ಬಿಡಬ್ಲೂಎಸ್‌ಎಸ್‌ಬಿ ಗುಂಡಿಗೆ ಎರಡೂವರೆ ವರ್ಷದ ಮಗು ಬಿದ್ದು ಸಾವು

Date:

Advertisements
  • ಬಿಡಬ್ಲೂಎಸ್‌ಎಸ್‌ಬಿ ಕಾಮಗಾರಿ ಹೆಸರಿನಲ್ಲಿ ಗುಂಡಿ ತೆಗೆದು ತಿಂಗಳು ಕಳೆದಿದೆ
  • ಬೆಂಗಳೂರಿನ ಗೊಲ್ಲರಹಟ್ಟಿ ಪೈಪ್‌ಲೇನ್ ಬಳಿ ಈ ಘಟನೆ ನಡೆದಿದೆ

ರಾಜ್ಯ ರಾಜಧಾನಿಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (ಬಿಡಬ್ಲ್ಯೂಎಸ್ಎಸ್‌ಬಿ) ಗುಂಡಿಗೆ ಎರಡೂವರೆ ವರ್ಷದ ಮಗು ಬಿದ್ದು ಮೃತಪಟ್ಟಿದೆ. ಬ್ಯಾಡರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಗರದ ಗೊಲ್ಲರಹಟ್ಟಿ ಪೈಪ್‌ಲೇನ್ ಬಳಿ ಈ ಘಟನೆ ನಡೆದಿದೆ. ಹನುಮಾನ ಮತ್ತು ಹಂಸ ದಂಪತಿಯ ಎರಡೂವರೆ ವರ್ಷದ ಮಗು ಕಾರ್ತಿಕ್ ಬಿಡಬ್ಲ್ಯೂಎಸ್ಎಸ್ ಬಿ ಅಧಿಕಾರಿಗಳ‌ ನಿರ್ಲಕ್ಷ್ಯಕ್ಕೆ ಗುಂಡಿಗೆ ಬಿದ್ದು ಸಾವನ್ನಪ್ಪಿದೆ.

ಹನುಮಾನ್ ಮತ್ತು ಹಂಸ ದಂಪತಿ ಮೂಲತಃ ಉತ್ತರ ಪ್ರದೇಶದವರು. ಜೀವನೋಪಾಯಕ್ಕಾಗಿ ಬೆಂಗಳೂರಿಗೆ ಕೆಲಸ ಅರಿಸಿ ಬಂದು ಗೊಲ್ಲರಹಟ್ಟಿಯಲ್ಲಿ ನೆಲೆಸಿದ್ದರು. ಹನುಮಾನ್ ಪೇಂಟಿಂಗ್ ಕೆಲಸ ಮಾಡುತ್ತಿದ್ದಾರೆ. ಸೋಮವಾರ ಬೆಳಗ್ಗೆ ಕೆಲಸದ ಹಿನ್ನೆಲೆ, ಹನುಮಾನ್ ಮನೆಯಿಂದ ಹೊರ ಹೋಗಿದ್ದಾರೆ. ಈ ವೇಳೆ, ಪತ್ನಿ ಹಂಸ ಹಾಗೂ ಮಗು ಕಾರ್ತಿಕ್ ಮನೆಯಲ್ಲಿದ್ದರು. ಆಟವಾಡಲು ಮಗು ಕಾರ್ತಿಕ್‌ ಮನೆಯಿಂದ ಹೊರಬಂದಿದೆ. ಈ ಸಮಯದಲ್ಲಿ ಬಿಡಬ್ಲ್ಯೂಎಸ್ಎಸ್‌ಬಿಯ ಕಾಮಗಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮತದಾನದ ದಿನ ಕಾರ್ಮಿಕರಿಗೆ ಸಂಬಳ ಸಹಿತ ರಜೆ

ಬಿಡಬ್ಲೂಎಸ್‌ಎಸ್‌ಬಿ ಕಾಮಗಾರಿ ಹೆಸರಿನಲ್ಲಿ ಗುಂಡಿ ತೆಗೆದು ತಿಂಗಳು ಕಳೆದಿದೆ. ಆದರೂ, ಅಧಿಕಾರಿಗಳು ಕಾಮಗಾರಿಯನ್ನು ಸಂಪೂರ್ಣ ಮಾಡಿಲ್ಲ. ಗುಂಡಿಯ ಸುತ್ತ ತಡೆಗೋಡೆಯನ್ನು ನಿರ್ಮಿಸಿಲ್ಲ.

ಮಗು ಸಾವಿಗೆ ಕಾರಣರಾದ ಬಿಡಬ್ಲ್ಯೂಎಸ್ಎಸ್ ಬಿ ಇಂಜಿನಿಯರ್ ಹಾಗೂ ಗುತ್ತಿಗೆದಾರನ ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X