ಬೆಂಗಳೂರು | ಯುವಕನ ಕಿರುಕುಳಕ್ಕೆ ಬೇಸತ್ತು ಠಾಣೆ ಮೆಟ್ಟಿಲೇರಿದ ಯುವತಿ

Date:

  • ಕಂಪನಿ ಆಡಳಿತ ಮಂಡಳಿ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು
  • ಕಿರುಕುಳ ನೀಡಿದ ಯುವಕನ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು

ರಾಜಧಾನಿ ಬೆಂಗಳೂರಿನಲ್ಲಿ ಯುವಕನ ಕಾಟಕ್ಕೆ ಬೇಸತ್ತು ಯುವತಿಯೊಬ್ಬಳು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ಯುವಕನಿಂದ ರಕ್ಷಣೆ ಹಾಗೂ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾಳೆ.

- Advertisement -

ದೂರು ನೀಡಿರುವ ಯುವತಿ ಮಹಾರಾಷ್ಟ್ರ ಮೂಲದವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೆಲೆಸಿದ್ದರು. ಬ್ಲಾಕ್ ಬೆರಿಸ್​ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆರೋಪಿ ಯುವಕ ಅಲ್ ಮೆಹಪ್ಯೂಸ್ ಬರಪೂಯಾ ಅಸ್ಸಾಂ ಮೂಲದವನಾಗಿದ್ದು, ಗಾರ್ಮೆಂಟ್ಸ್ ರಿಟೇಲ್​ನಲ್ಲಿ ಕೆಲಸ ಮಾಡುತ್ತಿದ್ದಾರೆ. ಆತ ಕೊರಮಂಗಲದಲ್ಲಿ ನೆಲೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯ ಪ್ರಾರಂಭದಲ್ಲಿ ಯುವಕ ತನ್ನ ಹೆಸರು ಮೆಲ್ಬಿನ್, ತಾನೂ ಕ್ರಿಶ್ಚಿಯನ್ ಪಂಗಡಕ್ಕೆ ಸೇರಿದವನು ಎಂದು ಹೇಳಿಕೊಂಡಿದ್ದ. ಆಕಸ್ಮಿಕವಾಗಿ ಅಲ್ ಮೆಹಪ್ಯೂಸ್​ನ ಆಧಾರ್ ಕಾರ್ಡ್ ಯುವತಿಯ ಕಣ್ಣಿಗೆ​ ಬಿದ್ದಿದ್ದು, ಆತ ಕ್ರಿಶ್ಚಿಯನ್ ಅಲ್ಲ, ಮುಸ್ಲಿಂ ಎಂದು ಆಕೆಗೆ ಗೊತ್ತಾಗಿದೆ. ಯುವಕನ ಮೋಸದ ಬಗ್ಗೆ ತಿಳಿದು ಯುವತಿ ಆತನಿಂದ ದೂರವಾಗಿದ್ದಾಳೆ.

ಬಳಿಕ ಯುವಕ ಅಲ್ ಮೆಹಪ್ಯೂಸ್ ಯುವತಿಗೆ ಕಿರುಕುಳ ನೀಡಲು ಆರಂಭಿಸಿದ್ದು, ರಾತ್ರಿ ವೇಳೆ ಯುವತಿಯ ಮನೆಯ ಬಳಿ ತೆರಳಿ ಗಲಾಟೆ ಮಾಡಿದ್ದಾನೆ. ಯುವತಿ ಸೇರಿದಂತೆ ಕುಟುಂಬದವರಿಗೆ ಕೊಲೆ ಬೆದರಿಕೆ ಹಾಕಿದ್ದಾನೆ. ಯುವತಿ ಕೆಲಸ ಮಾಡುತ್ತಿದ್ದ ಕಂಪನಿ ಮಾಲೀಕರಿಗೆ ಬಳಿ ಹೋಗಿ, ಆಕೆಯ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾನೆ. “ಆತನೊಂದಿಗೆ ತನ್ನ ಸಹೋದ್ಯೋಗಿಗಳು ಸೇರಿಕೊಂಡಿದ್ದಾರೆ” ಎಂದು ಯುವತಿ ದೂರಿದ್ದಾರೆ.

ಕೋರಮಂಗಲ ಬ್ಲಾಕ್ ಬೇರಿಸ್ ಸ್ಟೋರ್ ಟೀಮ್ ಮಹಮದ್ ಸಕ್ಕೈನ್, ಸೈಯ್ಯದ್, ಮುಜಿಬ್ ಸೈಫ್ ಶೇಖ್, ಅಸ್ಲಂ ತಬ್ರೆಜ್ ಇವರೆಲ್ಲರು ಸೇರಿ ತನ್ನ ವೃತ್ತಿ ಜೀವನವನ್ನು ಹಾಳು ಮಾಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೊಸ ಬಸ್‌ ಖರೀದಿಗೆ ಮುಂದಾದ ಸಾರಿಗೆ ನಿಗಮ

ಕೋರಮಂಗಲ ಬ್ಲಾಕ್ ಬೇರಿಸ್ ಸ್ಟೋರ್ ಕಂಪನಿಯ ಜಿಎಂ ಸಾಯಾಕ್ ಅರೋರಾ ಯುವತಿಗೆ ಅವ್ಯಾಚ ಶಬ್ದಗಳಿಂದ ನಿಂದನೆ ಮಾಡಿದ್ದಲ್ಲದೆ, ನಾಲ್ಕು ಲಕ್ಷ ನೀಡಿ ಸ೦ಧಾನ ಮಾಡಿಕೊಳ್ಳುವಂತೆ ಒತ್ತಡ ಹೇರಿದ್ದಾರೆ. ಈಗಾಗಲೇ, ಟೈಪ್ ಮಾಡಿದ್ದ ಪ್ರತಿಯನ್ನು ಮುಂದಿಟ್ಟು ಸಹಿ ಹಾಕುವಂತೆ ಒತ್ತಡ ಹೇರಿದ್ದಾರೆ. ಹಣ ನೀಡದಿದ್ದರೆ ಕೆಲಸದಿಂದ ತೆಗೆಯುವುದಾಗಿ ಹೆಚ್​ಆರ್ ಅಂಕುಷ್ ಠಾಕೂರ್, ಎಂಐಎಸ್ ಅವಿನಾಶ್ ವರ್ಮ, ಜಿಎಂ ಸಯಾಕ್ ಆರೋರಾ, ಪ್ರಾಂಚೈಸಿ ಹರೀಶ್ ಎಂಬವರು ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಯುವತಿ ದೂರಿನಲ್ಲಿ ವಿವರಿಸಿದ್ದಾರೆ.

ಕಿರುಕುಳ ನೀಡಿದ ಯುವಕನ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಂಪನಿ ಆಡಳಿತ ಮಂಡಳಿ ವಿರುದ್ಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...