಅನುಮಾನಾಸ್ಪಾದ ಸಾವು ಎಂದು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದರು.

ಪೊಲೀಸ್ ತನಿಖೆ ವೇಳೆ, ಇದೊಂದು ಕೊಲೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಪ್ರಶಾಂತ್, ಜಬಿ ಹಾಗೂ ಶಾಬಾಜ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisements

ಪ್ರಕರಣದ ಹಿನ್ನಲೆ

ಸೆಫುಲ್ಲಾ ಕಾಣೆಯಾಗಿದ್ದಾನೆಂದು ಆತನ ತಾಯಿ ಕೆ.ಜಿ ಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಅಲ್ಲದೆ, ಸೆಫುಲ್ಲಾ ಕಳ್ಳತನ ಮಾಡಿದ್ದಾನೆಂದು ಆರೋಪಿಸಿ, ಪ್ರಶಾಂತ್ ಹಾಗೂ ಆತನ ಸಹಚರರು ಕೂಡಿ ಹಾಕಿ ಹಲ್ಲೆ ನಡೆಸಿದ್ದರು ಎಂದೂ ಮೃತನ ತಾಯಿ ದೂರಿನಲ್ಲಿ ತಿಳಿಸಿದ್ದರು. ಬಳಿಕ, ಪ್ರಶಾಂತ್​ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಆತ ಸತ್ಯ ಬಾಯಿಬಿಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕನ್ನಡಿಗರ ಭಾವನೆಗಳೊಂದಿಗೆ ಅಮೂಲ್‌ ಆಟವಾಡುತ್ತಿದೆ; ಕರವೇ ಆರೋಪ

ಕೆ.ಜಿ ಹಳ್ಳಿಯಲ್ಲಿ ಪ್ರಶಾಂತ ಎಂಬುವವರಿಗೆ ಸೇರಿದ್ದ ಸ್ಕ್ರ್ಯಾಪ್ ಅಂಗಡಿಯಲ್ಲಿ ಪದೇಪದೆ ಕಳ್ಳತನವಾಗುತ್ತಿತ್ತು. ಕಳ್ಳನನ್ನು ಹಿಡಿಯಲು ಮೂವರು ಬಂಧಿತ ಆರೋಪಿಗಳು ಪ್ರಯತ್ನಿಸುತ್ತಿದ್ದರು. ಅಂಗಡಿಯಲ್ಲಿ ಕಳ್ಳತನ ಮಾಡುವಾಗ ಸೆಫುಲ್ಲಾನನ್ನು ಮೂವರೂ ಸೇರಿ ಹಿಡಿದಿದ್ದರು. ಒಂದು ವಾರದ ವರೆಗೆ ಆತನನ್ನು ಕೂಡಿ ಹಾಕಿ ನಿರಂತರವಾಗಿ ಹಲ್ಲೆ ಮಾಡಿದ್ದಾರೆ. ಆತ ಸಾವನ್ನಪ್ಪಿದ ಬಳಿಕ ಸೆಫುಲ್ಲಾನನ್ನು ಚರಂಡಿಯೊಂದರಲ್ಲಿ ಎಸೆದಿದ್ದರು‌ ಎಂದು ವಿಚಾರಣೆ ವೇಳೆ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X