ಬೆಂಗಳೂರು | 1.1 ಲಕ್ಷ ದಾಟಿದ ಯುವ ಮತದಾರರ ಸಂಖ್ಯೆ

Date:

  • ಬೆಂಗಳೂರಿನಲ್ಲಿ ಈ ಹಿಂದೆ ಯುವ ಮತದಾರರ ಸಂಖ್ಯೆ 54,000 ಇತ್ತು
  • ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳ ಬಳಕೆ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಮತದಾನದಲ್ಲಿ ಪಾಲ್ಗೊಳ್ಳುವಂತೆ ಸೆಳೆಯಲು ಚುನಾವಣೆ ಆಯೋಗ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಪರಿಣಾಮ, ಬೆಂಗಳೂರಿನಲ್ಲಿ 54,000 ಇದ್ದ ಯುವ ಮತದಾರರ ಸಂಖ್ಯೆ ಇದೀಗ 1.1 ಲಕ್ಷ ದಾಟಿದೆ.

- Advertisement -

“ಆನೇಕಲ್, ಬೆಂಗಳೂರು ದಕ್ಷಿಣ, ಯಶವಂತಪುರ, ದಾಸರಹಳ್ಳಿ, ಬ್ಯಾಟರಾಯನಪುರ, ಮಹದೇವಪುರ ಹಾಗೂ ಯಲಹಂಕ ಸೇರಿದಂತೆ ಒಟ್ಟು 28 ವಿಧಾನಸಭಾ ಕ್ಷೇತ್ರಗಳನ್ನು ಬೆಂಗಳೂರು ಜಿಲ್ಲೆ ಒಳಗೊಂಡಿದೆ. ನಗರದಲ್ಲಿ 54,000 ಇದ್ದ ಯುವ ಮತದಾರರ ಸಂಖ್ಯೆ ಇದೀಗ 1.1 ಲಕ್ಷ ದಾಟಿದೆ” ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂಗಪ್ಪ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಕ್ಕಳ ಕಳ್ಳಿಯನ್ನು ಬಂಧಿಸಿದ ಕಲಾಸಿಪಾಳ್ಯ ಪೊಲೀಸರು

“ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಲು ಯುವ ಮತದಾರರು ಮುಂದೆ ಬಂದಿದ್ದಾರೆ. ಈ ಹಿಂದೆ ನಗರದಲ್ಲಿ 16,000 ಲಿಂಗತ್ವ ಅಲ್ಪಸಂಖ್ಯಾತ ಮತದಾರರಿದ್ದರು. ಈಗ ಅವರ ಸಂಖ್ಯೆ 30,000ಕ್ಕೆ ಏರಿಕೆ ಕಂಡಿದೆ. ಶೇ.53ರಷ್ಟು ಹೆಚ್ಚಳವಾಗಿದೆ” ಎಂದರು.

“ಮತದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಈಗಾಗಲೇ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳಲಾಗುತ್ತಿದೆ. ಕೈಗಾರಿಕೆಗಳು, ವಸತಿ ಸಮುಚ್ಚಯಗಳು, ಕಾಲೇಜುಗಳು ಮತ್ತು ಬ್ಯಾಂಕ್‌ಗಳ ಆವರಣದಲ್ಲಿ ಮತದಾನ ಬಗ್ಗೆ ಜಾಗೃತಿ ಚಟುವಟಿಕೆಗಳನ್ನು ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮಮಂದಿರದ ಬಾಣ ಖಾಲಿ: 2029ರ ಲೋಕಸಭೆಗೆ ‘ಯುಸಿಸಿ’ ಅಸ್ತ್ರಕ್ಕಾಗಿ ತಡಕಾಡುತ್ತಿರುವ ಅಮಿತ್ ಶಾ

ರಾಮಮಂದಿರದ ಭಾವನಾತ್ಮಕ ಅಲೆ ಚುನಾವಣೆಯಲ್ಲಿ ತಣಿಯುತ್ತಿದ್ದಂತೆ, 'ಮೋಶಾ' ಜೋಡಿ 2029ಕ್ಕಾಗಿ ಸಮಾನ...

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...